ಮಾತುಕತೆಗೆ ಸಿದ್ಧ ಆದರೆ…. ಪಾಕ್‌ ಜತೆಗಿನ ಬಾಂಧವ್ಯ ಬಗ್ಗೆ ಪ್ರಧಾನಿ Modi ಹೇಳಿಕೆ

ಜಪಾನ್‌ ಮಾಧ್ಯಮ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿಕೆ

Team Udayavani, May 20, 2023, 7:41 AM IST

Modi

ನವದೆಹಲಿ/ಟೋಕ್ಯೋ: ಪಾಕಿಸ್ತಾನದ ಜತೆಗೆ ಭಾರತ ಸಾಮಾನ್ಯ ಬಾಂಧವ್ಯ ಹೊಂದಲು ಬಯಸುತ್ತಿದೆ. ಆದರೆ, ಆ ದೇಶ ಸರ್ಕಾರ ಉಗ್ರರಿಗೆ ನೀಡುವ ನೆರವು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜಪಾನ್‌ನ ಮಾಧ್ಯಮ ಸಂಸ್ಥೆ “ನಿಕ್ಕಿ ಏಷ್ಯಾ” ಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಅಂಶ ಸ್ಪಷ್ಟಪಡಿಸಿದ್ದಾರೆ.

ಮಾತುಕತೆ ನಡೆಸಿ ಪಾಕಿಸ್ತಾನದ ಜತೆಗೆ ಉತ್ತಮ ಬಾಂಧವ್ಯ ಹೊಂದುವ ಬಗ್ಗೆ ಭಾರತಕ್ಕೆ ಆಸಕ್ತಿ ಇದೆ. ಆದರೆ, ಈ ಬಗ್ಗೆ ಆ ದೇಶವೇ ನಿರ್ಧಾರ ಕೈಗೊಳ್ಳಬೇಕು. ಉಗ್ರರಿಗೆ ನೀಡುತ್ತಿರುವ ಪ್ರೋತ್ಸಾಹ, ವಿತ್ತೀಯ ನೆರವು, ವಿನಾ ಕಾರಣ ನಮ್ಮ ದೇಶದ ಜತೆಗೆ ದ್ವೇಷ ಸಾಧಿಸುವುದನ್ನು ಬಿಡಬೇಕು. ಆ ಪರಿಸ್ಥಿತಿಯನ್ನು ಪಾಕಿಸ್ತಾನ ಸರ್ಕಾರ ಸಿದ್ಧಪಡಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ ಸಾರ್ವಭೌಮತ್ವದ ವಿಚಾರದಲ್ಲಿ ಯಾವುದೇ ಜಾರಿ ಇಲ್ಲ. ಅದಕ್ಕೆ ಧಕ್ಕೆ ಬಂದರೆ ಯಾವ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧವಾಗಿಯೇ ಇರುವುದಾಗಿ ಪ್ರಧಾನಿ ಹೇಳಿದ್ದಾರೆ. ಚೀನಾ ಜತೆಗೆ ಭಾರತ ಹೊಂದಿರುವ ಬಾಂಧವ್ಯ ಕುರಿತಾಗಿ ಪ್ರಶ್ನೆಗಳಿಗೆ ಉತ್ತರಿಸಿದ ಮೋದಿ, ಮುಂದಿನ ದಿನಗಳಲ್ಲಿ ಪರಸ್ಪರ ಗೌರವ ಮತ್ತು ಸಹಕಾರ ಧೋರಣೆಯಿಂದ ಕೆಲಸ ಮಾಡುವ ವಾತಾವರಣ ಇದ್ದರೆ, ಚೀನಾ ಜತೆಗೆ ಉತ್ತಮ ಬಾಂಧವ್ಯ ಸಾಧ್ಯವಾಗಲಿದೆ. ಎರಡು ದೇಶಗಳ ನಡುವೆ ಉತ್ತಮ ಬಾಂಧವ್ಯ ಏರ್ಪಟ್ಟರೆ ಜಗತ್ತಿಗೇ ಅನುಕೂಲವಾಗಲಿದೆ ಎಂದರು ಪ್ರಧಾನಿ.

2020ರ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಾಲ್ವನ್‌ನಲ್ಲಿ ಉಂಟಾದ ಸಂಘರ್ಷದ ಬಳಿಕ ಎರಡೂ ದೇಶಗಳ ನಡುವಿನ ಬಾಂಧವ್ಯ ಮುರಿದು ಬಿದ್ದಿದೆ.

ವೇಗವಾಗಿ ಅಭಿವೃದ್ಧಿ: ದೇಶದ ಅರ್ಥ ವ್ಯವಸ್ಥೆಯ ಬಗ್ಗೆ ಮಾತನಾಡಿದ ಅವರು 2014ರಲ್ಲಿ ಜಗತ್ತಿನ ಹತ್ತನೇ ದೊಡ್ಡ ಅರ್ಥ ವ್ಯವಸ್ಥೆಯಾಗಿದ್ದ ಭಾರತ ಈಗ ಐದನೇ ಅತಿದೊಡ್ಡ ಅರ್ಥ ವ್ಯವಸ್ಥೆಗೆ ಏರಿಕೆಯಾಗಿದೆ. ಆದರೆ, ಜಗತ್ತಿನಲ್ಲಿ ಉಂಟಾಗಿರುವ ಪರಿಸ್ಥಿತಿಗಳು ಕೂಡ ಸವಾಲಿನಿಂದ ಕೂಡಿವೆ ಎಂದರು.

