ಉಗ್ರರಿಂದ ಹೊಸ ಕಾರ್ಯತಂತ್ರ: ದೇಶದೆಲ್ಲೆಡೆ ಕಟ್ಟೆಚ್ಚರ ಅಗತ್ಯ


Team Udayavani, Jun 12, 2023, 6:32 AM IST

TERRORISTS IMP

ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ಹಿಂಪಡೆದು ಅಲ್ಲಿನ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆಯ ಹೊಣೆಯನ್ನು ಕೇಂದ್ರೀಯ ಪಡೆಗಳ ಸುಪರ್ದಿಗೆ ಒಪ್ಪಿಸಿದಾಗಿನಿಂದ ಅಲ್ಲಿನ ಒಟ್ಟಾರೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಇದರ ಹೊರತಾಗಿಯೂ ಅಲ್ಲೊಂದು ಇಲ್ಲೊಂದು ಎಂಬಂತೆ ಉಗ್ರರು ದುಷ್ಕೃತ್ಯಗಳನ್ನು ನಡೆಸಿ ಶಾಂತಿಯನ್ನು ಕದಡುವ ಪ್ರಯತ್ನ ನಡೆಸುತ್ತಲೇ ಬಂದಿದ್ದರೂ ಉಗ್ರರನ್ನು ಮಟ್ಟ ಹಾಕುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಇನ್ನು ಗಡಿಯಾಚೆಯಿಂದ ಅಂದರೆ ಪಾಕಿಸ್ಥಾನದ ಕಡೆಯಿಂದ ಕಾಶ್ಮೀರದ ಕಣಿವೆಗೆ ನುಸುಳುವ ಉಗ್ರರನ್ನು ಸದೆಬಡಿಯುವ ಮೂಲಕ ಜಮ್ಮು- ಕಾಶ್ಮೀರದಲ್ಲಿನ ಕಾನೂನು ಸುವ್ಯವಸ್ಥೆಗೆ ಭಂಗ ಬಾರದಂತೆ ಕಟ್ಟೆಚ್ಚರ ವಹಿಸಿವೆ.

ಈ ಎಲ್ಲ ಕ್ರಮಗಳಿಂದಾಗಿ ಜಮ್ಮು – ಕಾಶ್ಮೀರ ಈಗ ದೇಶ ಮಾತ್ರವಲ್ಲದೆ ಜಾಗತಿಕ ವ್ಯವಹಾರಗಳಿಗೆ ತೆರೆಯಲ್ಪಟ್ಟಿದ್ದು ಈ ಪ್ರದೇಶದ ಬಗೆಗೆ ಜನತೆಯಲ್ಲಿದ್ದ ಆತಂಕವೆಲ್ಲ ಮಾಯವಾಗಿದೆ. ಈ ಬೆಳವಣಿಗೆಗಳಿಂದ ಭಯೋತ್ಪಾದಕ ಸಂಘಟನೆಗಳು ಮತ್ತು ಉಗ್ರರಿಗೆ ಸದಾ ಆಶ್ರಯ ನೀಡುವ ಮೂಲಕ ಭಾರತದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ದುಷ್ಪ್ರೇರಣೆ ಮತ್ತು ಆರ್ಥಿಕ ನೆರವು ನೀಡುತ್ತ ಬಂದಿರುವ ಪಾಕಿಸ್ಥಾನ ವಿಚಲಿತವಾಗಿವೆ. ಈ ಕಾರಣದಿಂದಾಗಿ ಜಮ್ಮು – ಕಾಶ್ಮೀರದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಲೇ ಬಂದಿರುವ ಪಾಕಿಸ್ಥಾನದ ಐಎಸ್‌ಐ ಮತ್ತು ಇನ್ನಿತರ ಭಯೋತ್ಪಾದಕ ಸಂಘಟನೆಗಳು ತಮ್ಮ ತಂತ್ರಗಾರಿಕೆಯನ್ನು ಸದಾ ಬದಲಾಯಿಸುತ್ತಿವೆ. ಆದರೆ ಭಾರತೀಯ ಸೇನೆ, ಭಯೋತ್ಪಾದಕರ ಈ ಎಲ್ಲ ಸಂಚು, ಷಡ್ಯಂತ್ರಗಳನ್ನು ಬಯಲು ಮಾಡಿ, ಯಶಸ್ವಿಯಾಗಿ ಎದುರಿಸಿವೆ.

