ಚಂದ್ರಯಾನ-3 ರ ಹಿಂದಿನ ನಾರಿ ಶಕ್ತಿ ರಿತು ಕರಿಧಾಲ್
Team Udayavani, Jul 15, 2023, 7:06 AM IST
ನವದೆಹಲಿ: ಚಂದ್ರಯಾನ-3 ಉಡಾವಣೆಯ ಯಶಸ್ಸಿನ ಹಿಂದೆ ಇಸ್ರೋದ ಹಲವು ವಿಜ್ಞಾನಿಗಳ ಶ್ರಮವಿದೆ. ಅದರಲ್ಲೂ ಈ ಯೋಜನೆಯ ಹೊಣೆ ಹೊತ್ತಿರುವ ಡಾ.ರಿತು ಕರಿಧಾಲ್ ಶ್ರೀವಾಸ್ತವ ಎಂಬ ಮಹಿಳಾ ವಿಜ್ಞಾನಿಯತ್ತ ಎಲ್ಲರ ಗಮನ ನೆಟ್ಟಿದೆ.
ಇಸ್ರೋದ ಹಿರಿಯ ವಿಜ್ಞಾನಿಗಳ ಪೈಕಿ ಒಬ್ಬರಾಗಿರುವ ಡಾ.ರಿತು ಅವರು ಈ ಮಿಷನ್ನ ನೇತೃತ್ವ ವಹಿಸಿದವರು. ಇವರು “ಭಾರತದ ರಾಕೆಟ್ ಮಹಿಳೆ’ ಎಂದೇ ಖ್ಯಾತರಾಗಿದ್ದಾರೆ. ಚಂದ್ರಯಾನ-2 ಯೋಜನೆಯ ನಿರ್ದೇಶಕಿಯಾಗಿದ್ದ ರಿತು ಅವರು, ಮಂಗಳಯಾನ ಯೋಜನೆಯ ಉಪ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು. ಲಕ್ನೋದಲ್ಲಿ ಜನಿಸಿದ ಇವರು, ಲಕ್ನೋ ವಿವಿಯಲ್ಲೇ ಭೌತಶಾಸ್ತ್ರದಲ್ಲಿ ಬಿಎಸ್ಸಿ ಪದವಿ ಪಡೆದರು. ಬಳಿಕ ಬೆಂಗಳೂರಿನ ಐಐಎಸ್ಸಿಯಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಂಇ ಪದವಿ ಪಡೆದು, 1997ರಲ್ಲಿ ಇಸ್ರೋಗೆ ಸೇರಿದರು.
ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ ರಿತು ಶ್ರೀವಾಸ್ತವ ಅವರಿಗೆ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರು, “ಇಸ್ರೋ ಯುವ ವಿಜ್ಞಾನಿ ಪ್ರಶಸ್ತಿ’ ನೀಡಿ ಗೌರವಿಸಿದ್ದರು. ಬಳಿಕ “ಇಸ್ರೋ ಟೀಂ ಅವಾರ್ಡ್ ಫಾರ್ ಮಾಮ್ ಇನ್ 2015′, “ಎಎಸ್ಐ ಟೀಂ ಅವಾರ್ಡ್’, “ವಿಮೆನ್ ಅಚೀವರ್ಸ್ ಇನ್ ಏರೋಸ್ಪೇಸ್ 2017′ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ರಿತು ಅವರಿಗೆ ಸಂದಿವೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಡಾ.ರಿತು ಕರಿಧಾಲ್ ಅವರ ಸುಮಾರು 20 ಪ್ರಬಂಧಗಳು ಪ್ರಕಟಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.