63 ಪ್ರಯಾಣಿಕರೊಂದಿಗೆ ಆಗಮಿಸಿದ ಮಸ್ಕತ್‌ ವಿಮಾನ  


Team Udayavani, May 20, 2020, 8:53 PM IST

63 ಪ್ರಯಾಣಿಕರೊಂದಿಗೆ ಆಗಮಿಸಿದ ಮಸ್ಕತ್‌ ವಿಮಾನ  

ಸಾಂದರ್ಭಿಕ ಚಿತ್ರ.

ಮಂಗಳೂರು: ಕೋವಿಡ್‌-19 ಸಂಕಷ್ಟದ ಹಿನ್ನೆಲೆಯಲ್ಲಿ ತಾಯ್ನಾಡಿಗೆ ಬರಲು ಬಯಸಿದ ಸುಮಾರು 63 ಪ್ರಯಾಣಿಕರಿರುವ “ವಂದೇ ಭಾರತ’ ಯೋಜನೆಯ ಏರ್‌ಇಂಡಿಯಾ ವಿಮಾನ ಬುಧವಾರ ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಮಸ್ಕತ್‌ನಿಂದ ಕನ್ನಡಿಗರನ್ನು ಕರೆತಂದ ಮೊದಲ (ಐಎಕ್ಸ್‌ 817/818) ವಿಮಾನ ಇದಾಗಿದ್ದು, ಒಟ್ಟು 176 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಸ್ಕತ್‌ನಿಂದ ಹೊರಟ ಈ ವಿಮಾನ ಸಂಜೆ ಬೆಂಗಳೂರು ಏರ್‌ಪೋರ್ಟ್‌ಗೆ ಬಂದು ಅಲ್ಲಿಂದ 7.30ಕ್ಕೆ ಹೊರಟು ರಾತ್ರಿ 8ಕ್ಕೆ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದೆ.

2 ವರ್ಷಕ್ಕಿಂತ ಕಡಿಮೆ ಪ್ರಾಯದ ಎರಡು ಮಗು ಹಾಗೂ 176 ಪ್ರಯಾಣಿಕರು ಮಸ್ಕತ್‌ನಿಂದ ಆಗಮಿಸಿದ್ದು ಇದರಲ್ಲಿ 2 ಮಗು ಹಾಗೂ 113 ಮಂದಿ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹಾಗೂ ಉಳಿದಂತೆ, ಕರಾವಳಿ ಭಾಗದ 63 ಪ್ರಯಾಣಿಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ. ಗರ್ಭಿಣಿಯರು, ಕೆಲಸ ಕಳೆದುಕೊಂಡವರು, ಅನಾರೋಗ್ಯದಿಂದಾಗಿ ಔಷಧಿ ಪಡೆಯಲಿರುವವರು ವಿಮಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.

ವಿದೇಶದಿಂದ ಆಗಮಿಸಿದ ಪ್ರಯಾಣಿಕರ ಆರೋಗ್ಯ ತಪಾಸಣೆ ಹಾಗೂ ವ್ಯವಸ್ಥೆಗಳ ಪರಿಶೀಲನೆಗಾಗಿ ಮಂಗಳೂರು ಏರ್‌ಪೋರ್ಟ್‌ನಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಅಧಿಕಾರಿಗಳ ತಂಡ ನಿಯೋಜಿಸಲಾಗಿತ್ತು. ವಿಮಾನ ಬಂದ ತತ್‌ಕ್ಷಣ ಎಲ್ಲಾ ಪ್ರಯಾಣಿಕರಿಗೆ ತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಆರೋಗ್ಯ ತಪಾಸಣೆ ಆದ ಬಳಿಕ ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗಿತ್ತು. ಏರ್‌ಪೋರ್ಟ್‌, ಏರ್‌ಲೈನ್ಸ್‌ ಹಾಗೂ ಭದ್ರತಾ ಪಡೆಯವರ ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಲಾಗಿತ್ತು.

ಮಸ್ಕತ್‌ನಿಂದ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಮಂಗಳೂರಿನಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದ್ದು, ಉಡುಪಿ ಹಾಗೂ ಇತರ ಜಿಲ್ಲೆಯ ಪ್ರಯಾಣಿಕರಿಗೆ ಅವರವರ ಜಿಲ್ಲೆಗಳಲ್ಲಿ ಕ್ವಾರಂಟೈನ್‌ ಮಾಡಲು ಆಯಾ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿದೆ. ಪ್ರಯಾಣಿಕರ ಪೈಕಿ ಯಾರೆಲ್ಲ ಹಣ ಪಾವತಿಸುವ ಷರತ್ತಿಗೊಳಪಟ್ಟು ಹೊಟೇಲುಗಳಲ್ಲಿ ಕ್ವಾರಂಟೈನ್‌ ಆಗಲು ಬಯಸಿ ಒಪ್ಪಿಗೆ ಪತ್ರ (ಅಂಡರ್‌ಟೇಕಿಂಗ್‌) ನೀಡಿದ್ದಾರೋ ಅವರಿಗೆ ಹೊಟೇಲ್‌ ಕ್ವಾರಂಟೈನ್‌ ಮಾಡಲಾಗಿದೆ. ಈ ಹೊಟೇಲ್‌ಗ‌ಳಿಗೆ ನೋಡೆಲ್‌ ಆಫೀಸರ್‌ಗಳನ್ನೂ ನಿಯೋಜಿಸಲಾಗಿದೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.