ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!


Team Udayavani, Apr 20, 2021, 7:05 AM IST

ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!

ಕುಂದಾಪುರ: ಈ ಪಂಚಾಯತ್‌ ಎರಡು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರ, ಇಬ್ಬರು ಸಂಸದರು, ಇಬ್ಬರು ಶಾಸಕರ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಊರು ಸರ್ವ ಸೌಲಭ್ಯಗಳನ್ನೂ ಹೊಂದಿರಬೇಕಿತ್ತು. ಆದರೆ ಇಲ್ಲಿನ ಜನರಿಗೆ ಏನಾದರೂ ಅನಾರೋಗ್ಯ ತಲೆದೋರಿದರೆ ತುರ್ತು ಚಿಕಿತ್ಸೆಗೆ 20-25 ಕಿ.ಮೀ. ದೂರ ಬರಬೇಕು; ಅದೂ ಸಣ್ಣ ಆಸ್ಪತ್ರೆಗೆ. ದೊಡ್ಡ ಆಸ್ಪತ್ರೆ ಆಗಬೇಕೆಂದರೆ 45 ಕಿ.ಮೀ. ದೂರ ಹೋಗಬೇಕು.

ಇದು ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರಗಳೆರಡರ ವ್ಯಾಪ್ತಿಯಲ್ಲಿ ಬರುವ ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಕೆಳಸುಂಕ, ಜಡ್ಡಿನಗದ್ದೆ, ಕೆಲಾ, ನಡಂಬೂರು, ಶ್ಯಾಮೆಹಕ್ಲು, ತೊಂಬಟ್ಟು ಭಾಗದ ಜನರ ಸಂಕಷ್ಟ.

2011ರ ಜಣಗಣತಿ ಪ್ರಕಾರ ಅಮಾಸೆಬೈಲು ಗ್ರಾಮದಲ್ಲಿ 3,593 ಪುರುಷರು, 4,000 ಮಹಿಳೆಯರು ಸೇರಿ 7,593 ಮತದಾರರಿದ್ದಾರೆ. ಇನ್ನು ಒಟ್ಟಾರೆ ಅಮಾಸೆಬೈಲು, ಮಚ್ಚಟ್ಟು, ರಟ್ಟಾಡಿ ಈ 3 ಗ್ರಾಮಗಳು ಸೇರಿ 10 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಈಗ ಇನ್ನಷ್ಟು ಹೆಚ್ಚಿದೆ. ಇಷ್ಟೊಂದು ಪ್ರಮಾಣದ ಜನಸಂಖ್ಯೆಯಿದ್ದರೂ ಇಲ್ಲಿ ಆರೋಗ್ಯ ಕೇಂದ್ರವನ್ನು ತೆರೆಯುವ ಮನಸ್ಸನ್ನು ಇಲ್ಲಿನ ಯಾವ ಜನಪ್ರತಿನಿಧಿಗಳೂ ಮಾಡಿಲ್ಲ ಎಂಬುದು ಗ್ರಾಮಸ್ಥರ ಬೇಸರ.

2 ಸಣ್ಣ ಕ್ಲಿನಿಕ್‌
10 ಸಾವಿರಕ್ಕೂ ಅಧಿಕ ಜನಸಂಖ್ಯೆಯಿರುವ 3 ಗ್ರಾಮಗಳನ್ನೊಂಡ ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರಸ್ತುತ ಅಮಾಸೆಬೈಲು ಪೇಟೆಯಲ್ಲಿ ಎರಡು ಸಣ್ಣ ಕ್ಲಿನಿಕ್‌ಗಳಿವೆ. ಅದು ಸಹ ಬೆಳಗ್ಗಿನಿಂದ ಸಂಜೆಯವರೆಗೆ ಮಾತ್ರ. ಸಮೀಪದ ಆರೋಗ್ಯ ಕೇಂದ್ರವೆಂದರೆ ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ. ಅಲ್ಲಿ ರಾತ್ರಿ ಹೊತ್ತಲ್ಲಿ ವೈದ್ಯರಿರುವುದಿಲ್ಲವಾದ್ದರಿಂದ ಆ ಸಂದರ್ಭದಲ್ಲಿ ಯಾರಿಗಾದರೂ ಅನಾರೋಗ್ಯವಾದರೆ 40-45 ಕಿ.ಮೀ. ದೂರದ ಕುಂದಾಪುರಕ್ಕೇ ಬರಬೇಕು. ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ಏರು-ತಗ್ಗಿನ ಮಣ್ಣಿನ ರಸ್ತೆಯಲ್ಲಿ ಸಂಚರಿಸುವುದೇ ಒಂದು ಸಾಹಸ. ಇನ್ನು ಆ್ಯಂಬುಲೆನ್ಸ್‌ ಅಥವಾ ಬೇರೆ ವಾಹನ ಇಲ್ಲವೇ ಯಾರನ್ನಾದರೂ ಸಹಾಯಕ್ಕಾಗಿ ಕರೆಯೋಣವೆಂದರೆ ನೆಟ್ ವರ್ಕ್ ಕೂಡ ಇಲ್ಲ!

20ಕ್ಕೂ ಹೆಚ್ಚು ಸಾವು
ನಮ್ಮೂರಿಗೊಂದು ಆಸ್ಪತ್ರೆ ಮಂಜೂರು ಮಾಡಿಸಿ ಎಂದು ಸಾಕಷ್ಟು ಬಾರಿ ಸಂಬಂಧಪಟ್ಟ ಎಲ್ಲ ಜನ ಪ್ರತಿನಿಧಿಗಳಿಗೆ, ಇಲಾಖೆಗಳಿಗೆ ಮನವಿ ಸಲ್ಲಿಸಿದ್ದೇವೆ. ಈವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹದಗೆಟ್ಟ ರಸ್ತೆ, ಹತ್ತಿರದಲ್ಲಿ ಆಸ್ಪತ್ರೆ ಇಲ್ಲದ್ದರಿಂದ ದಾರಿಯಲ್ಲೇ ಅನೇಕ ಮಂದಿ ಸಾವನ್ನಪ್ಪಿರುವ ನಿದರ್ಶನ ನಮ್ಮ ಕಣ್ಣ ಮುಂದೆಯೇ ಇದೆ. 2 ವರ್ಷಗಳ ಅವಧಿಯಲ್ಲಿಯೇ 20ಕ್ಕೂ ಹೆಚ್ಚು ಮಂದಿ ಈ ಕಾರಣದಿಂದ ಸಾವನ್ನಪ್ಪಿರಬಹುದು ಎನ್ನುತ್ತಾರೆ ಇಲ್ಲಿನ ಗ್ರಾ. ಪಂ. ಸದಸ್ಯ
ಕೃಷ್ಣ ಪೂಜಾರಿ ಅವರು.

ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಿಗೆ ಸೂಕ್ತ ಆರೋಗ್ಯ ಸೇವೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ. ಅಮಾಸೆಬೈಲಿನ ಬಗ್ಗೆಯೂ ಗಮನಹರಿಸಲಾಗುವುದು. ಮುಖ್ಯಮಂತ್ರಿಗಳ ಬಳಿಯೂ ಮಾತನಾಡಿ ಪ್ರಯತ್ನಿಸಲಾಗುವುದು.
– ಬಿ.ವೈ. ರಾಘವೇಂದ್ರ, ಸಂಸದರು

– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.