ತರಕಾರಿ ಸೇರಿ ಅಗತ್ಯ ವಸ್ತುಗಳ ದರ ಇಳಿಕೆಯಾಗಲಿ


Team Udayavani, Jun 27, 2023, 5:23 AM IST

price hike

ರಾಜ್ಯದಲ್ಲಿ ಮುಂಗಾರು ಮಳೆಯೂ ಸರಿಯಾಗಿ ಸುರಿಯುತ್ತಿಲ್ಲ. ಇದರ ನಡುವೆಯೇ ಅಗತ್ಯ ವಸ್ತುಗಳ ದರ ಗಗನಮುಖೀಯಾಗಿದ್ದು, ಜನ ಪರದಾಡುವಂತಾಗಿದೆ. ಅದರಲ್ಲೂ ಕೋಲಾರದಲ್ಲಿ ಅತೀ ಹೆಚ್ಚಾಗಿ ಬೆಳೆಯುವ ಟೊಮೆಟೊ ದರ ಪ್ರತೀ ಕೆ.ಜಿ.ಗೆ 100 ರೂ. ದಾಟುವ ಹಂತಕ್ಕೆ ಬಂದಿದ್ದು, ಜನ ಆತಂಕಕ್ಕೀಡಾಗಿದ್ದಾರೆ.

ಸದ್ಯ ರಾಜ್ಯದಲ್ಲಿ ಸರಿಯಾಗಿ ಮಳೆ ಬಾರದೇ ಇರುವುದರಿಂದ ರೈತಾಪಿ ಜನ ಅಕ್ಷರಶಃ ಆತಂಕಕ್ಕೀಡಾಗಿದ್ದು, ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಇನ್ನು ವಾರ ಅಥವಾ 15 ದಿನದಲ್ಲಿ ಮಳೆ ಬರದಿದ್ದರೆ, ರೈತರ ಆತಂಕ ಇನ್ನಷ್ಟು ಹೆಚ್ಚಲಿದೆ. ಮುಂಗಾರು ಕೈಕೊಟ್ಟಿರುವುದರಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಮಳೆ ಕೊರತೆ ಕಾಡಿದೆ. ಇದರಲ್ಲಿ 11 ಜಿಲ್ಲೆಗಳನ್ನು ಹಳದಿ ವಲಯ ಎಂದೂ ಗುರುತಿಸಲಾಗಿದೆ. ಈ ಬಾರಿ ಮುಂಗಾರು ಮಳೆ ಕೇರಳ ಪ್ರವೇಶಿಸಿದ್ದೇ ತಡವಾಗಿ. ಆದರೆಬಿಪರ್‌ಜಾಯ್‌ ಚಂಡಮಾರುತದ ಕಾರಣದಿಂದ ಆಗಮನ ಇನ್ನಷ್ಟು ತಡವಾಯಿತು. ಈಗಲೂ ರಾಜ್ಯದಲ್ಲಿ ಸರಿಯಾಗಿ ಮಳೆಯಾಗುತ್ತಲೇ ಇಲ್ಲ. ಈಗಿನ ಪ್ರಕಾರ ರಾಜ್ಯದಲ್ಲಿ ಶೇ.61ರಷ್ಟು ಮಳೆ ಕೊರತೆ ಇದೆ. 16 ಜಿಲ್ಲೆಗಳು ಕೆಂಪು ವಲಯ ಮತ್ತು 4 ಜಿಲ್ಲೆಗಳು ಶ್ವೇತವಲಯದ ವ್ಯಾಪ್ತಿಯಲ್ಲಿವೆ.

ಸದ್ಯ ತರಕಾರಿಗಳ ದರ ಹೆಚ್ಚಾಗಲು ಮಳೆ ಕೊರತೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿರುವ ಸಂಗತಿ. ಟೊಮೆಟೊವನ್ನು ಬಾಂಗ್ಲಾದೇಶ ಸೇರಿ ಬೇರೆ ಬೇರೆ ರಾಜ್ಯಗಳಿಗೆ ರಫ್ತು ಮಾಡುತ್ತಿರುವುದರಿಂದ ಹೆಚ್ಚಿನ ಬೇಡಿಕೆ ಸಿಕ್ಕಿದೆ. ಹೀಗಾಗಿ ಅದರ ಬೇಡಿಕೆ ಹೆಚ್ಚಾಗಿದೆ. ಉಳಿದಂತೆ ಬದನೆಕಾಯಿ, ಕ್ಯಾರೆಟ್‌, ನುಗ್ಗೇಕಾಯಿ, ಹುರುಳಿಕಾಯಿ, ಹಸಿ ಮೆಣಸಿನಕಾಯಿ, ಗೆಡ್ಡೆ ಕೋಸು, ಬೆಳ್ಳುಳ್ಳಿ, ಈರುಳ್ಳಿ, ಆಲೂಗೆಡ್ಡೆ, ಹೀರೇಕಾಯಿ ಸೇರಿದಂತೆ ಹಲವಾರು ತರಕಾರಿಗಳ ಬೆಲೆಯೂ ಬಹಳಷ್ಟು ಏರಿಕೆಯಾಗಿದೆ.

