![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 23, 2021, 5:42 PM IST
ಬೆಳಗಾವಿ: ‘ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧ ಮಾಡಿದರೆ ಸಮಸ್ಯೆ ಬಗೆಹರಿಯುವದಿಲ್ಲ. ಬದಲಾಗಿ ಅವರ ಮನಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಗುರುವಾರ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಸಮಿತಿ ನಿಷೇಧ ಮಾಡಿದ ಮಾತ್ರಕ್ಕೆ ಅದರ ಸದಸ್ಯರು ಬದಲಾಗುವದಿಲ್ಲ. ಒಂದು ಸಂಘಟನೆ ನಿಷೇಧ ಮಾಡಿದರೆ ಮತ್ತೊಂದು ಸಂಘಟನೆ ಕಟ್ಟುತ್ತಾರೆ. ಹೀಗಾಗಿ ನಿಷೇಧದ ಬದಲು ಅವರ ಮನಸ್ಸು ಪರಿವರ್ತನೆ ಮಾಡಬೇಕಾಗಿದೆ’ ಎಂದರು.
‘ಎಂಇಎಸ್ ನಲ್ಲಿ ಎಲ್ಲ ಸಮಾಜದ ಜನರಿದ್ದಾರೆ. ಆದರೆ ಕೆಲವರು ಮಾತ್ರ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಮಿತಿಯನ್ನು ಜೀವಂತವಾಗಿಟ್ಟುಕೊಂಡಿದ್ದಾರೆ. ಬೆಂಗಳೂರಿನಿಂದ ಕೆಲವರು ಬಂದು ಹೇಳಿಕೆ ನೀಡಿ ಹೋಗುತ್ತಾರೆ. ಕೇವಲ ಹೇಳಿಕೆಗಳಿಂದ ನಾಡದ್ರೋಹಿ ಚಟುವಟಿಕೆ ಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.
‘ಮತಾಂತರ ನಿಷೇಧ ಕಾಯ್ದೆ ಅರ್ ಎಸ್ ಎಸ್ ಕಾರ್ಯಸೂಚಿ’ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಇದಕ್ಕೂ ಅರ್ ಎಸ್ ಎಸ್ ಗೂ ಯಾವುದೇ ಸಂಬಂಧ ಇಲ್ಲ. ಪದೆ ಪದೆ ಅವರ ಹೆಸರು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ತನ್ನ ಬೌದ್ದಿಕ ದಿವಾಳಿತನ ತೋರಿಸುತ್ತಿದೆ’ ಎಂದು ತಿರುಗೇಟು ನೀಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.