ರೈಲಿನಲ್ಲಿ ಚಿನ್ನಾಭರಣದ ಬ್ಯಾಗ್ ಕಳ್ಳತನ! 14 ತಾಸಿನಲ್ಲಿ ಕಳ್ಳನನ್ನ ಬಂಧಿಸಿದ ರೇಲ್ವೆ ಪೊಲೀಸ್

ಉಡುಪಿ ಮೂಲದ ಮಹಿಳೆ ಬ್ಯಾಗ್‌ ಕದ್ದಿದ್ದ ಕದೀಮ

Team Udayavani, Nov 15, 2020, 9:25 PM IST

ರೈಲಿನಲ್ಲಿ ಚಿನ್ನಾಭರಣದ ಬ್ಯಾಗ್ ಕಳ್ಳತನ! 14 ತಾಸಿನಲ್ಲಿ ಕಳ್ಳನನ್ನ ಬಂಧಿಸಿದ ರೇಲ್ವೆ ಪೊಲೀಸ್

ಕಾರವಾರ: ಉಡುಪಿಯಿಂದ ಮುಂಬೈಗೆ ಮಂಗಳಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಳ್ಳತನವಾಗಿದ್ದ ಮಹಿಳಾ ಪ್ರಯಾಣಿಕರ ಬ್ಯಾಗ್‌ ಆಭರಣ ಸಮೇತ ಮರಳಿ ಹುಡುಕುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.

ವನಿತಾ ದಿವಾಕರ ಶೆಟ್ಟಿ ಕಳೆದುಕೊಂಡಿದ್ದ 2.20 ಲಕ್ಷ ರೂ. ಬೆಲೆಯ ಬಂಗಾರದ ಆಭರಣಗಳು ಸಹ ಮರಳಿ ಸಿಕ್ಕಿವೆ. ರೈಲ್ವೆ ಪೊಲೀಸರು ಬ್ಯಾಗ್‌ ಕಳ್ಳನನ್ನು ಸಿಸಿಟಿವಿ ಕ್ಯಾಮರಾ ನೆರವಿನಿಂದ ಸೆರೆ ಹಿಡಿದಿದ್ದಾರೆ.

ಮಂಗಳಾ ಎಕ್ಸ್‌ಪ್ರೆಸ್‌ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ವನಿತಾ ಶೆಟ್ಟಿ ಬ್ಯಾಗ್‌ನಲ್ಲಿ ಬಂಗಾರದ ಬಳೆ, ಮಾಂಗಲ್ಯ, ಎಟಿಎಂ, ಆಧಾರ್‌ ಕಾರ್ಡ್‌, 6000 ನಗದುಳ್ಳ ಬ್ಯಾಗ್‌ನೊಂದಿಗೆ ಮುಂಬೈಗೆ ಪ್ರಯಾಣಿಸುತ್ತಿದ್ದರು. ಉಡುಪಿಯಿಂದ ಹೊರಟ ಸ್ವಲ್ಪ ಹೊತ್ತಿನಲ್ಲೇ ಅವರ ಬ್ಯಾಗ್‌ ಕಾಣೆಯಾಗಿತ್ತು. ತಕ್ಷಣವೇ ಟಿಟಿಇ ಅವರ ಗಮನಕ್ಕೆ ತಂದಿದ್ದಾರೆ. ಈ ವಿಷಯ ಕ್ಷಣಾರ್ಧದಲ್ಲಿ ಮಡಗಾಂವ್‌ ಆರ್‌ಪಿಎಫ್‌ ವಿನೋದಕುಮಾರ್‌ಗೆ ತಲುಪಿದೆ. ಅವರು ಸಿಸಿಟಿವಿ ಪರೀಕ್ಷಿಸಿದಾಗ ಕ್ಯಾಪ್‌ ಧರಿಸಿದ್ದ ವ್ಯಕ್ತಿಯ ಅನುಮಾನಾಸ್ಪದ ಚಲನವಲನ ಎಸಿ ಕೋಚ್‌ನಲ್ಲಿ ಕಂಡು ಬಂದದ್ದನ್ನು ಎಲ್ಲಾ ರೈಲ್ವೆ ನಿಲ್ದಾಣಗಳ ಪೊಲೀಸರ ವ್ಯಾಟ್ಸ್‌ಆ್ಯಪ್‌ ಗ್ರೂಪ್‌ಗೆ ಹಂಚಿದ್ದಾರೆ.

ಇದನ್ನೂ ಓದಿ:ದೀಪಾವಳಿ ಹಬ್ಬಕ್ಕೆ ಊರಿಗೆ ಬರುತ್ತಿದ್ದ ಕಾರು ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ

ಮಂಗಳಾ ಎಕ್ಸ್‌ಪ್ರೆಸ್‌ನಲ್ಲಿ ಕದ್ದ ಕಳ್ಳ ಶನಿವಾರ ನೇತ್ರಾವತಿ ಎಕ್ಸ್‌ಪ್ರೆಸ್‌ನಲ್ಲಿ ಊರಿಗೆ ಮರಳುತ್ತಿದ್ದ. ಆತನನ್ನು ಕಾರವಾರದ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಕರ್ತವ್ಯದಲ್ಲಿದ್ದ ಪೊಲೀಸ್‌ ವಿನಾಯಕ ಆರ್‌.ಡಿ. ಗುರುತಿಸಿದ್ದಾರೆ. ಕೊಂಕಣ ರೈಲ್ವೆ ಪೊಲೀಸರ ಸಹಾಯದಿಂದ ಕಳ್ಳತನ ಮಾಡಿದ್ದ ನಿಖೀಲ್‌ ಕುಮಾರ್‌ನನ್ನು ಬಂಧಿಸಲಾಗಿದೆ. ಬಂಧಿತನಿಂದ 2.20 ಲಕ್ಷದ ಬಂಗಾರದ ಆಭರಣ ವಶಪಡಿಸಿಕೊಂಡು ಸೆಕ್ಷನ್‌ 379 ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿದೆ.

ರೈಲ್ವೆ ಎಸಿ ಬೋಗಿಯಲ್ಲಿ ಕದಿಯುತ್ತಿದ್ದ ನಿಖೀಲಕುಮಾರ್‌ ಕೇರಳದ ಕಣ್ಣೂರು ಮೂಲದವನು ಎಂದು ತಿಳಿದು ಬಂದಿದೆ. ವನಿತಾ ಶೆಟ್ಟಿ ಅವರಿಗೆ ಶೀಘ್ರವಾಗಿ ಅವರ ಒಡವೆ ಮರಳಿಸಲಾಗುವುದು ಎಂದು ಕೊಂಕಣ ರೈಲ್ವೆ ಪಿಆರ್‌ಒ ಸುಧಾ ಕೃಷ್ಣ ಮೂರ್ತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.