ಇವು ಸಮಸ್ಯೆಗಳ ಜಂಕ್ಷನ್‌; ಜನರಿಗೆ ನಿತ್ಯವೂ ಇಂಜೆಕ್ಷನ್‌! ಸ್ಥಳೀಯರ ಅಗತ್ಯಗಳಿಗೆ ಬೆಲೆ ಇಲ್ಲ


Team Udayavani, Feb 24, 2021, 5:50 AM IST

ಇವು ಸಮಸ್ಯೆಗಳ ಜಂಕ್ಷನ್‌; ಜನರಿಗೆ ನಿತ್ಯವೂ ಇಂಜೆಕ್ಷನ್‌!

ರಾಷ್ಟ್ರೀಯ ಹೆದ್ದಾರಿ 66 ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತ್ಯಂತ ಪ್ರಮುಖವಾದ ರಸ್ತೆ. ವಾಣಿಜ್ಯ ಉದ್ದೇಶಗಳಿಂದ ಹಿಡಿದು ಜನಸಂಪರ್ಕವನ್ನು ಈಡೇರಿಸುವಂಥದ್ದು. ಹಾಗಾಗಿ ಎಲ್ಲದಕ್ಕಿಂತ ಹೆಚ್ಚು ಕಾಳಜಿ ಹಾಗೂ ಎಚ್ಚರವನ್ನು ಈ ರಸ್ತೆಯ ಕಾಮಗಾರಿ ನಿರ್ವಹಿಸುವಾಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾಮಗಾರಿ ನಿರ್ವಹಿಸುವವರು ವಹಿಸಬೇಕು. ಈಗ ಆಗಿರುವುದು ಅದೇ. ಸ್ಥಳೀಯರ ಅಗತ್ಯವನ್ನು ತಿಳಿದುಕೊಳ್ಳದೇ ರಸ್ತೆ ನಿರ್ಮಿಸಿದ್ದರ ಫ‌ಲ ಸ್ಥಳೀಯರು ಸಂಕಷ್ಟ ಎದುರಿಸುವಂತಾಗಿದೆ. ಪ್ರತಿ ಜಂಕ್ಷನ್‌ನ ಕಥೆ ಆರಂಭವಾಗುವುದು ಸಮಸ್ಯೆಯಿಂದಲೇ.

ಕುಂದಾಪುರ: ಇಲ್ಲಿಯ ಸಂಗಮ್‌ನಿಂದ ಶಿರೂರುವರೆಗೆ ಸಿಗುವ ಪ್ರತಿ ಜಂಕ್ಷನ್‌ಗಳಲ್ಲೂ ಮೈಯೆಲ್ಲಾ ಕಣ್ಣಾಗಿಟ್ಟುಕೊಂಡು ಇರಲೇಬೇಕು. ಇಲ್ಲವಾದರೆ ಅಪಾಯವನ್ನು ಆಹ್ವಾನಿಸಿದಂತೆಯೇ.

ಯಾಕೆಂದರೆ 38 ಕಿ.ಮೀ.ನಲ್ಲಿ ಬರುವ ಪ್ರತಿ ಜಂಕ್ಷನ್‌ನಲ್ಲೂ ಕಾದು ನೋಡಿ ಹೋಗಬೇಕು. ಯಾವ ಬದಿಯಿಂದ ಯಾವ ವಾಹನಗಳು ಬರುತ್ತಿವೆ ಎಂಬುದು ತಿಳಿಯುವುದೇ ಇಲ್ಲ. ಕೆಲವೆಡೆ ರಸ್ತೆಯೂ ಏರು ತಗ್ಗಿನಲ್ಲಿರುವುದರಿಂದ ಜಂಕ್ಷನ್‌ ಮತ್ತೂಂದು ಬದಿಯಿಂದ ಬರುವ ವಾಹನಗಳಾಗಲೀ, ವ್ಯಕ್ತಿಗಳಾಗಲೀ ಮಗದೊಂದು ಬದಿಯಿಂದ ಬರುವವರಿಗೆ ತೋರುವುದೇ ಇಲ್ಲ. ಹಾಗಾಗಿ ಜಂಕ್ಷನ್‌ ಖಾಲಿ ಇದೆ ಎಂದೆನಿಸಿದರೂ ಎರಡು ಕ್ಷಣ ವಾಹನಗಳನ್ನು ನಿಲ್ಲಿಸಿ, ಎಲ್ಲ ಬದಿಯನ್ನೂ ಪರಿಶೀಲಿಸಿಯೇ ಮುನ್ನುಗ್ಗಬೇಕು.

