ಸ್ವಾವಲಂಬನೆ ಏನಾಯ್ತು;ದೇಶದಲ್ಲಿ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನಿದೆ:ಪ್ರಧಾನಿಗೆ ರಾಹುಲ್
ಸಣ್ಣ ಕೈಗಾರಿಕೆಗಳು ನಷ್ಟದಿಂದ ಮುಚ್ಚುವುದನ್ನು ತಡೆಯಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
Team Udayavani, Apr 20, 2022, 3:45 PM IST
ನವದೆಹಲಿ: ದೇಶದಲ್ಲಿನ ಕಲ್ಲಿದ್ದಲು ಮತ್ತು ವಿದ್ಯುತ್ ಕೊರತೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ (ಏಪ್ರಿಲ್ 20) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸಿದ್ದು, ದೇಶದಲ್ಲಿ ಕೇವಲ 8 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನು ಇದ್ದಿರುವುದಾಗಿ ತಿಳಿಸಿದ್ದಾರೆ.
“ಕಳೆದ ಎಂಟು ವರ್ಷಗಳಿಂದ ದೊಡ್ಡ, ದೊಡ್ಡ ಮಾತುಗಳನ್ನಾಡಿರುವ ಪರಿಣಾಮ ಇದೀಗ ಭಾರತದಲ್ಲಿ ಕೇವಲ 8 ದಿನಗಳಿಗಾಗುವಷ್ಟು ಮಾತ್ರ ಕಲ್ಲಿದ್ದಲು ದಾಸ್ತಾನು” ಇದ್ದಿರುವುದಾಗಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿರುವುದಾಗಿ ವರದಿ ಹೇಳಿದೆ.
ಕೇಂದ್ರ ಸರ್ಕಾರ ಪ್ರತಿಕಾರದ ಬುಲ್ಡೋಜರ್ ಕಾರ್ಯಾಚರಣೆ ನಿಲ್ಲಿಸಬೇಕು, ಜತೆಗೆ ವಿದ್ಯುತ್ ಘಟಕಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಣ್ಣ ಕೈಗಾರಿಕೆಗಳು ನಷ್ಟದಿಂದ ಮುಚ್ಚುವುದನ್ನು ತಡೆಯಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಮೋದಿಜೀ ದೇಶದಲ್ಲಿ ಹಣದುಬ್ಬರ, ನಿರುದ್ಯೋಗ ಹೆಚ್ಚಳವಾಗುತ್ತಿದೆ. ವಿದ್ಯುತ್ ಕಡಿತದಿಂದ ಸಣ್ಣ ಕೈಗಾರಿಕೆಗಳು ಮುಚ್ಚಲಿದ್ದು, ಇದರಿಂದ ಹೆಚ್ಚಿನ ಉದ್ಯೋಗ ನಷ್ಟವಾಗಲಿದೆ. ಪ್ರತಿಕಾರದ ಬುಲ್ಡೋಜರ್ಸ್ ಕಾರ್ಯಾಚರಣೆ ನಿಲ್ಲಿಸಿ, ವಿದ್ಯುತ್ ಘಟಕಗಳ ಬಗ್ಗೆ ಹೆಚ್ಚಿನ ಗಮನಕೊಡಿ” ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ದೇಶದಲ್ಲಿ ಭಾರೀ ಪ್ರಮಾಣದಲ್ಲಿ ಕಲ್ಲಿದ್ದಲು ಕೊರತೆ ಮತ್ತು ವಿದ್ಯುತ್ ಸರಬರಾಜು ಬಿಕ್ಕಟ್ಟು ಕಾಣಿಸಿಕೊಂಡ ವರದಿಯ ಹಿನ್ನೆಲೆಯಲ್ಲಿ ಮಂಗಳವಾರ ಅಮಿತ್ ಶಾ ಅವರು ಇಂಧನ ಸಚಿವ ಆರ್ ಕೆ ಸಿಂಗ್, ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜತೆ ಸಭೆ ನಡೆಸಿದ್ದರು.
ಪ್ರಧಾನಿಗೆ ತಿರುಗೇಟು:
ಕಲ್ಲಿದ್ದಲು ಆಮದು ಕಡಿಮೆ ಮಾಡುವ ಮೂಲಕ ಭಾರತವನ್ನು ಇಂಧನದಲ್ಲಿ ಸ್ವಾವಲಂಬಿಯನ್ನಾಗಿಸಲು ವಾಣಿಜ್ಯ ಗಣಿಗಾರಿಕೆಗಾಗಿ 41 ಕಲ್ಲಿದ್ದಲು ಗಣಿಗಳನ್ನು ಹರಾಜು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು 2020ರ ಜೂನ್ 18ರಂದು ಘೋಷಣೆ ಹೊರಡಿಸಿರುವ ಫೋಟೋವನ್ನು ಟ್ವೀಟ್ ಮಾಡಿ ರಾಹುಲ್ ಗಾಂಧಿ ತಿರುಗೇಟು ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Bigg Boss Marathi 5: ಬಿಗ್ ಬಾಸ್ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.