ಈಗ ಐಎಸ್‌ಐ ಮತ್ತು ಭಯೋತ್ಪಾದಕ ಸಂಘಟನೆಗಳು ತಮ್ಮ ಜಾಲವನ್ನು ಕಾಶ್ಮೀರ ಕಣಿವೆಯಲ್ಲಿ ಸಕ್ರಿಯವಾಗಿಸಲು ಮತ್ತು ವಿಸ್ತರಿಸುವ ಕಾರ್ಯತಂತ್ರದ ಭಾಗವಾಗಿ ಮಹಿಳೆಯರು ಅದರಲ್ಲೂ ಮುಖ್ಯವಾಗಿ ಬಾಲಕಿಯರು ಮತ್ತು ಬಾಲಾಪರಾಧಿಗಳನ್ನು ಬಳಸಿಕೊಳ್ಳುತ್ತಿರುವುದು ಬಂಧಿತರ ವಿಚಾರಣೆಯ ವೇಳೆ ಬಯಲಾಗಿದೆ. ಇದು ಭದ್ರತಾ ಪಡೆಗಳಿಗೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ. ಮಕ್ಕಳನ್ನು ಭಯೋತ್ಪಾದನ ಜಾಲದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಅವರ ಭವಿಷ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಭಯೋತ್ಪಾದಕ ಸಂಘಟನೆಗಳ ಈ ಷಡ್ಯಂತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಭದ್ರತಾ ಪಡೆಗಳ ಹಿರಿಯ ಅಧಿಕಾರಿಗಳು ಕಿವಿಮಾತು ಹೇಳಿದ್ದಾರೆ.

ಕಾಶ್ಮೀರ ಕಣಿವೆ ಮತ್ತು ಗಡಿ ಭಾಗಗಳಲ್ಲಿ ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತೀಯ ಸೇನೆಯ ವಿವಿಧ ಪಡೆಗಳ ಹಿರಿಯ ಅಧಿಕಾರಿಗಳ ಪ್ರಕಾರ ಐಎಸ್‌ಐ ಮತ್ತು ಉಗ್ರರು ಸಂದೇಶ, ಶಸ್ತ್ರಾಸ್ತ್ರ ರವಾನೆ, ಮಾದಕ ಪದಾರ್ಥಗಳ ಸಾಗಣೆಗೆ ಈ ಹಿಂದೆ ಅನುಸರಿಸುತ್ತಿದ್ದ ಸಾಂಪ್ರದಾಯಿಕ ಪದ್ಧತಿಗಳಾದ ಮೊಬೈಲ್‌ ಮೂಲಕ ಸಂವಹನ, ತಂತ್ರಜ್ಞಾನ ಆಧಾರಿತ ಗೂಢಚಾರಿಕೆ ಮತ್ತು ಸ್ಥಳೀಯವಾಗಿ ಸಂದೇಶ ವಾಹಕರ ಬಳಕೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗಿದೆ.

ಈಗ ಉಗ್ರರು ಮಹಿಳೆಯರು ಮತ್ತು ಬಾಲಾಪರಾಧಿಗಳನ್ನು ಈ ಎಲ್ಲ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಬಳಸಿಕೊಳ್ಳಲಾರಂಭಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ತೀವ್ರ ನಿಗಾ ಇಡುವ ಜತೆಯಲ್ಲಿ ಮಕ್ಕಳು ಹಾದಿತಪ್ಪದಂತೆ ಎಚ್ಚರ ವಹಿಸಬೇಕಿದೆ. ರಂಗೋಲಿಯಡಿಗೆ ತೂರುವ ಉಗ್ರರ ಈ ಪ್ರಯತ್ನವನ್ನು ಭದ್ರತಾ ಪಡೆಗಳು ಪ್ರಾಥಮಿಕ ಹಂತದಲ್ಲಿಯೇ ವಿಫ‌ಲಗೊಳಿಸಿ, ಜಮ್ಮು – ಕಾಶ್ಮೀರದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರ ವಹಿಸಬೇಕು. ಅಲ್ಲದೆ ಇದೇ ಕಾರ್ಯತಂತ್ರವನ್ನು ಇತರ ಉಗ್ರ ಸಂಘಟನೆಗಳು ಅನುಸರಿಸುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಬೇಕಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.