ಪ್ರತಿ ಜಂಕ್ಷನ್‌ಗಳದ್ದೂ ಬೇರೆಯೇ ಕಥೆ
ಈ ಎಲ್ಲ ಜಂಕ್ಷನ್‌ಗಳ ಕಾಮಗಾರಿ ಹೇಗಿದೆಯೆಂದರೆ, ಎಸಿ ಕಚೇರಿಯಲ್ಲಿ ಕುಳಿತು ಎಂಜಿನಿಯರ್‌ ಯೋಜನೆಯ ಕರಡು ನಕ್ಷೆ ತಯಾರಿಸಿದರು. ಅದನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅನುಮೋದಿಸಿದರು. ಗುತ್ತಿಗೆ ವಹಿಸಿಕೊಂಡ ಐಆರ್‌ಬಿ ಸಂಸ್ಥೆ ಕಾಮಗಾರಿ ನಿರ್ವಹಿಸಿದರು. ಆದರೆ ಎಲ್ಲೂ ಸಹ ಸ್ಥಳೀಯರ ಆದ್ಯತೆಯೇನು? ಅವರಿಗೆ ಈ ಕಾಮಗಾರಿಯಿಂದ ಆಗಬೇಕಾದ ಅನುಕೂಲವೇನು? ಒಂದುವೇಳೆ ನಮ್ಮ ಲೆಕ್ಕದಲ್ಲಿ ಕಾಮಗಾರಿ ನಿರ್ವಹಿಸಿದರೆ ಸ್ಥಳೀಯರಿಗೆ ಆಗುವ ಸಮಸ್ಯೆಯೇನು? ಇದ್ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳದಿರುವುದು ಜಂಕ್ಷನ್‌ಗಳ ಸಮಸ್ಯೆಯಿಂದಲೇ ಸ್ಪಷ್ಟವಾಗುತ್ತಿದೆ.

ಸಂಗಮ್‌: ಹೆದ್ದಾರಿ ಕ್ರಾಸ್‌ ಮಾಡುವುದೇ ಸಾಹಸ
ಆನಗಳ್ಳಿಯಿಂದ ಕುಂದಾಪುರ ನಗರಕ್ಕೆ ಹೋಗಬೇಕಾದರೆ ಅಥವಾ ಚಿಕನ್‌ಸಾಲ್‌ ರಸ್ತೆ ಯಿಂದ ಆನಗಳ್ಳಿಗೆ ಸಂಚರಿಸಬೇಕಾದರೆ ಸಂಗಮ್‌ ಬಳಿ ವಾಹನ ಚಾಲಕರು ದೊಡ್ಡ ಸಾಹಸವೇ ಮಾಡಬೇಕು. ಎಲ್ಲಿಂದ ಹೇಗೆ ಯಾವ ವಾಹನ ಬರುತ್ತದೋ ತಿಳಿಯದು. ಇನ್ನು ಹೆದ್ದಾರಿ ದಾಟುವುದಂತೂ ಸಾಧ್ಯವೇ ಇಲ್ಲ. ಈ ಜಂಕ್ಷನ್‌ನಲ್ಲಿ ಪ್ರಮುಖವಾಗಿ ಬಸ್‌ ಬೇ ಇರಬೇಕಿತ್ತು, ಅದೇ ಇಲ್ಲ. ಹಾಗಾಗಿ ಬಸ್‌ಗಳೆಲ್ಲ ಹೆದ್ದಾರಿಯಲ್ಲೇ ನಿಲ್ಲುತ್ತವೆ. ಇದರಿಂದ ಟ್ರಾಫಿಕ್‌ ಜಾಮ್‌ ಆಗುತ್ತದೆ. ಅದರೊಂದಿಗೆ ಹೆದ್ದಾರಿಗೆ ಹೊಂದಿಕೊಂಡೇ ಖಾಸಗಿ ಕಾಲೇಜು, ಆಸ್ಪತ್ರೆಗಳಿವೆ. ಇಲ್ಲಿ ಜನಸಂದಣಿ ಹೆಚ್ಚು. ಅವರೆಲ್ಲರೂ ಅತಿ ಪ್ರಯಾಸದಿಂದ ಸಂಚರಿಸುವಂತಾಗಿದೆ.

