Rain ಕರಾವಳಿಯಲ್ಲಿ ಫಲಪ್ರದ ಪೂರ್ವ ಮುಂಗಾರು
ಋತು ಪೂರ್ಣ; ಕರಾವಳಿಯಲ್ಲಿ ವರ್ಷದ ಬಳಿಕ ಅಧಿಕ ಮಳೆ
Team Udayavani, Jun 1, 2024, 7:10 AM IST
ಮಂಗಳೂರು: ರಾಜ್ಯದಲ್ಲಿ ಮಾರ್ಚ್- ಮೇ ತಿಂಗಳುಗಳ ಪೂರ್ವ ಮುಂಗಾರು ಅವಧಿಯ ವಾಡಿಕೆಯಂತೆ ಮುಕ್ತಾಯಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತ ಕರಾವಳಿಯಲ್ಲಿ ವರ್ಷದ ಬಳಿಕ ವಾಡಿಕೆಗಿಂತಲೂ ಅಧಿಕ ಮಳೆ ಸುರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 237 ಮಿ.ಮೀ. ವಾಡಿಕೆ ಮಳೆಯ ಪೈಕಿ 326 ಮಿ.ಮೀ. ಮಳೆ ಸುರಿದಿದ್ದು, ಶೇ. 38 ಏರಿಕೆ ಕಂಡಿದೆ. ಉಡುಪಿ ಜಿಲ್ಲೆಯಲ್ಲಿ 199 ಮಿ.ಮೀ. ವಾಡಿಕೆ ಮಳೆಯಲ್ಲಿ 257 ಮಿ.ಮೀ. ಮಳೆಯಾಗಿ ಶೇ. 29 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 102 ಮಿ.ಮೀ. ವಾಡಿಕೆ ಮಳೆಯ ಪೈಕಿ 134 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ. 31ರಷ್ಟು ಮಳೆ ಹೆಚ್ಚಳವಾಗಿದೆ. ಕಳೆದ ವರ್ಷ ಈ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಕ್ಷೀಣವಾಗಿ ಸುರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 51 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 73ರಷ್ಟು ಮಳೆ ಕೊರತೆ ಉಂಟಾಗಿತ್ತು.
ಈ ಬಾರಿಯ ಪೂರ್ವ ಮುಂಗಾರು ಆರಂಭದಲ್ಲಿ ಕರಾವಳಿಯಲ್ಲಿ ಮಳೆಯ ತೀವ್ರ ಕೊರತೆ ಇತ್ತು. ಗರಿಷ್ಠ ಉಷ್ಣಾಂಶದಲ್ಲಿ ಭಾರೀ ಏರಿಕೆ ಆಗಿತ್ತು. ಆದರೆ ಮೇ ತಿಂಗಳ ಕೊನೆಯ ಮೂರು ವಾರಗಳಲ್ಲಿ ಉಭಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ, ಕೃತಕ ನೆರೆಗೂ ಕಾರಣವಾಗಿತ್ತು. ಈವರೆಗೆ ಸುರಿಯದ ಮಳೆ ಕೇವಲ ಒಂದೇ ತಿಂಗಳಿನಲ್ಲಿ ಸುರಿದಿದೆ.
ಮುಂಗಾರಿನಲ್ಲಿ
ವಾಡಿಕೆ ಮಳೆ ಸಾಧ್ಯತೆ
ನೈಋತ್ಯ ಮುಂಗಾರು ಅವಧಿಯಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಕಳೆದ ವರ್ಷ ಕರಾವಳಿಯಲ್ಲಿ ಮೂರು ವರ್ಷಗಳಿಂದ ವಾಡಿಕೆಗಿಂತ ಅಧಿಕ ಮುಂಗಾರು ಮಳೆ ಸುರಿದಿಲ್ಲ. 2021ರಲ್ಲಿ ಶೇ. 13, ಮತ್ತು ಕಳೆದ ವರ್ಷ ಶೇ. 14ರಷ್ಟು ಮಳೆ ಕೊರತೆ ಉಂಟಾಗಿತ್ತು. 2022ರಲ್ಲಿ ಮಳೆ ಕೊರತೆ ಆಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.