Feb. 16: “ರವಿಕೆ ಪ್ರಸಂಗ’ ಕನ್ನಡ ಸಿನೆಮಾ ತೆರೆಗೆ
Team Udayavani, Feb 9, 2024, 11:17 PM IST
ಮಂಗಳೂರು: ದೃಷ್ಟಿ ನಿರ್ಮಾಣ ಸಂಸ್ಥೆಯಲ್ಲಿ, ಮಹಿಳೆಯ ಶೃಂಗಾರದಲ್ಲಿ ಪ್ರಮುಖವಾಗಿರುವ ರವಿಕೆಯನ್ನು ಆಧಾರವಾಗಿಟ್ಟುಕೊಂಡು ಚಿತ್ರೀಕರಿಸಲಾದ ಹೊಸ ಪ್ರಯೋಗ ವಿರುವ “ರವಿಕೆ ಪ್ರಸಂಗ’ ಕನ್ನಡ ಸಿನೆಮಾ ಫೆ. 16ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರ ನಿರ್ದೇಶಕ ಸಂತೋಷ್ ಕೊಡಂಕೇರಿ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಧ್ಯಮ ವರ್ಗದ ಕುಟುಂಬವೊಂದರ ಹೆಣ್ಣು ಮಗಳ ಸುತ್ತ ಹೆಣೆಯಲಾಗಿರುವ ಚಿತ್ರ ಇದಾಗಿದೆ.
ದ.ಕ. ಜಿಲ್ಲೆಯಲ್ಲಿಯೇ ಸಿನೆಮಾದ ಚಿತ್ರೀಕರಣ ಹಾಗೂ ಕಥೆ ಕೂಡ ಸಾಗಿದೆ. ರವಿಕೆ ಪ್ರಸಂಗವೊಂದು ಕೋರ್ಟ್ ಮೆಟ್ಟಿಲೇರಿದಾಗ ಸಮಾಜ ಹೆಣ್ಣನ್ನು ನೋಡುವ ಪರಿ ಈ ಚಿತ್ರದ ಎಳೆ ಎಂದು ಅವರು ಹೇಳಿದರು.
ಚಿತ್ರದಲ್ಲಿ ಗೀತಾ ಭಾರತಿ ಭಟ್, ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಪ್ರವೀಮ್ ಅಥರ್ವ, ರಘು ಪಾಂಡೇಶ್ವರ್, ಹನುನಂತೇ ಗೌಡ, ಖುಷಿ ಆಚಾರ್, ಹನುಮಂತ ರಾವ್ ಕೆ. ಮುಂತಾದವರು ವಿವಿಧ ಪಾತ್ರಗಳಲ್ಲಿ ನಟಿಸಿದ್ದಾರೆ. ಪಾವನಾ ಸಂತೋಷ್ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ಮುರಳೀಧರ್ ಎನ್. ಅವರ ಛಾಯಾ ಗ್ರಹಣ, ರಘು ಶಿವರಾಮ್ ಅವರ ಸಂಕಲನ, ವಿನಯ್ ಶರ್ಮಾ ಅವರ ಸಂಗೀತ, ರಮೇಶ್ಕೃಷ್ಣ ಅವರ ಹಿನ್ನೆಲೆ ಹಾಗೂ ಕಿರಣ್ ಕಾವೇರಪ್ಪ ಸಾಹಿತ್ಯ ಒದಗಿಸಿದ್ದಾರೆ.
ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ನಟಿ ಗೀತಾ ಭಾರತಿ ಭಟ್ ಮಾತನಾಡಿ, ಈ ಚಿತ್ರವು ಮನೋರಂಜನೆಯ ಜತೆಗೆ ಕಾಮಿಡಿ, ಸಾಮಾಜಿಕ ಸಂದೇಶವನ್ನೂ ಹೊಂದಿದೆ. ಮಂಗಳೂರು ಭಾಷೆಯ ಸೊಗಡು, ದ.ಕ. ಜಿಲ್ಲೆಯ ಶ್ರೀಮಂತ ಸಂಸ್ಕೃತಿಯನ್ನು ಈ ಚಿತ್ರವು ಮೇಳೈಸಿದೆ ಎಂದವರು ಹೇಳಿದರು.
ಕಥೆ ಮತ್ತು ಸಂಭಾಷಣೆ ಬರೆದಿರುವ ಪಾವನಾ ಸಂತೋಷ್, ನಟ ರಘು ಪಾಂಡೇಶ್ವರ್, ರಕ್ಷಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.