ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ


Team Udayavani, Feb 28, 2021, 5:20 AM IST

ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ

ಪುತ್ತೂರು ಜಿಲ್ಲೆಯಾಗಬೇಕೆಂಬ ಬೇಡಿಕೆ ಈಡೇರಿದರೆ ತಾಲೂಕುಗಳಿಗೂ ಸಾಕಷ್ಟು ಲಾಭವಾಗಲಿದೆ. ಬೆಳ್ತಂಗಡಿ ಬಹಳ ಪ್ರಮುಖವಾದ ತಾಲೂಕು. ಆದರೆ ಅಭಿವೃದ್ಧಿಯ ಲೆಕ್ಕಾಚಾರದಲ್ಲಿ ಇನ್ನಷ್ಟು ವೇಗದಲ್ಲಿ ಸಾಗಬೇಕಿದೆ. ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೆ ಒಂದಿಷ್ಟು ಅವಕಾಶ ಹೆಚ್ಚುವ ಸಾಧ್ಯತೆ ಇದೆ.

ಬೆಳ್ತಂಗಡಿ: ದ.ಕ. ಜಿಲ್ಲೆಯ ಅತೀ ದೊಡ್ಡ ವಿಧಾನ ಸಭಾ ಕ್ಷೇತ್ರವನ್ನು ಹೊಂದಿರುವ ಬೆಳ್ತಂಗಡಿ ತಾಲೂಕು ಪ್ರಾದೇಶಿಕವಾಗಿ ಅತ್ತ ಚಿಕ್ಕಮಗಳೂರು-ಇತ್ತ ಮಂಗಳೂರು ಸಂಪರ್ಕ ಕೇಂದ್ರದ ಮಧ್ಯ ಹರಡಿ ಕೊಂಡಿದೆ. ಜಿಲ್ಲಾವಾರು ಸಿಗುವ ಅನುದಾನದಲ್ಲಿ ಅಭಿವೃದ್ಧಿಗಾಗಿ ಹಂಬಲಿಸುತ್ತಿರುವ ತಾಲೂಕಿಗೆ ಸಿಗುತ್ತಿರುವ ಪ್ರಮಾಣ ಸಾಲದಾಗುತ್ತಿದೆ.

ಈ ಮಧ್ಯೆ ಪುತ್ತೂರು ಜಿಲ್ಲೆಯಾಗ ಬೇಕೆಂಬ ದಶಕಗಳ ಕೂಗಿಗೆ ಗ್ರಾಮೀಣ ಭಾಗವಾದ ಬೆಳ್ತಂಗಡಿ ತಾಲೂಕಿನ ಜನತೆಯೂ ಕಿವಿಯಾಗಿದ್ದಾರೆ. ಮಂಗಳೂರು- ವಿಲ್ಲುಪುರಂ, ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋದರೂ ಕೈಗಾರಿಕೆ, ಉದ್ಯಮ ವಿಷಯದಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಜಿಲ್ಲೆಯಾದರೆ ಗ್ರಾಮೀಣ ಭಾಗಕ್ಕೆ ಆದ್ಯತೆ ಹೆಚ್ಚು ಸಿಗಬಹುದು. ಅದು ಸಾಧ್ಯವಾದರೆ ಬೆಳ್ತಂಗಡಿಗೂ ಅನುಕೂಲವಾಗಲಿದೆ ಎಂಬುದು ಸದ್ಯದ ಲೆಕ್ಕಾಚಾರ.

ಪ್ರವಾಸೋದ್ಯಮ ಅಭಿವೃದ್ಧಿ
ಪುತ್ತೂರು ಜಿಲ್ಲೆಯಾದರೆ ಜಿಲ್ಲಾಧಿಕಾರಿಗಳು ಕಚೇರಿ ಪುತ್ತೂರು ಬಂದಲ್ಲಿ, ಸಹಾಯಕ ಆಯುಕ್ತರ ಕಚೇರಿ ಬೆಳ್ತಂಗಡಿ ಬರುವ ಸಾಧ್ಯತೆ ಇದೆ. ಹಾಗಾದಲ್ಲಿ ಅಧಿಕಾರಿಗಳ ಮೇಲಿನ ಒತ್ತಡ ತಗ್ಗಲಿದ್ದು, ಗ್ರಾಮೀಣರ ಸಂಕಷ್ಟಗಳನ್ನು ಹತ್ತಿರದಿಂದ ಆಲಿಸಲು, ಸಮಸ್ಯೆಗೆ ಶೀಘ್ರ ಸ್ಪಂದಿಸಲು ಸಾಧ್ಯ. ಬೆಳ್ತಂಗಡಿ ತಾಲೂಕಿಗೆ ಧಾರ್ಮಿಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಮುಕುಟಪ್ರಾಯ. ಪ್ರವಾಸೋದ್ಯಮವಾಗಿ ಶಿಶಿಲ ಶಿಶಿಲೇಶ್ವರ ಮತ್ಸಕ್ಷೇತ್ರ, ಸುರ್ಯ ಸದಾಶಿವರುದ್ರ ದೇವಸ್ಥಾನ, ಕೊಕ್ಕಡ ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರ ಸೇರಿದಂತೆ ಚಾರಣಿಗ ಸ್ವರ್ಗ ಐತಿಹಾಸಿಕ ಗಡಾಯಿಕಲ್ಲು, ಚಾರ್ಮಾಡಿ ಘಾಟ್‌, ಜಲಪಾತ ರಮಣೀಯ ತಾಣಗಳ ಅಭಿವೃದ್ಧಿಗೆ ಪೂರಕ ಅನುದಾನ ಲಭ್ಯವಾಗಬಹುದು. ಇದರಿಂದ ಸ್ಥಳೀಯ ಆರ್ಥಿಕತೆಯೂ ಬೆಳೆಯಬಹುದು.

