ಮುಸ್ಲಿಮರು ಓಟು ಕೊಡಲ್ಲವೆಂದು ಪ್ರೀತಂಗೌಡ ತಂತ್ರ: ರೇವಣ್ಣ
Team Udayavani, Apr 29, 2023, 6:29 AM IST
ಹಾಸನ: “ಜೆಡಿಎಸ್ಗೆ ಓಟ್ ಹಾಕಿದ್ರೆ ಬಿಜೆಪಿಗೆ ಹಾಕಿದ ರೀತಿ. ದೇವೇಗೌಡರು-ಮೋದಿ ಅವರ ನಡುವೆ ಮಾತುಕತೆ ನಡೆದಿದೆ’ಎಂಬ ಶಾಸಕ ಪ್ರೀತಂಗೌಡ ಹೇಳಿಕೆ ಹತಾಶೆಯ ಪ್ರತೀಕ, ಬ್ಲಾಕ್ ಮೇಲ್ ತಂತ್ರ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಾಗ್ಧಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಬಿಜೆಪಿಯ ಕೆಟ್ಟ ಹುಳ (ಪ್ರೀತಂಗೌಡ ) ಹುಟ್ಟಲು ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ಕಳೆದ ಬಾರಿಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಮಾಡಿದ್ದ ಆರೋಪ ಕಾರಣ. ಈಗ ಮುಸಲ್ಮಾನರು ಬಿಜೆಪಿಗೆ ಓಟು ಕೊಡಲ್ಲವೆಂದು ಹತಾಶೆಯಿಂದ ಹಾಸನದ ಶಾಸಕ
ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ ಎಂದು ಪ್ರೀತಂಗೌಡಗೆ ತಿರುಗೇಟು ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸಖ್ಯ ಬಿಟ್ಟು ಬನ್ನಿ, ಬಿಜೆಪಿ ಬೆಂಬಲದೊಂದಿಗೆ 5 ವರ್ಷ ಮುಖ್ಯಮಂತ್ರಿಯಾಗಿರಿ ಎಂದು ಮೋದಿ ಅವರೇ ಕರೆದಿದ್ದರು. ಆಗಲೇ ಬಿಜೆಪಿ ಸಖ್ಯ ಮಾಡದ ನಾವು ಈಗ ಬಿಜೆಪಿ ಜತೆ ಮೈತ್ರಿಗೆ ಹೋಗುತ್ತೇವೆಯೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
ಕನ್ನಡದಲ್ಲಿ ಎಂಜಿನಿಯರಿಂಗ್ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.