ಪರಿಹಾರ ನೀಡದ ವಿಮಾ ಕಂಪೆನಿ ಆಸ್ತಿ ಮುಟ್ಟುಗೋಲಿಗೆ ಆದೇಶ
Team Udayavani, Apr 20, 2023, 5:25 AM IST
ಕುಂದಾಪುರ: ವಾಹನ ಅಪಘಾತವಾಗಿ ಪರಿಹಾರಕ್ಕಾಗಿ ನ್ಯಾಯಾಲಯಕ್ಕಾಗಿ ಅರ್ಜಿ ಸಲ್ಲಿಸಿ, ವಿಚಾರಣೆ ನಡೆಸಿದ ನ್ಯಾಯಾಯವು ಪರಿಹಾರ ನೀಡುವಂತೆ ಆದೇಶಿಸಿದ್ದರೂ, ಅದನ್ನು ಪಾವತಿಸದ ಓರಿಯೆಂಟಲ್ ಇನ್ಸುರೆನ್ಸ್ ವಿಮಾ ಕಂಪೆನಿಯ ಚರಾಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಕುಂದಾಪುರ ನ್ಯಾಯಾಲಯ ಆದೇಶಿಸಿದೆ.
2015ರ ಜ. 6ರಂದು ನಡೆದ ಅಪಘಾತದಲ್ಲಿ ಗುಲ್ವಾಡಿಯ ನಿವಾಸಿ ರವೀಂದ್ರ ಆಚಾರ್ಯ ಸಾವನ್ನಪ್ಪಿದ್ದರು. ವಿಮಾ ಪರಿಹಾರಕ್ಕಾಗಿ ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಾರಸುದಾರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯವು ಸಂತ್ರಸ್ತ ಕುಟುಂಬಕ್ಕೆ 26.66 ಲಕ್ಷ ರೂ. ಅನ್ನು ಶೇ.6 ರ ಬಡ್ಡಿ ಸಹಿತ ಪಾವತಿಸುವಂತೆ ಓರಿಯೆಂಟಲ್ ಇನ್ಸುರೆನ್ಸ್ ಕಂಪೆನಿಗೆ ಆದೇಶಿಸಿತ್ತು.
ಆದರೆ ಇನ್ಸುರೆನ್ಸ್ ಕಂಪೆನಿಯು ನಿಗದಿತ ಸಮಯದಲ್ಲಿ ಪರಿಹಾರ ಮೊತ್ತವನ್ನು ಪಾವತಿಸದೇ ಇರುವುದರಿಂದ ಕಂಪೆನಿಯ ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಅರ್ಜದಾರರ ಪರ ಕುಂದಾಪುರದ ವಕೀಲ ಹಂದಕುಂದ ಅಶೋಕ ಶೆಟ್ಟ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.