ಅಂದರೆ ಇವುಗಳ ಬೆಲೆ ಹೆಚ್ಚು ಕಡಿಮೆ ಪ್ರತೀ ಕೆ.ಜಿ.ಗೆ 100 ರೂ.ಗಳ ಆಸುಪಾಸಿನಲ್ಲೇ ಇದೆ. ಇದಷ್ಟೇ ಅಲ್ಲ, ಅಕ್ಕಿ, ಬೇಳೆ ದರವೂ ಹೆಚ್ಚಾಗಿದೆ. ತೊಗರಿ ಬೇಳೆ, ಹೆಸರು ಬೇಳೆ, ಅಲಸಂದೆ, ಉದ್ದಿನ ಬೇಳೆ, ಜೀರಿಗೆ, ಮೆಣಸಿನಪುಡಿ, ದನಿಯಾ, ಕಾಳು ಮೆಣಸಿನ ಪುಡಿಯ ದರವೂ ಹೆಚ್ಚಾಗಿದೆ.

ಇನ್ನು ಸೋನಾಮಸೂರಿ ಸೇರಿದಂತೆ ಅಕ್ಕಿ ದರವೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಒಟ್ಟಾರೆಯಾಗಿ ಈ ದರ ಏರಿಕೆಯ ದುನಿಯಾದಿಂದಾಗಿ ಜನಸಾಮಾನ್ಯರ ಬದುಕು ಅತಂತ್ರವಾಗಿದೆ.

ಮಳೆ ಸುರಿಯುವವರೆಗೆ ಈ ಸಮಸ್ಯೆ ತಪ್ಪಿದ್ದಲ್ಲ. ಹೀಗಾಗಿ ಸರಕಾರ ಬೇಳೆ ಕಾಳುಗಳು, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳನ್ನು ಕಾಳಸಂತೆಯಲ್ಲಿ ಸಂಗ್ರಹಿಸಿ ಇಟ್ಟುಕೊಳ್ಳಲು ಬಿಡಬಾರದು. ಇಂಥವರ ಮೇಲೆ ನಿಗಾ ಇರಿಸಿ, ಬೇಡಿಕೆಗೆ ತಕ್ಕಂತೆ ಪೂರೈಕೆಯ ವ್ಯವಸ್ಥೆ ಮಾಡಬೇಕು. ಸಾಧ್ಯವಾದರೆ  ನೆರೆಯ  ರಾಜ್ಯಗಳಿಂದ ತರಿಸಿಕೊಳ್ಳವ ಬಗ್ಗೆಯೂ ಚಿಂತನೆ ನಡೆಸಬೇಕು. ಹಾಗೆಯೇ ತರಕಾರಿಯ ಬೆಲೆ ನಿಯಂತ್ರಣಕ್ಕಾಗಿ ನೆರೆ ರಾಜ್ಯಗಳಿಂದ ತರಿಸಿಕೊಳ್ಳಬಹುದು. ರಾಜ್ಯದಿಂದ ರಫ್ತಾಗುತ್ತಿರುವ ತರಕಾರಿ ಪ್ರಮಾಣವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು.

ಈಗಾಗಲೇ ಬೇರೆ ಬೇರೆ ವಸ್ತುಗಳ ದರ ಹೆಚ್ಚಳದಿಂದ ಬಸವಳಿದಿರುವ ಜನರಿಗೆ ರಾಜ್ಯ ಸರಕಾರವೇ ಪರಿಹಾರ ಒದಗಿಸಬೇಕು.ದುಡಿದಿದ್ದನ್ನು ಕೇವಲ ಈ ವಸ್ತುಗಳ ಖರೀದಿಗಾಗಿಯೇ ವೆಚ್ಚ ಮಾಡುವಂಥ ಸ್ಥಿತಿ ತರಬಾರದು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.