Jammu Kashmir Result: ಮೆಹಬೂಬ ಮುಫ್ತಿ ಪುತ್ರಿಗೆ ಸೋಲು, National Conferenceಗೆ ಜಯ
ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ 52 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ
Team Udayavani, Oct 8, 2024, 12:58 PM IST
ಜಮ್ಮು-ಕಾಶ್ಮೀರ(Jammu Kashmir): ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಿಎಂ ಮೆಹಬೂಬ ಮುಫ್ತಿ ಪುತ್ರಿ ಇಲ್ತಿಜಾ ಮುಫ್ತಿ ಪರಾಭವಗೊಂಡಿದ್ದು, ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (PDP) ಚುನಾವಣೆಯಲ್ಲಿ ಹೀನಾಯ ಮುಖಭಂಗ ಅನುಭವಿಸಿದೆ.
“ಚುನಾವಣೆಯಲ್ಲಿ ಮತದಾರರ ತೀರ್ಪನ್ನು ಸ್ವೀಕರಿಸಿದ್ದೇನೆ. ನನ್ನ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ” ಇಲ್ತಿಜಾ ತಿಳಿಸಿದ್ದಾರೆ.
ಜನರ ತೀರ್ಪನ್ನು ನಾನು ಗೌರವಿಸುತ್ತೇನೆ. ನಾನು ಬಿಜ್ ಬೆಹ್ರಾ ಕ್ಷೇತ್ರದ ಮತದಾರರ ಜತೆ ಯಾವತ್ತೂ ಇರಲಿದ್ದೇನೆ. ಪ್ರಚಾರ ಸಂದರ್ಭದಲ್ಲಿ ನನ್ನ ಪರವಾಗಿ ಕಾರ್ಯನಿರ್ವಹಿಸಿದ ಪಿಡಿಪಿ ಕಾರ್ಯಕರ್ತರಿಗೆ ಚಿರಋಣಿಯಾಗಿದ್ದೇನೆ ಎಂದು ಇಲ್ತಿಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಚುನಾವಣ ಆಯೋಗದ ಅಂಕಿಅಂಶದ ಪ್ರಕಾರ, ಬಿಜ್ ಬೆಹ್ರಾ ಕ್ಷೇತ್ರದಲ್ಲಿ ಪಿಡಿಪಿಯ ಇಲ್ತಿಜಾ ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಬಶೀರ್ ಅಹ್ಮದ್ ವೀರಿ ವಿರುದ್ಧ ಸೋಲು ಅನುಭವಿಸಿದ್ದಾರೆ.
ಪಿಡಿಪಿ ನಾಯಕಿ ಇಲ್ತಿಜಾ (37ವರ್ಷ) ಶ್ರೀಗುಪ್ವಾರ-ಬಿಜ್ ಬೆಹ್ರಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪಿಡಿಪಿ ಕೇವಲ 4 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. 2014ರಲ್ಲಿ ಪಿಡಿಪಿ 28 ಸ್ಥಾನಗಳಲ್ಲಿ ಜಯಗಳಿಸಿತ್ತು. ಇಂದು ನಡೆಯುತ್ತಿರುವ ಮತಎಣಿಕೆಯಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ 52 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Jammu Kashmir Result: ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ
Haryana: ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ಫೋಗಾಟ್ ಗೆ ಜಯ, ಬಿಜೆಪಿಯ ಯೋಗೇಶ್ ಗೆ ಸೋಲು
Haryana Result: ಬಿಜೆಪಿಗೆ 3ನೇ ಬಾರಿ ಗದ್ದುಗೆ: ಚುನಾವಣ ಆಯೋಗಕ್ಕೆ ಕಾಂಗ್ರೆಸ್ ದೂರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maski; ಚಿರತೆಗೆ ಹೊಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ
Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್
Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ
Jammu Kashmir Poll:ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಜನರು ಒಪ್ಪಿಲ್ಲ: ಫಾರೂಖ್ ಅಬ್ದುಲ್ಲಾ
Koppa; ಸಾಲಬಾಧೆ, ಒತ್ತುವರಿ ತೆರವಿನ ಆತಂಕ; ಆತ್ಮಹತ್ಯೆಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.