ಐಪಿಎಲ್‌: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಆರ್‌ಸಿಬಿಗೆ ರೋಚಕ ಜಯ

ರಾಜಸ್ಥಾನ್‌ ರಾಯಲ್ಸ್‌ ಹೋರಾಟವನ್ನು ಮೆಟ್ಟಿನಿಂತ ಶಹಬಾಜ್‌, ದಿನೇಶ್‌ ಕಾರ್ತಿಕ್‌

Team Udayavani, Apr 5, 2022, 11:35 PM IST

ಐಪಿಎಲ್‌: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಆರ್‌ಸಿಬಿಗೆ ರೋಚಕ ಜಯ

ಮುಂಬೈ: ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಎದುರಾಳಿ ರಾಜಸ್ಥಾನ್‌ ರಾಯಲ್ಸ್‌ ಎದುರು ರೋಚಕ ಜಯ ಸಾಧಿಸಿದೆ.

ಅಲ್ಲಿಗೆ ಫಾ ಡು ಪ್ಲೆಸಿಸ್‌ ಪಡೆ ಆಡಿದ ಮೂರು ಪಂದ್ಯಗಳಲ್ಲಿ ಸತತ ಎರಡನೇ ಜಯ ಸಾಧಿಸಿದೆ.

ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 3 ವಿಕೆಟಿಗೆ 169 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಇದನ್ನು ಬೆನ್ನತ್ತಿದ್ದ ಬೆಂಗಳೂರು 19.1 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 173 ರನ್‌ ಗಳಿಸಿತು.

ಬೆಂಗಳೂರಿನ ರನ್‌ ಬೆನ್ನತ್ತುವ ಹೋರಾಟದಲ್ಲಿ ಭರ್ಜರಿ ಹೋರಾಟ ಸಂಘಟಿಸಿದ್ದು ಶಹಬಾಜ್‌ ಅಹ್ಮದ್‌ (45 ರನ್‌, 26 ಎಸೆತ, 4 ಬೌಂಡರಿ, 3 ಸಿಕ್ಸರ್‌) ಮತ್ತು ದಿನೇಶ್‌ ಕಾರ್ತಿಕ್‌ (44 ರನ್‌, 23 ಎಸೆತ, 7 ಬೌಂಡರಿ, 1 ಸಿಕ್ಸರ್‌). ಈ ಇಬ್ಬರೂ ತಂಡದ ಗೆಲುವನ್ನು ಖಾತ್ರಿಪಡಿಸಿದರು.

ರಾಜಸ್ಥಾನ್‌ ಪರ ಟ್ರೆಂಟ್‌ ಬೌಲ್ಟ್, ಯಜುವೇಂದ್ರ ಚಹಲ್‌ ಬೌಲಿಂಗ್‌ ಹೋರಾಟ ವ್ಯರ್ಥವಾಯಿತು.

ಮತ್ತೆ ಸಿಡಿದ ಬಟ್ಲರ್‌: ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ಪರ ಜೋಸ್‌ ಬಟ್ಲರ್‌, ದೇವದತ್ತ ಪಡಿಕ್ಕಲ್‌ ಮತ್ತು ಕೊನೆಯಲ್ಲಿ ಶಿಮ್ರಾನ್‌ ಹೆಟ್‌ಮೈರ್‌ ಉತ್ತಮ ಆಟವಾಡಿದರು. ನಾಯಕ ಸ್ಯಾಮ್ಸನ್‌ ಔಟಾದ ಬಳಿಕ ರಾಜಸ್ಥಾನದ ರನ್‌ ವೇಗಕ್ಕೆ ಕಡಿವಾಣ ಬಿತ್ತು. ಆಬಳಿಕ ವಿಕೆಟ್‌ ಬೀಳದಿದ್ದರೂ ವೇಗವಾಗಿ ರನ್‌ ಪೇರಿಸಲು ಸಾಧ್ಯವಾಗಲಿಲ್ಲ. ಬೆಂಗಳೂರಿನ ಬೌಲಿಂಗ್‌ ಕೂಡ ಅಷ್ಟೇ ತೀಕ್ಷ್ಣವಾಗಿತ್ತು. ಆದರೆ ಕೊನೆ ಹಂತದಲ್ಲಿ ಬಟ್ಲರ್‌ ಮತ್ತು ಹೆಟ್‌ಮೈರ್‌ ಸಿಡಿದ ಕಾರಣ ರಾಜಸ್ಥಾನದ ಮೊತ್ತ 169 ರನ್‌ವರೆಗೆ ತಲುಪಿತು.

