Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
ಅಸಲಿ ರಾಜಕಾರಣ ಬೇರೆನೇ ಇದೆ. ಕಾದು ನೋಡೋಣ...
Team Udayavani, Jun 30, 2024, 5:40 PM IST
ಗದಗ: ಕಾಂಗ್ರೆಸ್ ನ ಯಾರೂ ನಮ್ಮನ್ನು ಸಂಪರ್ಕ ಮಾಡಿಲ್ಲ. ಆದರೆ, ಆಂತರಿಕವಾಗಿ ಕಾಂಗ್ರೆಸ್ ನಲ್ಲಿ ವೈರುದ್ಧ ಇರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ವಿಷಯವಾಗಿ ಅವರ ಅಭಿಪ್ರಾಯ ಹೇಳುತ್ತಾರೆ. ಆದರೆ, ರಾಜಕಾರಣಕ್ಕೆ ವಿಧಿವಿಧಾನಗಳಿವೆ. ಸ್ವಾಮೀಜಿಗಳ ಹೇಳಿಕೆ ಬಗ್ಗೆ ನಾನು ವ್ಯಾಖ್ಯಾನ ಮಾಡುವುದಿಲ್ಲ. ಆದರೆ, ಯಾರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಮೂರು ನಾಲ್ಕು ಡಿಸಿಎಂಗಳನ್ನು ಮಾಡಬೇಕಾ ಅನ್ನುವುದು ಕಾಂಗ್ರೆಸ್ ಗೆ ಬಿಟ್ಟಿದ್ದು. ಎಷ್ಟು ಜನರಿಗೆ ಡಿಸಿಎಂ ಮಾಡ್ತಾರೆ ಕಾದು ನೋಡೋಣ. ಅವರ ಆಂತರಿಕ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಡಿಸಿಎಂ ವಿಚಾರವಾಗಿ ಹೊಸ ವ್ಯಾಖ್ಯಾನ ಮಾಡುವುದು ಕಾಂಗ್ರೆಸ್ ನಲ್ಲಿ ನಡೆದಿದೆ. ಅಸಲಿ ರಾಜಕಾರಣ ಬೇರೆನೇ ಇದೆ. ಕಾದು ನೋಡೋಣ ಎಂದು ಹೇಳಿದರು.
ಪಠ್ಯಪುಸ್ತಕದಲ್ಲಿ ವೀರಶೈವ ಪದ ತೆಗೆದು ಹಾಕಿರುವ ಬಗ್ಗೆ ನೋಡಿಲ್ಲ. 9ನೇ ತರಗತಿ ಪಠ್ಯದಲ್ಲಿ ತೆಗೆದಿದ್ದಾರೆ ಅಂತ ಹೇಳುತ್ತಿದ್ದಾರೆ ನಾನು ಗಮನಿಸಿಲ್ಲ. ಹಾಗೇನಾದರೂ ಆಗಿದ್ದರೆ, ಸರಿಪಡಿಸಿ ಅಂತಾ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದರು.
ಶಿಗ್ಗಾವಿ ವಿಧಾನ ಸಭಾ ಕ್ಷೇತ್ರಕ್ಕೆ(By election) ಮಾಜಿ ಸಚಿವ ಮುರುಗೇಶ್ ನೀರಾಣಿ ಬರುತ್ತಾರೆ ಎನ್ನುವ ಕುರಿತು ಕೇಳಿದ ಪ್ರಶ್ನೆಗೆ ನಾನೂ ಅವರ ಬಳಿ ಚರ್ಚೆ ಮಾಡಿಲ್ಲ. ಅವರೂ ನನ್ನ ಬಳಿ ಚರ್ಚೆ ಮಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
MUST WATCH
ಹೊಸ ಸೇರ್ಪಡೆ
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.