Rain Update: ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ-ಹವಾಮಾನ ಇಲಾಖೆ ಮುನ್ನೆಚ್ಚರಿಕೆ
Team Udayavani, Apr 16, 2023, 7:57 AM IST
ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ.
ಕರಾವಳಿಯ ಒಂದೆರಡು ಕಡೆ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ.
ಶನಿವಾರ ಬೆಳಗಾವಿಯ ಚಿಕ್ಕೋಡಿಯಲ್ಲಿ 5, ಬೆಳಗಾವಿಯ ರಾಯಬಾಗ, ಬೈಲಹೊಂಗಲ, ಧಾರವಾಡದ ಕಲಘಟಗಿ ತಲಾ 2, ಉತ್ತರ ಕನ್ನಡದ ಹಳಿಯಾಳ, ಮುಂಡಗೋಡ, ಜಗಲಬೆಟ್, ಬೀದರ್, ಮಂಠಾಳ, ಬಾಲ್ಕಿ, ಬೆಳಗಾವಿಯ ನಿಪ್ಪಾಣಿ, ಸುತಗಟ್ಟಿ, ಮುಟ್ಟಿಕೊಪ್ಪ, ವಿಜಯಪುರದ ಇಂಡಿ, ಬಾಗಲಕೋಟೆಯ ಮಹಲಿಂಗಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.
ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ರಾಜ್ಯದಲ್ಲೇ ಅತ್ಯಧಿಕ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರು 40, ಬಳ್ಳಾರಿ 39.4, ಕೊಪ್ಪಳ 38.6, ಗದಗ 38.6, ವಿಜಯಪುರ 38.5, ದಾವಣಗೆರೆ 37.2, ಮಂಗಳೂರು 35.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.