Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ
Team Udayavani, May 11, 2024, 8:10 PM IST
ಬೆಳಗಾವಿ: ಬಿಸಿಲಿನಿಂದ ಬಸವಳಿದಿದ್ದ ಬೆಳಗಾವಿ ಜನತೆಗೆ ಶನಿವಾರ ಮಳೆರಾಯ ತಂಪೆರೆದಿದ್ದು, ಮಳೆ ಆಗಮನದಿಂದ ಜನರು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು.
ಬರದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆಗಮನದಿಂದ ಸಾರ್ವಜನಿಕರು ಸಮಾಧಾನವಾಗಿದ್ದಾರೆ. ಭಾರೀ ಮಳೆ ಆಗಮನದಿಂದ ಇಳೆ ತಂಪಾಗಿದ್ದು, ರೈತರ ಮೊಗದಲ್ಲಿ ಸಂತಸವಾಗಿದೆ. ಈ ವರ್ಷದ ಅತ್ಯಂತ ಜೋರಾದ ಮಳೆ ಸುರಿದಿದೆ.
ಮಧ್ಯಾಹ್ನ 4 ಗಂಟೆ ನಂತರ ನಗರದಲ್ಲಿ ಆರಂಭವಾದ ಬಿರುಗಾಳಿ-ಮಳೆಗೆ ಜನರು ಪರದಾಡಿದರು. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಮಳೆ ಸುರಿಯಿತು. ಜೋರಾಗಿ ಬೀಸಿದ ಬಿರುಗಾಳಿಯಿಂದ ಗಿಡದ ಟೊಂಗೆಗಳು ಮುರಿದು ಬಿದ್ದವು. ಗುಡುಗು-ಸಿಡಿಲು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಭೇಂಡಿ ಬಜಾರ್ನಲ್ಲಿ ಗಿಡವೊಂದು ಧರೆಗುರುಳಿದೆ.
ನಗರದ ಹಲವು ರಸ್ತೆಗಳು ಹೊಳೆಯಂತೆ ಆಗಿದ್ದವು. ಅನೇಕ ಕಡೆಗಳಲ್ಲಿ ಸಣ್ಣ ಪುಟ್ಟ ಗಿಡಗಳು ಧರೆಗುರುಳಿದವು. ಗಾಳಿಯಿಂದ ಕೆಲವು ಕಡೆಗೆ ಮನೆಗಳ ಮೇಲಿನ ಪತ್ರೆಗಳು ಹಾರಿ ಹೋದವು. ಶಾಸ್ತಿç ನಗರದ ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತು. ಕೆಲವು ಅಂಗಡಿ-ಮಳಿಗೆಗಳಲ್ಲೂ ನೀರು ನುಗ್ಗಿ ಅವಾಂತರ ಸೃಷ್ಟಿಸಿತು.
ಪ್ರತಿ ಸಲ ಮಳೆಯಾದಾಗ ಭೇಂಡಿ ಬಜಾರ್, ಪಾಂಗುಳ ಗಲ್ಲಿಯಲ್ಲಿ ಗಟಾರು ನೀರೆಲ್ಲ ರಸ್ತೆ ಮೇಲೆ ಹರಿದು ಬರುವುದು ಸಾಮಾನ್ಯವಾಗಿದೆ. ಶನಿವಾರ ಸುರಿದ ಧಾರಾಕಾರ ಮಳೆಯಿಂದ ಗಟಾರು ನೀರೆಲ್ಲ ರಸ್ತೆ ಮೇಲೆ ಹೊಳೆಯಂತೆ ಹರಿದು ಅವಾಂತರ ಸೃಷ್ಟಿಸಿತು.
ಹುಬ್ಬಳ್ಳಿ ಭರ್ಜರಿ ಮಳೆ
ಹುಬ್ಬಳ್ಳಿ ನಗರದಲ್ಲಿ ಸುರಿದ ಬಾರಿ ಗುಡುಗು-ಸಿಡಿಲು ಮಿಶ್ರಿತ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ, ಜೊತೆಗೆ ನಗರದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ನಾಲಾಗಳು ತುಂಬಿಕೊಂಡು ರಸ್ತೆಯ ಮೇಲೆಲ್ಲಾ ನೀರು ಹರಿದ ಘಟನೆ ಶನಿವಾರ ನಡೆದಿದೆ.
ನಗರದಲ್ಲಿ ಸುರಿದ ರಭಸದ ಮಳೆಗೆ ಹಲವು ಕಡೆ ಗಿಡ-ಮರಗಳು ನೆಲಕ್ಕುರುಳಿದ್ದು, ರಸ್ತೆಯ ಮೇಲೆಲ್ಲಾ ನೀರು ನಿಲ್ಲುವ ಮೂಲಕ ಸಂಪೂರ್ಣ ಜಲಾವೃತಗೊಂಡಿರುವುದು ಕಂಡು ಬಂದಿತು.
ನಗರದ ದಾಜೀಬಾನ ಪೇಟೆ, ತುಳಜಾಭವಾನಿ ವೃತ್ತದಿಂದ ಕಮರಿಪೇಟೆ, ದಿವಟೆಗಲ್ಲಿ, ಮಹಾವೀರಗಲ್ಲಿ, ಕೋಯಿನ್ ರಸ್ತೆ, ಕೊಪ್ಪಿಕರ ರಸ್ತೆ, ಲ್ಯಾಮಿಂಗ್ಟನ್ ರಸ್ತೆ, ಸ್ಟೇಶನ್ ರಸ್ತೆ, ವಿದ್ಯಾನಗರ, ಉಣಕಲ್ಲ ಕ್ರಾಸ್, ಕಿತ್ತೂರ ಚೆನ್ನಮ್ಮ ವೃತ್ತ, ಹಳೇ ಬಸ್ ನಿಲ್ದಾಣದ ಮುಂಭಾಗ, ಹಳೇಹುಬ್ಬಳ್ಳಿ ಗಣೇಶ ನಗರ, ಆನಂದ ನಗರ ತಗ್ಗು ಪ್ರದೇಶ, ಪಡದಯ್ಯನ ಹಕ್ಕಲು, ನೇಕಾರನಗರ, ಜಂಗ್ಲಿಪೇಟೆ, ಸಿದ್ದಾರೂಢಸ್ವಾಮಿ ಮಠದ ಹಿಂಭಾಗ, ಸಿಮ್ಲಾ ನಗರ ಮುಖ್ಯ ರಸ್ತೆ, ಗದಗ ರಸ್ತೆ ಸೇರಿದಂತೆ ನಗರದ ಬಹುತೇಕ ರಸ್ತೆಗಳಲ್ಲಿ ಅಪಾರ ಪ್ರಮಾಣ ನೀರು ನಿಂತಿರುವುದು ಕಂಡು ಬಂದಿದೆ.
ಅಷ್ಟೇ ಅಲ್ಲದೇ ದೇಶಪಾಂಡೆ ನಗರದ ದೊಡ್ಡ ನಾಲಾ ತುಂಬಿ ಹರಿದಿದ್ದು, ನಾಲಾ ತುಂಬಿ ಸುಮಾರು 2-3 ಅಡಿ ನೀರು ಹೊರ ಬಂದಿರುವುದು ಕಂಡು ಬಂದಿತು. ಇದರಿಂದ ಅಕ್ಕಪಕ್ಕದ ಬಡಾವಣೆಗಳಲ್ಲಿ ಸಹ ನೀರು ನುಗ್ಗಿರುವುದು ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.