![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 4, 2024, 11:03 PM IST
ದಾಂತೇವಾಢ: ಛತ್ತೀಸ್ಗಢದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಶುಕ್ರವಾರ ಪೊಲೀಸ್ ಪಡೆಗಳು ಬಸ್ತಾರ್ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಎನ್ಕೌಂಟರ್ನಲ್ಲಿ 28 ಮಂದಿ ನಕ್ಸಲರು ಹತರಾಗಿದ್ದಾರೆ.
ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ, ನಾರಾಯಣಪುರ ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಭುಜ್ಮಾದ್ನ ತುಲುತುಲಿ ಮತ್ತು ನೆಂದೂರ್ ಗ್ರಾಮಗಳ ನಡುವಿನ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತರ್ ಪ್ರದೇಶದ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಎಕೆ 47, ಶಸ್ತ್ರಾಸ್ತ್ರಗಳ ವಶ
ಛತ್ತೀಸ್ಗಢ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಕಾರ್ಯಾಚರಣೆ ವೇಳೆ ಎಕೆ 47 ಮತ್ತು ಸ್ವಯಂ ಲೋಡಿಂಗ್ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳ ವಶಪಡಿಸಿಕೊಳ್ಳಲಾಗಿದೆ ಎಂದರು.
185 ನಕ್ಸಲರ ಎನ್ಕೌಂಟರ್
ದಾಂತೇವಾಡ ಮತ್ತು ನಾರಾಯಣಪುರ ಸೇರಿ ಒಟ್ಟು ಏಳು ಜಿಲ್ಲೆಗಳ ಒಳಗೊಂಡ ಬಸ್ತಾರ್ ಪ್ರದೇಶದಾದ್ಯಂತ, ಭದ್ರತಾ ಪಡೆಗಳು ಹಾಗೂ ಪೊಲೀಸರೊಂದಿಗಿನ ವಿವಿಧ ಗುಂಡಿನ ಕಾಳಗದಲ್ಲಿ ಕನಿಷ್ಠ 185 ನಕ್ಸಲರ ಎನ್ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಏ.16 ರಂದು ಸಹ, ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ಸಂಘಟನೆಯ ಹಿರಿಯ ನಕ್ಸಲ್ಗಳು ಸೇರಿದಂತೆ 29 ನಕ್ಸಲೀಯರು ಎನ್ಕೌಂಟರ್ ಮಾಡಿದ್ದರು.
ನಕ್ಸಲಿಸಂ ಸಂಪೂರ್ಣ ನಿರ್ನಾಮ ಮಾಡುವೆವು: ಛತ್ತೀಸ್ಗಢ ಸಿಎಂ
ಒಂದು ದೊಡ್ಡ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ್ದೇವೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲ ಪೊಲೀಸ್ ಸಿಬ್ಬಂದಿಗೆ ಶುಭಾಶಯಗಳು.. ಭದ್ರತಾ ಸಿಬ್ಬಂದಿ ಸಾಧಿಸಿದ ಈ ಮಹಾನ್ ಯಶಸ್ಸು ಶ್ಲಾಘನೀಯವಾದ್ದು, ಅವರ ಧೈರ್ಯ, ಅದಮ್ಯ ಶೌರ್ಯಕ್ಕೆ ನಾನು ವಂದಿಸುತ್ತೇನೆ. ರಾಜ್ಯದಲ್ಲಿ ನಕ್ಸಲಿಸಂ ತನ್ನ ಕೊನೆಯ ಉಸಿರನ್ನಷ್ಟೇ ಉಳಿಸಿಕೊಂಡಿದೆ. ರಾಜ್ಯದಲ್ಲಿ ನಕ್ಸಲಿಸಂ ಸಂಪೂರ್ಣ ನಿರ್ನಾಮ ಮಾಡುತ್ತೇವೆ.
ನಮ್ಮ ಡಬಲ್ ಎಂಜಿನ್ ಸರ್ಕಾರದ ಗುರಿಯಾಗಿದೆ. ನಕ್ಸಲಿಸಂ ನಾಶ ಮಾಡುವ ಉದ್ದೇಶದಿಂದ ಕಳೆದ 9 ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿ ಮಾರ್ಚ್ 2026ರೊಳಗೆ ನಕ್ಸಲಿಸಂನ್ನು ಕೊನೆಗಾಣಿಸುವ ಗುರಿ ಸಾಧಿಸುವ ಮಾತುಗಳನ್ನು ಹೇಳಿದ್ದು, ಅದಕ್ಕೆ ಪೂರಕವಾದ ಕೆಲಸದಲ್ಲಿ ನಿರತರಾಗಿದ್ದೇವೆ ಎಂದು ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.
#WATCH | Chhattisgarh CM Vishnu Deo Sai says, “…It’s a big operation. I congratulate all the police personnel and I bow to their valour… Naxalism is taking its last breath… Naxalism is certainly going to be eliminated from the state…Union Home Minister Amit Shah has… https://t.co/ZOQjtz46YP pic.twitter.com/a40R6Wgn0b
— ANI (@ANI) October 4, 2024
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.