ಶಾಂತಿಗೆ ಬದ್ಧ:ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ಭಾರತ ಯಾವತ್ತೂ ಶಾಂತಿಯ ಪರವೇ ಆಗಿದೆ. ಈ ವಿಚಾರದಲ್ಲಿ ನಮ್ಮ ನಿಲುವಿನಲ್ಲಿ ಬದಲಾವಣೆಯೇ ಇಲ್ಲ ಎಂದು ಮತ್ತೂಮ್ಮೆ ನಿಲುವು ಸ್ಪಷ್ಟಪಡಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ ಜತೆಗೆ ನಿಕಟ ಬಾಂಧವ್ಯ ಹೊಂದಿದ್ದೇವೆ. ಹೆಚ್ಚಾಗುತ್ತಿರುವ ಆಹಾರ, ತೈಲ ಸೇರಿದಂತೆ ಅಗತ್ಯ ವಸ್ತುಗಳ ಕೊರತೆ ಉಂಟಾಗದೇ ಇರಲು ಎರಡೂ ರಾಷ್ಟ್ರಗಳಿಗೂ ನೆರವು ನೀಡಲು ಸಿದ್ಧರಿದ್ದೇವೆ ಎಂದರು.
ಜಿ20 ರಾಷ್ಟ್ರಗಳ ಪ್ರಸಕ್ತ ಸಾಲಿನ ಅಧ್ಯಕ್ಷ ಸ್ಥಾನದ ನೆಲೆಯಿಂದ, ಜಿ7 ರಾಷ್ಟ್ರಗಳ ಸಮ್ಮೇಳನದಲ್ಲಿ ಇಂಧನ, ಡಿಜಿಟಲ್‌ ಟೆಕ್ನಾಲಜಿ ಕ್ಷೇತ್ರದಲ್ಲಿ ದೇಶ ಸಾಧಿಸಿದ ಪ್ರಗತಿಯನ್ನು ಮಂಡಿಸುವುದಾಗಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಭಾರತದ ಸಹಭಾಗಿತ್ವ ಹೊಂದುವ ಮೂಲಕ ಜಗತ್ತಿಗೆ ಹೇಗೆ ನೆರವು ಮತ್ತು ಲಾಭ ಪಡೆಯಲು ಸಾಧ್ಯ ಎಂಬುದನ್ನು ವಿವರಿಸುವುದಾಗಿ ಹೇಳಿದ್ದಾರೆ.

ಹಿರೋಶಿಮಾ ತಲುಪಿದ ಪ್ರಧಾನಿ: ಇದೇ ವೇಳೆ, ಮೂರು ದಿನಗಳ ಜಪಾನ್‌ ಪ್ರವಾಸಕ್ಕಾಗಿ ಪ್ರಧಾನಿಯವರು ಹಿರೋಶಿಮಾ ತಲುಪಿದ್ದಾರೆ. ಮೇ 21ರ ವರೆಗೆ ಅವರು ಜಪಾನ್‌ನಲ್ಲಿ ಇರಲಿದ್ದಾರೆ ಮತ್ತು ಜಗತ್ತಿನ ಪ್ರಮುಖ ನಾಯಕರ ಜತೆಗೆ ಭೇಟಿ ಮಾಡಿ, ಮಾತುಕತೆ ನಡೆಸಲಿದ್ದಾರೆ. ಜಿ7 ರಾಷ್ಟ್ರಗಳ ಒಕ್ಕೂಟದ ಸದಸ್ಯನಲ್ಲದೇ ಇದ್ದರೂ, ಜಪಾನ್‌ ಪ್ರಧಾನಿ ಫ್ಯೂಮಿಯೋ ಕಿಶಿದಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಹಿರೋಶಿಮಾಕ್ಕೆ ತೆರಳಿದ್ದಾರೆ. ನಂತರ ಅಲ್ಲಿಂದ ಪಾಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

ಝೆಲೆನ್‌ಸ್ಕಿ ಜತೆಗೆ ನಾಳೆ ಭೇಟಿ
ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಕೂಡ ಜಿ7 ಒಕ್ಕೂಟದ ರಾಷ್ಟ್ರಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಭಾನುವಾರ ಅವರು ಹಿರೋಶಿಮಾಕ್ಕೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಆ ದೇಶದ ಮೇಲೆ ದಾಳಿ ನಡೆಸಿದ ಬಳಿಕ ಮೊದಲ ಬಾರಿಗೆ ಇಬ್ಬರು ನಾಯಕರ ಭೇಟಿ ಇದಾಗಲಿದೆ. ಮಾತುಕತೆ ವೇಳೆ ಇಬ್ಬರು ನಾಯಕರು ಯುದ್ಧ ಮತ್ತು ಅದರಿಂದ ಉಂಟಾದ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಈ ನಡುವೆ ಜಿ7 ಒಕ್ಕೂಟದ ನಾಯಕರು ರಷ್ಯಾ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.