![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 7, 2021, 6:50 PM IST
ದುಬೈ: ಇಲ್ಲಿ ಗುರುವಾರ ನಡೆದ 53ನೇ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ರಾಹುಲ್ ಪಡೆಗೆ ಪ್ಲೇ ಆಫ್ ಪ್ರವೇಶಿಸಬೇಕಾದರೆ ಉಳಿದ ಪಂದ್ಯಗಳ ಫಲಿತಾಂಶಗಳನ್ನು ಲೆಕ್ಕಾಚಾರ ಹಾಕಿ ನೋಡಬೇಕಾಗಿದೆ.ಮುಂಬೈ, ಕೆಕೆಆರ್, ರಾಜಸ್ಥಾನ್ ಮತ್ತು ಪಂಜಾಬ್ ನಡುವೆ ಪ್ಲೇ ಆಫ್ ಪೈಪೋಟಿ ಏರ್ಪಟ್ಟಿದೆ.
ಲೀಗ್ ಹಂತದ 3 ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಇಂದು ಕೆಕೆಆರ್ ಮತ್ತು ರಾಜಸ್ಥಾನ್ ಸೆಣಸಲಿವೆ. ನಾಳಿನ 2 ಪಂದ್ಯಗಳಲ್ಲಿ ಹೈದರಾಬಾದ್ ಎದುರು ಮುಂಬೈ ಕಣಕ್ಕಿಳಿದರೆ ಇನ್ನೊಂದು ಪಂದ್ಯದಲ್ಲಿ ಆರ್ ಸಿಬಿ ಮತ್ತು ಅಗ್ರ ಸ್ಥಾನದಲ್ಲಿರುವ ಡೆಲ್ಲಿ ಮುಖಾಮುಖಿ ಯಾಗಲಿವೆ. ಕೆಕೆಆರ್, ಮುಂಬೈ, ರಾಜಸ್ಥಾನ್ ಮತ್ತು ಪಂಜಾಬ್ ಪೈಕಿ ಯಾವ ತಂಡ ಪ್ಲೇ ಆಫ್ ಪ್ರವೇಶಿಸಲಿದೆ ಎನ್ನುವ ಕುತೂಹಲ ಐಪಿಎಲ್ ಅಭಿಮಾನಿಗಳದ್ದಾಗಿದೆ.
ರಾಜಸ್ಥಾನ್ ಕೋಲ್ಕತಾವನ್ನು ಸೋಲಿಸಬೇಕು,ಜತೆಗೆ ಮುಂಬೈಯನ್ನು ಹೈದರಾಬಾದ್ ಪರಾಭವಗೊಳಿಸಬೇಕು. ಆಗಷ್ಟೇ ಪಂಜಾಬ್ “ಕಿಂಗ್’ ಎನಿಸಲಿದೆ!
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಗೆ ಇಳಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲಷ್ಟೇ ಶಕ್ತವಾಯಿತು.
ಗುರೀ ಬೆನ್ನಟ್ಟಿದ ರಾಹುಲ್ ಪಡೆ 13 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಭರ್ಜರಿ ಆಟವಾಡಿದ ರಾಹುಲ್ 42 ಎಸೆತಗಳಲ್ಲಿ 98 ರನ್ ಗಳಿಸಿ ಅಜೇಯರಾಗಿ ಉಳಿದರು.
ಚೆನ್ನೈ ಪರ ಡು ಫ್ಲೆಸಿಸ್ ಗರಿಷ್ಠ 76 ರನ್ ಗಳಿಸಿದರು. ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ 12 ,ನಾಯಕ ಧೋನಿ 12 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಜಡೇಜಾ 15 ರನ್ ಕೊಡುಗೆ ನೀಡಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.