ಗಣರಾಜ್ಯೋತ್ಸವ: ಸಂಭಾವ್ಯ ಉಗ್ರರ ದಾಳಿ ಸಂಚು ವಿಫಲ, RDX, ಗ್ರೆನೇಡ್ ಲಾಂಚರ್ ವಶಕ್ಕೆ
ಆರ್ ಡಿಎಕ್ಸ್, ಟೈಮರ್, ಐಇಡಿಯನ್ನು ಗುರುದಾಸ್ ಪುರದಲ್ಲಿ ವಶಕ್ಕೆ
Team Udayavani, Jan 22, 2022, 12:37 PM IST
ಚಂಡೀಗಢ: 3.79 ಕೆಜಿ ಆರ್ ಡಿಎಕ್ಸ್, ಒಂಬತ್ತು ಡಿಟೋನೇಟರ್ಸ್, ಎರಡು ಸೆಟ್ಸ್ ಟೈಮರ್ ಉಪಕರಣವನ್ನು ಪಂಜಾಬ್ ನ ಗುರುದಾಸ್ ಪುರ್ ಪೊಲೀಸರು ವಶಪಡಿಸಿಕೊಳ್ಳುವ ಮೂಲಕ ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಿದ್ದ ಸಂಭಾವ್ಯ ಉಗ್ರರ ದಾಳಿಯನ್ನು ವಿಫಲಗೊಳಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ: ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ
ಭಯೋತ್ಪಾದಕ ದಾಳಿ ನಡೆಸುವ ಸಂಚಿನ ಆರೋಪದ ಮೇಲೆ ಗುರುವಾರ ಗುರುದಾಸ್ ಪುರ್ ಪೊಲೀಸರು ಗಾಜಿಕೋಟ್ ಗ್ರಾಮದ ನಿವಾಸಿ ಮಲ್ಕೀತ್ ಸಿಂಗ್ ಎಂಬಾತನನ್ನು ಬಂಧಿಸಿದ್ದು, ವಿಚಾರಣೆ ಸಂದರ್ಭದಲ್ಲಿ ಬಾಯ್ಬಿಟ್ಟ ವಿಷಯದ ಆಧಾರದ ಮೇಲೆ ಸ್ಫೋಟಕ ಹಾಗೂ ಉಪಕರಣಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ಮೋಹಿನೀಶ್ ಚಾವ್ಲಾ ತಿಳಿಸಿದ್ದಾರೆ.
ಗಣರಾಜ್ಯೋತ್ಸದಂದು ನಡೆಸಲು ಉದ್ದೇಶಿಸಿದ್ದ ಸಂಭಾವ್ಯ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದೇವೆ ಎಂದು ತಿಳಿಸಿರುವ ಪಂಜಾಬ್ ಪೊಲೀಸರು, 40ಎಂಎಂನ ರಾಕೆಟ್ ಲಾಂಚರ್, ಆರ್ ಡಿಎಕ್ಸ್, ಟೈಮರ್, ಐಇಡಿಯನ್ನು ಗುರುದಾಸ್ ಪುರದಲ್ಲಿ ವಶಕ್ಕೆ ತೆಗೆದುಕೊಂಡಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಚಾವ್ಲಾ ಅವರು ತಿಳಿಸಿದ್ದಾರೆ.
ಪಾಕಿಸ್ತಾನ ಮೂಲದ ಇಂಟರ್ ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ (ಐಎಸ್ ವೈಎಫ್) ನ ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡೆ ಈ ಸ್ಫೋಟಕ ಹಾಗೂ ಉಪಕರಣಗಳನ್ನು ಗಡಿಭಾಗಕ್ಕೆ ಕಳುಹಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.