ಇನಿಂಗ್ಸ್‌ ಪೂರ್ತಿ ಆಡಿದ ಬಟ್ಲರ್‌ ಒಟ್ಟಾರೆ 47 ಎಸೆತ ಎದುರಿಸಿ, 6 ಸಿಕ್ಸರ್‌ ನೆರವಿನಿಂದ 70 ರನ್‌ ಗಳಿಸಿ ಅಜೇಯರಾಗಿ ಉಳಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಹೆಟ್‌ಮೈರ್‌ 42 ರನ್‌ ಗಳಿಸಿದರು. 31 ಎಸೆತ ಎದುರಿಸಿದ ಅವರು 4 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದರು.

ಮಿಂಚಿದ ಪಡಿಕ್ಕಲ್‌: ತಂಡವು ಎರಡನೇ ಓವರಿನಲ್ಲಿ ಆರಂಭಿಕ ಯಶಸ್ವಿ ಜೈಸ್ವಾಲ್‌ ಅವರ ವಿಕೆಟನ್ನು ಕಳೆದುಕೊಂಡರೂ ಜೋಸ್‌ ಬಟ್ಲರ್‌ ಮತ್ತು ಕರ್ನಾಟಕದ ದೇವದತ್ತ ಪಡಿಕ್ಕಲ್‌ ತಂಡವನ್ನು ಆಧರಿಸುವ ಪ್ರಯತ್ನ ನಡೆಸಿದರು. 10 ಓವರ್‌ ನಿಭಾಯಿಸಿದ ಅವರಿಬ್ಬರು ದ್ವಿತೀಯ ವಿಕೆಟಿಗೆ 70 ರನ್ನುಗಳ ಜತೆಯಾಟದಲ್ಲಿ ಭಾಗಿಯಾಗಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಜವಾಬ್ದಾರಿಯಿಂದ ಆಡಿದ ಪಡಿಕ್ಕಲ್‌ 29 ಎಸೆತ ಆಡಿ 2 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 37 ರನ್‌ ಹೊಡೆದು ಹರ್ಷಲ್‌ಗೆ ವಿಕೆಟ್‌ ಒಪ್ಪಿಸಿದರು.

ಆಬಳಿಕ ಬಂದ ನಾಯಕ ಸಂಜು ಸ್ಯಾಮ್ಸನ್‌ ಹೆಚ್ಚು ಹೊತ್ತು ನಿಲ್ಲಲು ವಿಫ‌ಲರಾದರು. 8 ಎಸೆತ ಎದುರಿಸಿದ ಅವರು ಕೇವಲ 8 ರನ್‌ ಗಳಿಸಿ ವನಿಂದು ಹಸರಂಗ ಅವರ ಎಸೆತದಲ್ಲಿ ಔಟಾದರು. ನಾಯಕ ಔಟಾದ ಬಳಿಕ ತಂಡದ ರನ್‌ವೇಗಕ್ಕೂ ಕಡಿವಾಣ ಬಿತ್ತು. ಈ ಪಂದ್ಯದಲ್ಲಿ ಇತ್ತಂಡಗಳ ಆಟಗಾರರಲ್ಲಿ ಯಾವುದೇ ಬದಲಾವಣೆಗಳು ಸಂಭವಿಸಲಿಲ್ಲ.

ಸಂಕ್ಷಿಪ್ತ ಸ್ಕೋರ್‌: ರಾಜಸ್ಥಾನ್‌ ರಾಯಲ್ಸ್‌ 20 ಓವರ್‌, 169/3 (ಜೋಸ್‌ ಬಟ್ಲರ್‌ 70, ಶಿಮ್ರಾನ್‌ ಹೆಟ್‌ಮೈರ್‌ 42, ಪಡಿಕ್ಕಲ್‌ 37, ಹರ್ಷಲ್‌ ಪಟೇಲ್‌ 18ಕ್ಕೆ 1).
ಬೆಂಗಳೂರು 19.1 ಓವರ್‌, 173/6 (ಶಹಬಾಜ್‌ ಅಹ್ಮದ್‌ 45, ದಿನೇಶ್‌ ಕಾರ್ತಿಕ್‌ 44, ಯಜುವೇಂದ್ರ ಚಹಲ್‌ 15ಕ್ಕೆ 2).

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.