ಸವದಿ ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ: CM ಬೊಮ್ಮಾಯಿ

ಲಕ್ಷ್ಮಣ ಸವದಿ ಬಿಜೆಪಿಯಲ್ಲಿದ್ದಾಗ ಯಾಕೆ ಭ್ರಷ್ಟಾಚಾರದ ಆರೋಪ ಮಾಡಲಿಲ್ಲ?

Team Udayavani, Apr 27, 2023, 7:25 AM IST

bommayi bjp

ಬೆಳಗಾವಿ: ರಾಜ್ಯ ಸರಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡುತ್ತಿರುವ ಲಕ್ಷ್ಮಣ ಸವದಿ ಗಾಳಿಯಲ್ಲಿ ಗುಂಡು ಹೊಡೆದರೆ ಏನೂ ಪ್ರಯೋಜನವಿಲ್ಲ. ಅವರು ನಿರ್ದಿಷ್ಟ ಪ್ರಕರಣವನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸವದಿ ಬಿಜೆಪಿಯಲ್ಲಿದ್ದಾಗ ಈ ಮಾತನ್ನು ಹೇಳದೆ ಯಾಕೆ ಸುಮ್ಮನಿದ್ದರು? ಕಾಂಗ್ರೆಸ್‌ ಅಧಿ ಕಾರಕ್ಕೆ ಬಂದ ಮೇಲೆ 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ತನಿಖೆ ನಡೆಸಲಾಗುವುದು ಎಂಬ ಸವದಿ ಹೇಳಿಕೆ ಸರಿಯಲ್ಲ. ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಿಕೊಂಡು ಬಿಜೆಪಿಯ ವರ್ಚಸ್ಸನ್ನು ಕೆಡಿಸಲು ಕಾಂಗ್ರೆಸ್‌ ಹುನ್ನಾರ ನಡೆಸಿದೆ. ಅದು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್‌. ಭ್ರಷ್ಟಾಚಾರ ಕಾಂಗ್ರೆಸ್‌ನ ಅವಿಭಾಜ್ಯ ಅಂಗ. ಹೀಗಿರುವಾಗ ಅವರು ಭ್ರಷ್ಟಾಚಾರ ಬಗ್ಗೆ ಮಾತನಾಡುವ ಅಗತ್ಯ ಇಲ್ಲ ಎಂದರು.

ಟಿಕೆಟ್‌ ಹಂಚಿಕೆಯಲ್ಲಿ ಕೆಲವು ಬದಲಾವಣೆ ಮಾಡಿದ್ದಕ್ಕೂ ಜನ ಸ್ಪಂದಿಸಿದ್ದಾರೆ. ನಾನು ರಾಜ್ಯದ ಉದ್ದಗಲಕ್ಕೂ ಸುತ್ತುತ್ತಿದ್ದೇನೆ. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿದ ಮೇಲೆ ಇಡೀ ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಬರಲಿದೆ. ಸಂಖ್ಯಾ ಬಲದಷ್ಟೇ ಉತ್ಸಾಹವೂ ದೊಡ್ಡ ಪ್ರಮಾಣದಲ್ಲಿ ಇದೆ. ಈಗ ಬಂದಿರುವುದೆಲ್ಲ ಹಳೆಯ ಸಮೀಕ್ಷೆ. ನಮ್ಮದೇ ಆದ ಮಾಹಿತಿ ವ್ಯವಸ್ಥೆ ಇದೆ. ಅದರ ಮೇಲೆ ರಣನೀತಿ ಇರುತ್ತದೆ. ತಳಮಟ್ಟದಲ್ಲಿ ನಿಜ ಚಿತ್ರಣ ನೋಡುತ್ತಿದ್ದು, ಸ್ಪಷ್ಟ ಬಹುಮತ ಬರಲಿದೆ ಎಂದರು.

ಉಮೇಶ ಕತ್ತಿ ನೆನೆದು ಕಣ್ಣೀರು
ಬೆಳಗಾವಿ: ಆತ್ಮೀಯ ಗೆಳೆಯ ದಿ| ಉಮೇಶ ಕತ್ತಿ ಅವರನ್ನು ನೆನೆದು ಮುಖ್ಯಮಂತ್ರಿ ಬಸವವರಾಜ ಬೊಮ್ಮಾಯಿ ಕಣ್ಣೀರು ಸುರಿಸಿದರು.
ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಿಖೀಲ್‌ ಕತ್ತಿ ಪರ ಪ್ರಚಾರಾರ್ಥ ಬುಧವಾರ ನಡೆದ ರೋಡ್‌ ಶೋ ಬಳಿಕ ಮಾತನಾಡಲು ಆರಂಭಿಸುತ್ತಿದ್ದಂತೆ ಉಮೇಶ ಕತ್ತಿ ಅವರನ್ನು ನೆನೆದು ಕಣ್ಣೀರು ಹಾಕಿದರು.

ಉಮೇಶಣ್ಣ ಕತ್ತಿ ನಮ್ಮ ಜತೆಗೆ ಇಲ್ಲ. ಆದರೆ ಅವರು ಸ್ವರ್ಗದಲ್ಲಿದ್ದುಕೊಂಡು ನಿಖೀಲ್‌ ಕತ್ತಿ ಹಾಗೂ ರಮೇಶ ಕತ್ತಿ ಅವರಿಗೆ ಆಶೀರ್ವಾದ ಮಾಡುತ್ತಿದ್ದಾರೆ. ರಾಜಕೀಯ ಮೀರಿ ಕತ್ತಿ ಕುಟುಂಬದೊಂದಿಗೆ ನಮ್ಮ ಸಂಬಂಧ ಇದೆ. ಮೂರನೇ ತಲೆಮಾರಿನವರೆಗೂ ನಮಗೂ ಹಾಗೂ ಕತ್ತಿ ಕುಟುಂಬಕ್ಕೆ ಸಂಬಂಧ ಇದೆ. ಹುಕ್ಕೇರಿ ಮತ್ತು ಚಿಕ್ಕೋಡಿಯಲ್ಲಿ ನಮ್ಮ ಗೆಲುವು ನಿಶ್ಚಿತವಿದೆ. ಅಂತರ ಹೆಚ್ಚಿಸಬೇಕು ಎಂದರು.

ಉಮೇಶ ಕತ್ತಿ ಸೋಲಿಲ್ಲದ ಸರದಾರ. ನಿರಂತರವಾಗಿ ಹುಕ್ಕೇರಿಯಿಂದ 9 ಬಾರಿ ಸ್ಪ ರ್ಧಿಸಿ ಗೆದ್ದಿದ್ದಾರೆ. ತಂದೆ ವಿಶ್ವನಾಥ ಕತ್ತಿ ಅವರ ನಿಧನದ ಬಳಿಕ 25ನೇ ವಯಸ್ಸಿನಲ್ಲೇ ಉಮೇಶ ಕತ್ತಿ ವಿಧಾನಸಭೆ ಪ್ರವೇಶಿಸಿದರು. ನಿಮ್ಮೆಲ್ಲರ ಆಶೀರ್ವಾದದಿಂದ ಹಿಂದಿರುಗಿ ನೋಡದೆ ನಿರಂತರವಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಎಂದರು.
ಅಭ್ಯರ್ಥಿಗಳಾದ ನಿಖೀಲ್‌ ಕತ್ತಿ, ರಮೇಶ ಕತ್ತಿ, ಶಶಿಕಲಾ ಜೊಲ್ಲೆ, ಅಭಯ ಪಾಟೀಲ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.