![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 17, 2021, 8:14 PM IST
ವಾಡಿ (ಚಿತ್ತಾಪುರ): ಕಾಲೇಜಿನಿಂದ ಬಿತ್ತರಗೊಳ್ಳುತ್ತಿದ್ದ ಆನ್ಲೈನ್ ಕ್ಲಾಸ್ ಆಲಿಸುತ್ತಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಚಿತ್ತಾಪುರ ತಾಲೂಕಿನ ವಾಡಿ (ಜಂಕ್ಷನ್) ಪಟ್ಟಣದಲ್ಲಿ ಸಂಭವಿಸಿದೆ.
ಪಟ್ಟಣದ ಬಿರ್ಲಾ ಕ್ವಾಟರ್ಸ್ ನಿವಾಸಿ, ಬೆಂಗಳೂರು ಬೇಕರಿ ವ್ಯಾಪಾರಿ ಗಿರೀಶ ಉಡುಪಾ ಅವರ ಪುತ್ರ ಗುರುಚರಣ್ ಉಡುಪಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಮೃತ ವಿದ್ಯಾರ್ಥಿ ಉಡುಪಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಿಯುಸಿ ದ್ವಿತೀಯ ವರ್ಷದಲ್ಲಿ ಓದುತ್ತಿದ್ದು, ಅಭ್ಯಾಸದಲ್ಲಿ ರ್ಯಾಂಕ್ ವಿದ್ಯಾರ್ಥಿ ಎನ್ನಲಾಗಿದೆ.
ಆನ್ಲೈನ್ ಕ್ಲಾಸ್ ಕೇಳಲು ಮನೆಯ ಒಳ ಕೋಣೆಯೊಳಗೆ ಹೋದಾತ ಎರಡು ತಾಸಿನ ಬಳಿಕ ಪೋಷಕರಿಗೆ ಫ್ಯಾನಿಗೆ ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ.
ಇದನ್ನೂ ಓದಿ :ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್ : ಮಹತ್ವದ ಸಭೆ ನಡೆಸಿದ ಮೋದಿ
ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ. ಮಂಗಳವಾರ ಪಟ್ಟಣದಲ್ಲಿ ಮೃತ ವಿದ್ಯಾರ್ಥಿಯ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.