![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 4, 2021, 9:10 PM IST
ನವದೆಹಲಿ: ದೇಶದ ಶೇ.21ರಷ್ಟು ಮಂದಿಗೆ ಕೊರೊನಾ ಸೋಂಕು ಬಂದು ಗುಣವಾಗಿರುವ ಸಾಧ್ಯತೆ ಇದೆ. ಹತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯೋಮಿತಿಯವರ ಮೇಲೆ ನಡೆಸಲಾಗಿರುವ ಅಧ್ಯಯದಲ್ಲಿ ಈ ಅಂಶ ಕಂಡುಕೊಳ್ಳಲಾಗಿದೆ ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ ಹೇಳಿದ್ದಾರೆ. ಡಿ.18- ಜ.8ರ ನಡುವೆ ದೇಶದ 70 ಜಿಲ್ಲೆಗಳ 700 ಗ್ರಾಮಗಳಲ್ಲಿ ನಡೆಸಲಾಗಿರುವ ಸೀರೋ ಸರ್ವೆಯಲ್ಲಿ ಈ ಅಂಶ ದೃಢಪಟ್ಟಿದೆ.
25,598 ಮಂದಿಯ ಪೈಕಿ 18 ವರ್ಷಕ್ಕಿಂತ ಮೇಲ್ಪಟ್ಟ ಶೇ.21.4 ಮಂದಿ ವೈರಸ್ಗೆ ತುತ್ತಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. 10-17 ವರ್ಷ ವಯೋಮಿತಿ ಒಳಗಿನ ಶೇ.25.3 ಮಂದಿಗೆ ಕೂಡ ಸೋಂಕು ಬಂದು ಹೋಗಿರಬಹುದೆಂದು ಅಭಿಪ್ರಾಯಪಡಲಾಗಿದೆ. ನಗರ ಪ್ರದೇಶಗಳ ಕೊಳೆಗೇರಿಗಳ ಪೈಕಿ ಶೇ.31.7 ಮಂದಿ ಕೂಡ ಇದೇ ಅನುಭವ ವ್ಯಕ್ತಪಡಿಸಿದ್ದಾರೆ ಎಂದು ಬಲರಾಮ್ ಭಾರ್ಗವ.
ಇದನ್ನೂ ಓದಿ:ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ
ಸುಧಾರಿಸಿದೆ: ದೇಶದಲ್ಲಿ ಸೋಂಕಿನ ಪರಿಸ್ಥಿತಿ ಸುಧಾರಿಸಿದೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ತಿಳಿಸಿದ್ದಾರೆ. ಒಟ್ಟಾರೆ ಪ್ರಕರಣದ ಕ್ಯುಮ್ಯುಲೇಟಿವ್ (ಸಂಚಿತ) ಪಾಸಿಟಿವಿಟಿ ಪ್ರಕರಣ ಶೇ.5.42 ಆಗಿದೆ. 47 ಜಿಲ್ಲೆಗಳಲ್ಲಿ ಹೊಸ ಪ್ರಕರಣ ಪತ್ತೆಯಾಗಿಲ್ಲ. 251 ಜಿಲ್ಲೆಗಳಲ್ಲಿ 3 ವಾರಗಳಲ್ಲಿ ಹೊಸ ಸಾವು ವರದಿಯಾಗಿಲ್ಲ ಎಂದಿದ್ದಾರೆ. ಇದುವರೆಗೆ 49,93,427 ಮಂದಿಗೆ ಲಸಿಕೆ ಹಾಕಲಾಗಿದೆ ಎಂದರು.
ಕೇರಳ ದ್ವಿತೀಯ: ದೇಶದ ಸೋಂಕು ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕೇರಳ ದ್ವಿತೀಯ ಸ್ಥಾನಕ್ಕೆ ತಲುಪಿದೆ. ಇದುವರೆಗೆ ಆ ಸ್ಥಾನದಲ್ಲಿದ್ದ ಕರ್ನಾಟಕ ತೃತೀಯ ಸ್ಥಾನಕ್ಕೆ ಇಳಿದಿದೆ. ಕೇರಳದಲ್ಲಿ 9.44 ಲಕ್ಷ ಕೇಸುಗಳಿದ್ದರೆ, ಕರ್ನಾಟಕದಲ್ಲಿ 9.40 ಲಕ್ಷ ಕೇಸುಗಳಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.