ಕೈಗಾರಿಕೆ ಹಬ್‌ ಸ್ಥಾಪನೆ
ಗ್ರಾಮೀಣ ಭಾಗದಲ್ಲಿ ಅತೀ ಹೆಚ್ಚು ಮಂದಿ ವಿದ್ಯಾವಂತರಿದ್ದರೂ ಉದ್ಯೋಗ ಅರಸಿ ಬೆಂಗಳೂರು, ಮಂಗಳೂರಿನತ್ತ ಮುಖ ಮಾಡುವರೇ ಹೆಚ್ಚು. ಈಗಾಗಲೆ ಕೈಗಾರಿಕೆ ಸ್ಥಾಪನೆಗೆ ಜಿಲ್ಲಾಡಳಿತದಿಂದ ಸ್ಥಳಾವಕಾಶ ಕಲ್ಪಿಸಲಾಗಿದೆ. ಆದರೆ ಕೈಗಾರಿಕೆ ಸ್ಥಾಪನೆಯಾಗಿಲ್ಲ. ಇದರ ಸ್ಥಾಪನೆಗೂ ಹೆಚ್ಚು ಗಮನ ನೀಡಬಹುದು.

ನಿಗಮಗಳ ಮೂಲಕ ಅಭಿವೃದ್ಧಿ
ಅಂಬೇಡ್ಕರ್‌ ನಿಗಮ, ದೇವರಾಜು ಅರಸು ನಿಗಮ ಸೇರಿದಂತೆ ಅನೇಕ ನಿಗಮಗಳಿಗೆ ಜಿಲ್ಲಾಧಿಕಾರಿಗಳೇ ಅಧ್ಯಕ್ಷರಾಗಿರುತ್ತಾರೆ.ಸದ್ಯ ಸಿಗುವ ಅನುದಾನ ಎಲ್ಲ ತಾಲೂಕುಗಳಿಗೆ ಹರಿದು ಹಂಚಿಹೋಗುತ್ತಿದೆ. ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿ ತಾಲೂಕಿನಲ್ಲಿ ಅತಿ ಹೆಚ್ಚು ಮಲೆಕುಡಿಯ, ಪ.ಜಾತಿ/ಪಂ. ಕುಟುಂಗಳಿದ್ದು, ಅವುಗಳ ಅಭಿವೃದ್ಧಿ ಪೂರಕ ಅನುದಾನ ಜತೆಗೆ ಅವರ ಮಕ್ಕಳ ಶಿಕ್ಷಣ ಪೂರಕವಾಗಲಿದೆ.

ಕಂದಾಯ ಇಲಾಖೆ ಸೇರಿದಂತೆ ಅನೇಕ ಸರಕಾರಿ ಇಲಾಖೆಗಳು ಜಿಲ್ಲಾಕೇಂದ್ರಕ್ಕೆ ಬಂದರೆ ಅದರ ಲಾಭ ತಾಲೂಕಿಗೂ ಆಗುತ್ತದೆ. ಇದರೊಂದಿಗೆ ಇನ್ನಷ್ಟು ಕಾಲೇಜುಗಳು, ವಿದ್ಯಾಸಂಸ್ಥೆಗಳು ಬಂದರೆ ಗ್ರಾಮೀಣ ಭಾಗ ವಿದ್ಯಾರ್ಥಿಗಳಿಗೆ ಕಲಿಕೆಗೆ ಮತ್ತಷ್ಟು ಅವಕಾಶಗಳೂ ತೆರೆಯಬಹುದು.

ಕೃಷಿ ಪಾರ್ಕ್‌ ನಿರ್ಮಾಣ
ಬೆಳ್ತಂಗಡಿ, ಸುಳ್ಯ ಈ ಭಾಗದಲ್ಲಿ ಕೃಷಿ ಆಶ್ರಿತ ಭೂಮಿಗಳು ಅತೀ ಹೆಚ್ಚಿವೆ. ಆದರೆ ಸೂಕ್ತ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆಯಿಲ್ಲ. ಕೃಷಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಒದಗಿಸಲು ಕೃಷಿ ಪಾರ್ಕ್‌ ನಿರ್ಮಾಣಕ್ಕೂ ಉತ್ತೇಜನ ಸಿಗಬಹುದು. ಇದಲ್ಲದೆ ಎಸ್‌ಇಝೆಡ್‌ ಅನುದಾನಗಳು ಬರಬಹುದು.

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.