![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 5, 2023, 5:00 PM IST
ಜೈಪುರ: ಒಂದು ವೇಳೆ ಜನರು ಸರಾಸರಿ ಶೇ.60ರಷ್ಟು ಎಥೆನಾಲ್ ಮತ್ತು ಶೇ.40ರಷ್ಟು ವಿದ್ಯುತ್ ಬಳಕೆಯ ವಾಹನಗಳನ್ನು ಬಳಸಿದಲ್ಲಿ, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಬೆಲೆ 15 ರೂಪಾಯಿಯಾಗಲಿದ್ದು, ಇದರಿಂದ ಜನರಿಗೆ ಲಾಭವಾಗುವ ದಿನ ದೂರವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ (ಜು.05) ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಯಡಮೊಗೆ; ಕಾಲು ಸಂಕದಿಂದ ಆಯತಪ್ಪಿ ನದಿಗೆ ಬಿದ್ದು ವೃದ್ಧ ಮೃತ್ಯು
ರಾಜಸ್ಥಾನದ ಪ್ರತಾಪ್ ಗಢದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಎಥೆನಾಲ್ ಉತ್ಪಾದನಾ ವೇಗವನ್ನು ಹೆಚ್ಚಿಸಲಾಗುತ್ತಿದೆ. ಹೀಗಾಗಿ ಒಂದು ವೇಳೆ ಜನರು ಶೇ.60ರಷ್ಟು ಎಥೆನಾಲ್ ಚಾಲಿತ ಹಾಗೂ ಶೇ.40ರಷ್ಟು ವಿದ್ಯತ್ ಚಾಲಿತ ವಾಹನಗಳನ್ನು ಬಳಸಿದಲ್ಲಿ ನಂತರ ಪೆಟ್ರೋಲ್ ಪ್ರತಿ ಲೀಟರ್ ಗೆ 15 ರೂಪಾಯಿಗೆ ಲಭ್ಯವಾಗಲಿದೆ. ಇದರಿಂದ ಜನರಿಗೂ ಅನುಕೂಲವಾಗಲಿದೆ ಎಂದರು.
ಎಥೆನಾಲ್, ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮಾಲಿನ್ಯ ಮತ್ತು ಆಮದನ್ನು ಕಡಿಮೆ ಮಾಡಬಹುದಾಗಿದೆ. ರೈತರು ಎಥೆನಾಲ್ ಉತ್ಪಾದನೆಯತ್ತ ಹೆಚ್ಚು ಆಸಕ್ತಿ ಹೊಂದಿದ್ದು, ಇದರಿಂದ ರೈತರ ಆದಾಯ ಕೂಡಾ ದ್ವಿಗುಣಗೊಳ್ಳಲಿದೆ. ದೇಶಾದ್ಯಂತ ರೈತರನ್ನು ಇಂಧನ ಪೂರೈಕೆದಾರರನ್ನಾಗಿ ಮಾಡಬೇಕೆಂಬುದು ಕೇಂದ್ರ ಸರ್ಕಾರದ ಆಶಯವಾಗಿದೆ ಎಂದು ಗಡ್ಕರಿ ಹೇಳಿದರು.
ರೈತರು ಉತ್ಪಾದಿಸಿದ ಎಥೆನಾಲ್ ಚಾಲಿತ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆ ಹೊಂದಿರುವುದಾಗಿ ತಿಳಿಸಿರುವ ಸಚಿವ ಗಡ್ಕರಿ ಅವರು, ಈ ವಾಹನಗಳು ಶೇ.60ರಷ್ಟು ಎಥೆನಾಲ್ ಮತ್ತು ಶೇ.40ರಷ್ಟು ವಿದ್ಯುತ್ ನಿಂದ ಸಂಚಾರ ನಡೆಸಲಿದೆ. ಈ ನಿಟ್ಟಿನಲ್ಲಿ ಪೆಟ್ರೋಲ್ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ತಿಳಿಸಿದರು.
ಮುಂಬರುವ ದಿನಗಳಲ್ಲಿ ಬಜಾಜ್, ಟಿವಿಎಸ್, ಹೀರೋ ಕಂಪನಿಗಳು ಶೇ.100ರಷ್ಟು ಎಥೆನಾಲ್ ಚಾಲಿತ ಸ್ಕೂಟರ್ ಗಳನ್ನು ತಯಾರಿಸಲಿವೆ ಎಂದು ಸಚಿವ ನಿತಿನ್ ಗಡ್ಕರಿ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.