ಎರಡು ಹೆಜ್ಜೆಯ ಬ್ಯಾಂಕಿಗೆ ಮೂರೂವರೆ ಕಿ.ಮೀ. ಸುತ್ತಬೇಕು
ಹೆಮ್ಮಾಡಿಯ ಜಂಕ್ಷನ್‌ನ ಕಥೆ ಬೇರೆಯದ್ದೇ ಆಗಿದೆ. ಇಲ್ಲಿ ಬಸ್‌ ಬೇ ಕಲ್ಪಿಸಲಾಗಿದೆ. ಆದರೆ ಬೇರಾವುದೇ ಕೆಲಸ ಆಗಿಲ್ಲ. ಬಸ್ಸಿಗಾಗಿ ಕಾಯುವವರೂ ಸಹ ಹೆದ್ದಾರಿಯಲ್ಲೇ ನಿಲ್ಲಬೇಕು. ಇಲ್ಲಿರುವುದು ಒಂದೇ ಒಂದು ರಾಷ್ಟ್ರೀಕೃತ ಬ್ಯಾಂಕ್‌. ಅಲ್ಲಿಗೆ ಹೋಗಬೇಕಾದರೆ ಜನರು ಸುಮಾರು ಮೂರೂವರೆ ಕಿ.ಮೀ. ದೂರದ ತಲ್ಲೂರಿಗೆ ಹೋಗಿ ಬರಬೇಕು. ಇಲ್ಲದಿದ್ದರೆ ಜಂಕ್ಷನ್‌ನಲ್ಲಿ ವಾಹನವಿಟ್ಟು, ನಡೆದೇ ಹೋಗಬೇಕು. ಕೊಲ್ಲೂರು ಕಡೆ ಹಾಗೂ ಹೆಮ್ಮಾಡಿ ಪಂಚಾಯತ್‌ ಕಡೆಯಿಂದ ಇಳಿಜಾರು ಆಗಿದ್ದು, ಎರಡೂ ಕಡೆಗಳ ಒಳ ರಸ್ತೆಗಳಲ್ಲಿ ವೇಗ ನಿಯಂತ್ರಕಗಳಿಲ್ಲದೆ ವಾಹನಗಳು ಒಮ್ಮೆಗೆ ಹೆದ್ದಾರಿಗೆ ನುಗ್ಗುವ ಸ್ಥಿತಿಯೂ ಇದೆ. ಹಾಗಾಗಿ ನಡೆದು ಹೋಗುವುದೂ ದುಬಾರಿ ಎಂಬಂತಾಗಿದೆ.

ಬೈಂದೂರು ಹೊಸ ಬಸ್‌ ನಿಲ್ದಾಣ ಜಂಕ್ಷನ್‌
ಬೈಂದೂರಿನ ಹೊಸ ಬಸ್‌ ನಿಲ್ದಾಣ ಸಮೀಪದ ಡಿವೈಡರ್‌ ಕ್ರಾಸಿಂಗ್‌ ಸಹ ಅವೈಜ್ಞಾನಿಕ ಹಾಗೂ ಅಪಾಯಕಾರಿಯಾಗಿದೆ. ತಾಲೂಕು ಕೇಂದ್ರವಾಗಿರುವುದರಿಂದ ಇಲ್ಲಿ ಅನೇಕ ಸರಕಾರಿ ಕಚೇರಿಗಳು, ಶಾಲಾ- ಕಾಲೇಜುಗಳು, ರೈಲು ನಿಲ್ದಾಣ ಸಂಪರ್ಕ ಬರುವುದರಿಂದ ನಿತ್ಯ ಸಾವಿರಾರು ಮಂದಿ ಸಂಚರಿಸುತ್ತಾರೆ. ರಸ್ತೆ ದಾಟುವುದು ತೀರಾ ಕಷ್ಟವಾಗಿದೆ. ಇದರೊಂದಿಗೆ ನಾವುಂದ, ಅರೆಹೊಳೆ ಕ್ರಾಸ್‌, ಕಂಬದಕೋಣೆ, ಉಪ್ಪುಂದ, ಯಡ್ತರೆ (ಕೊಲ್ಲೂರು ಕ್ರಾಸ್‌) ಬಳಿಯೂ ಸಮರ್ಪಕ ವ್ಯವಸ್ಥೆಯಿಲ್ಲ.

