PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ


Team Udayavani, Jun 17, 2024, 7:05 AM IST

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ಉಡುಪಿ: ಬಡಿಗೆ, ಕಮ್ಮಾರಿಕೆ, ಟೈಲರಿಂಗ್‌, ಮೀನು ಬಲೆ ತಯಾರಿಕೆ, ಶಿಲ್ಪಿಗಳು ಹೀಗೆ 18 ಸಾಂಪ್ರದಾಯಿಕ ವೃತ್ತಿಯಲ್ಲಿ ತೊಡಗಿರುವವರಿಗೆ ಕೌಶಲಾಧಾರಿತ ತರಬೇತಿಯ ಜತೆಗೆ ಅಗತ್ಯ ಸಾಲಸೌಲಭ್ಯ ಒದಗಿಸುವ ಕೇಂದ್ರ ಸರಕಾರದ ಪಿ.ಎಂ. ವಿಶ್ವಕರ್ಮ ಯೋಜನೆಗೆ ಉಭಯ ಜಿಲ್ಲೆಗಳಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿಯಾಗಿಲ್ಲ.

ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ ಟೈಲರಿಂಗ್‌ ವೃತ್ತಿಯವರು ಹೆಚ್ಚಿನ ಪ್ರಮಾಣದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಮತ್ತು ಅವರಿಗೆ ಹಂತ ಹಂತವಾಗಿ ತರಬೇತಿ ನೀಡುವ ಕಾರ್ಯವೂ ಚಾಲ್ತಿಯಲ್ಲಿದೆ. ಆದರೆ, ಉಳಿದ ಕರಕುಶಲ ವೃತ್ತಿ ತರಬೇತಿ ನೋಂದಣಿ ಬಹಳ ಕಡಿಮೆಯಿದೆ ಎನ್ನುತ್ತಾರೆ ಅಧಿಕಾರಿಗಳು.

ನೋಂದಣಿಗೆ ಅವಕಾಶ
ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಯಾವಾಗ ಬೇಕಾದರೂ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಅರ್ಹ ಫ‌ಲಾನುಭವಿಗಳು ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌, ಆಧಾರ್‌ ಜೋಡಿತ ಮೊಬೈಲ್‌ ಸಂಖ್ಯೆ, ರೇಷನ್‌ ಕಾರ್ಡ್‌ ಹಾಗೂ ಕುಟುಂಬ ಸದಸ್ಯರ ಆಧಾರ್‌ ಕಾರ್ಡ್‌ ದಾಖಲೆಯೊಂದಿಗೆ ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು. ಸರಕಾರಿ ಉದ್ಯೋಗಿಗಳು ಇರುವ ಕುಟುಂಬದ ಸದಸ್ಯರು ನೋಂದಣಿ ಮಾಡಲು ಸಾಧ್ಯವಿಲ್ಲ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶ ಇರುತ್ತದೆ.

ಸವಲತ್ತು ಅನೇಕ
ಪಿ.ಎಂ. ವಿಶ್ವಕರ್ಮ ಯೋಜನೆಯಡಿ ನೋಂದಣಿ ಮಾಡಿಕೊಂಡವರಿಗೆ ಆರಂಭದಲ್ಲಿ ಒಂದು ವಾರಗಳ ತರಬೇತಿ ನೀಡಲಾಗುತ್ತದೆ. ಈ ತರಬೇತಿ ಅವಧಿಯಲ್ಲಿ ಪ್ರತಿ ದಿನಕ್ಕೆ 500 ರೂ.ಗಳ ಶಿಷ್ಯವೇತನ ನೀಡಲಾಗುತ್ತದೆ. ತರಬೇತಿ ಮುಗಿದ ಕೂಡಲೇ ಸಂಬಂಧಪಟ್ಟ ವೃತ್ತಿಗೆ ಪೂರಕವಾದ ಕಿಟ್‌ ಒದಗಿಸಲಾಗುತ್ತದೆ. ಹಾಗೆಯೇ ವೃತ್ತಿಯಲ್ಲಿ ಮುಂದುವರಿಯಲು ಅನುಕೂಲವಾಗುವಂತೆ 1 ಲಕ್ಷ ರೂ.ವರೆಗೂ ಸಾಲಸೌಲಭ್ಯ ಒದಗಿಸಲಾಗುತ್ತದೆ. ನಿರ್ದಿಷ್ಟ
ಅವಧಿಯಲ್ಲಿ ಸಾಲ ಮರುಪಾವತಿಸಿ ದರೆ ಪುನಃ ಹೆಚ್ಚುವರಿ ಸಾಲ ಪಡೆಯಲು ಅವಕಾಶವಿದೆ.