ಆಗಬೇಕಾದದ್ದು ಏನು?
ಬಹಳ ಮುಖ್ಯವಾಗಿ ಜಂಕ್ಷನ್‌ಗಳಲ್ಲಿ ವೇಗ ನಿಯಂತ್ರಕಗಳನ್ನು (ವಾಹನಗಳು ಬರುವ ಎಲ್ಲ ಬದಿಯಲ್ಲಿ)ಅಳವಡಿಸಬೇಕು. ಜಂಕ್ಷನ್‌ ನ ಎಲ್ಲ ಬದಿಗಳಲ್ಲೂ ಅನತಿ ದೂರದಲ್ಲೇ ಸೂಚನಾ ಫ‌ಲಕಗಳನ್ನು ಹಾಕಬೇಕು. ಅಗತ್ಯವಾಗಿ ಬಸ್‌ ಬೇ ಗಳನ್ನು ಒದಗಿಸಿ ಬಸ್‌ ನಿಲುಗಡೆಯನ್ನು ಅದರಲ್ಲಿ ಕಡ್ಡಾಯಗೊಳಿಸಬೇಕು. ಪ್ರತಿ ಜಂಕ್ಷನ್‌ನಲ್ಲೂ ಸರ್ವೀಸ್‌ ರೋಡ್‌ ಕಡ್ಡಾಯವಾಗಿ ನೀಡಬೇಕು.

ತ್ರಾಸಿ: ಅಪಘಾತದ ತಾಣ
ತ್ರಾಸಿ ಜಂಕ್ಷನ್‌ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಪಘಾತದ ತಾಣವಾಗಿ ಮಾರ್ಪಟ್ಟಿದೆ. ಮೊವಾಡಿಯಿಂದ ಗಂಗೊಳ್ಳಿ ಕಡೆಗೆ ಹೋಗಬೇಕಾದರೆ ಪ್ರಯಾಸಪಡಲೇಬೇಕು. ಹೆದ್ದಾರಿ ಕ್ರಾಸ್‌ ಮಾಡುವಾಗ ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಬಸ್‌ಗಳು ಹೆದ್ದಾರಿಯಲ್ಲೇ ನಿಲ್ಲುತ್ತಿವೆೆ. ಒಂದು ಕಡೆ ನಿಲ್ದಾಣವಿದೆ. ಇನ್ನೊಂದು ಕಡೆ ಬಸ್‌ ನಿಲ್ದಾಣವಿಲ್ಲ. ಮುಳ್ಳಿಕಟ್ಟೆ ಜಂಕ್ಷನ್‌ ಕಥೆಯೂ ಇದೇ. ಗಂಗೊಳ್ಳಿ, ಆಲೂರು ಸಂಪರ್ಕಿಸುವ ಪ್ರಮುಖ ಜಂಕ್ಷನ್‌ ಇದಾಗಿದ್ದರೂ ಸಮರ್ಪಕ ವ್ಯವಸ್ಥೆ ಇಲ್ಲಿಲ್ಲ. ಆಲೂರು ಕಡೆಯಿಂದ ಬರುವ ರಸ್ತೆ ಕೆಳ ಮಟ್ಟದಲ್ಲಿದ್ದು, ಹೆದ್ದಾರಿಗೆ ಬಂದು ಗಂಗೊಳ್ಳಿಗೆ ಹೋಗಬೇಕಾದರೆ ದೊಡ್ಡ ಸಾಹಸವೇ ಮಾಡಬೇಕಿದೆ.

ತಲ್ಲೂರು: ಘನ ವಾಹನ ತಿರುಗುವುದೇ ಇಲ್ಲ
ಕುಂದಾಪುರ, ಬೈಂದೂರು, ಕೊಲ್ಲೂರು, ಹಟ್ಟಿಯಂಗಡಿ, ಉಪ್ಪಿನಕುದ್ರು ಊರುಗಳನ್ನು ಸಂಧಿಸುವ ಪ್ರಮುಖ ಜಂಕ್ಷನ್‌ ತಲ್ಲೂರು. ಇಲ್ಲಿ ನಿರ್ಮಿಸಿರುವ ಜಂಕ್ಷನ್‌ ಹೇಗಿದೆಯೆಂದರೆ, ಕುಂದಾಪುರದಿಂದ ಬಂದ ಘನ ವಾಹನ, ಟ್ರಕ್‌, ಕಂಟೈನರ್‌ಗಳು ಹಟ್ಟಿಯಂಗಡಿ, ನೇರಳಕಟ್ಟೆ ಕಡೆಗೆ ತಿರುಗುವುದೇ ಕಷ್ಟ. ಉಪ್ಪಿನಕುದ್ರುವಿನಿಂದ ಬಂದ ಬಸ್‌ ಕುಂದಾಪುರಕ್ಕೆ ಹೆದ್ದಾರಿ ಮಧ್ಯೆಯೇ ತಿರುಗಿ ಹೋಗಬೇಕಿದೆ. ಪ್ರಮುಖ ಜಂಕ್ಷನ್‌ ಆಗಿದ್ದು, ಯಾವುದೇ ಸೌಲಭ್ಯವೂ ಇಲ್ಲ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Kundapura: ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Gangolli: ಗೋ ಕಳವಿಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳ ಬಂಧನ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.