ನೋಂದಣಿ ವಿವರ
ಉಡುಪಿ: ಜಿಲ್ಲೆಯ ಗ್ರಾ.ಪಂ. ವ್ಯಾಪ್ತಿಯಿಂದ 11,697, ನಗರ ಸ್ಥಳೀಯ ಸಂಸ್ಥೆಗಳಿಂದ 1,788 ಅರ್ಜಿ ಸೇರಿ 13,485 ಅರ್ಜಿ ಸಲ್ಲಿಕೆಯಾಗಿವೆ. ಇದರಲ್ಲಿ 10,727 ಅರ್ಜಿಯನ್ನು ಜಿಲ್ಲಾ ಸಮಿತಿಗೆ ಶಿಫಾರಸು ಮಾಡಲಾಗಿದೆ. 33 ಅರ್ಜಿ ತಿರಸ್ಕೃತಗೊಂಡಿದ್ದು, 2,725 ಅರ್ಜಿ ಶಿಫಾರಸಿಗೆ ಬಾಕಿಯಿದೆ. 7,199 ಅರ್ಜಿಯನ್ನು ಜಿಲ್ಲಾ ಸಮಿತಿಯಿಂದ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ. 5,495 ಅರ್ಜಿ ರಾಜ್ಯ ಸಮಿತಿಯಿಂದ ಅನುಮೋದನೆಗೊಂಡಿದೆ. 16 ಅರ್ಜಿ ತಿರಸ್ಕೃತವಾಗಿವೆ.

ದಕ್ಷಿಣ ಕನ್ನಡ: ಜಿಲ್ಲೆಯ ಗ್ರಾ. ಪಂ. ವ್ಯಾಪ್ತಿಯಿಂದ 13,077, ನಗರ ಸ್ಥಳೀಯ ಸಂಸ್ಥೆಗಳಿಂದ 5,565 ಅರ್ಜಿ ಸೇರಿ 18,642 ಅರ್ಜಿ ಸಲ್ಲಿಕೆಯಾಗಿವೆ. ಇದರಲ್ಲಿ 13,167 ಅರ್ಜಿಯನ್ನು ಜಿಲ್ಲಾ ಸಮಿತಿಗೆ ಶಿಫಾರಸು ಮಾಡಲಾಗಿದೆ. 67 ಅರ್ಜಿ ತಿರಸ್ಕೃತಗೊಂಡಿದ್ದು, 5,408 ಅರ್ಜಿ ಶಿಫಾರಸಿಗೆ ಬಾಕಿಯಿದೆ. 6,217 ಅರ್ಜಿಯನ್ನು ಜಿಲ್ಲಾ ಸಮಿತಿಯಿಂದ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ. 4,322 ಅರ್ಜಿ ರಾಜ್ಯ ಸಮಿತಿಯಿಂದ ಅನುಮೋದನೆಗೊಂಡಿದೆ. 6 ಅರ್ಜಿ ತಿರಸ್ಕೃತವಾಗಿವೆ.

ಪಿಎಂ ವಿಶ್ವಕರ್ಮ ಯೋಜನೆ ಯಡಿ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ. ಅರ್ಹರು ಸಾಮಾನ್ಯ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ತರಬೇತಿ ಪಡೆಯುವ ಮೂಲಕ ಯೋಜನೆ ಉಪಯೋಗ ಪಡೆಯಬಹುದಾಗಿದೆ. 18 ವೃತ್ತಿಯಲ್ಲಿರುವವರಿಗೆ ಅರ್ಜಿ ಸಲ್ಲಿಸುವ ಅವಕಾಶವಿದೆ. ಕೆಲವೊಂದು ವೃತ್ತಿಯವರಿಗೆ ಈಗಾಗಲೇ ತರಬೇತಿಯನ್ನು ಆರಂಭಿಸಿದ್ದೇವೆ.
ಗೋಕುಲ್‌ದಾಸ್‌ ನಾಯಕ್‌, ನಾಗರಾಜ್‌ ವಿ. ನಾಯಕ್‌,
ಜಂಟಿ ನಿರ್ದೇಶಕರು, ದ.ಕ., ಉಡುಪಿ ಜಿಲ್ಲಾ ಕೈಗಾರಿಕೆ ಕೇಂದ್ರ.

 -ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.