

Team Udayavani, Jan 30, 2025, 1:19 PM IST
ನವದೆಹಲಿ: ಮಧ್ಯಮ ವರ್ಗಕ್ಕೆ ನೆರವು, ಚೀನಾದ ಉತ್ಪಾದನೆಗಳಾದ ಛತ್ರಿ ಮತ್ತು ಪಾದರಕ್ಷೆ ಮೇಲೆ ಸುಂಕ ವಿಧಿಸುವುದು, ಉತ್ಪಾದನೆಗೆ ಸಂಬಂಧಿಸಿದಂತೆ ಪ್ರೋತ್ಸಾಹ ನೀಡುವ ಮೂಲಕ ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಪ್ರೋತ್ಸಾಹ, ಶಿಕ್ಷಣ ಹಾಗೂ ತರಬೇತಿ ಉದ್ದೇಶಗಳಿಗೆ ಹೆಚ್ಚಿನ ಅನುದಾನ ಮೀಸಲಿಡುವುದು ಸೇರಿದಂತೆ ಹಲವು ಅಂಶಗಳಿಗೆ 2025ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅದ್ಯತೆ ನೀಡುವಂತೆ ಆರ್ ಎಸ್ ಎಸ್ (RSS) ಬೇಡಿಕೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಆರ್ ಎಸ್ ಎಸ್ ಹಾಗೂ ಅಂಗಸಂಸ್ಥೆಗಳಾದ ಲಘು ಉದ್ಯೋಗ್ ಭಾರತಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸ್ವದೇಶಿ ಜಾಗರಣ್ ಮಂಚ್ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬಜೆಟ್ ನಲ್ಲಿ ಪ್ರಾಮುಖ್ಯತೆ ನೀಡಬೇಕಾದ ಅಂಶಗಳ ಬಗ್ಗೆ ಮನವಿ ಸಲ್ಲಿಸಿರುವುದಾಗಿ ವರದಿ ವಿವರಿಸಿದೆ.
ದೇಶದಲ್ಲಿ ಆಮೂಲಾಗ್ರ ಸುಧಾರಣೆಯ ನಡುವೆಯೂ ತೆರಿಗೆ ಸಂಗ್ರಹವನ್ನು ಇನ್ನಷ್ಟು ಹೆಚ್ಚಿಸಬೇಕು, ಆದಾಯ ನಿರ್ವಹಣೆ ಅತ್ಯಗತ್ಯವಾಗಿದೆ. ಮಧ್ಯಮ ವರ್ಗದ ಜನರ ಮೇಲೆ ಆರ್ಥಿಕ ಹೊರೆ ಬೀಳದಂತೆ ಏಚ್ಚರ ವಹಿಸಬೇಕು, ಸ್ಥಳೀಯ ಉದ್ಯಮಕ್ಕೆ ಉತ್ತೇಜನ ನೀಡಬೇಕು. ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಖಾಸಗೀಕರಣದಿಂದ ದೂರ ಇರಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿನಂತಿಸಿಕೊಂಡಿದೆ.
ದೇಶದಲ್ಲಿನ ಮಧ್ಯಮ ವರ್ಗದ ಜೀವನ ನಿರ್ವಹಣೆ ವೆಚ್ಚ ಏರಿಕೆಯಾಗುತ್ತಿರುವ ಬಗ್ಗೆ ಆರ್ ಎಸ್ ಎಸ್ ನಿರಂತರವಾಗಿ ಕಳವಳ ವ್ಯಕ್ತಪಡಿಸುತ್ತಾ ಬಂದಿದ್ದು, ಮಧ್ಯಮ ವರ್ಗ ದೇಶದ ಆರ್ಥಿಕತೆಯ ಬೆನ್ನಲುಬು ಎಂದು ತಿಳಿಸಿದೆ.
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ತೆರಿಗೆ ವಿನಾಯ್ತಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿನ ಹೆಚ್ಚುವರಿ ವೆಚ್ಚದ ಕಡಿತ ಹಾಗೂ ಹಣದುಬ್ಬರ ನಿಯಂತ್ರಣಕ್ಕೆ ಕಠಿನ ಕ್ರಮ ತೆಗೆದುಕೊಳ್ಳುವಂತೆ ಆರ್ ಎಸ್ ಎಸ್ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.
Tesla: ಭಾರತದಲ್ಲಿ ಟೆಸ್ಲಾ ನೇಮಕಾತಿ ಶುರು: ಶೀಘ್ರ ಮಾರುಕಟ್ಟೆಗೆ?
Stock Market: ಕಾರ್ಪೋರೇಟ್ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Thirthahalli: ಭೀಕರ ರಸ್ತೆ ಅಪಘಾತ… ಮಹಿಳೆ ಸ್ಥಳದಲ್ಲಿಯೇ ಮೃತ್ಯು
Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು
Bollywood Movie: ಕರಣ್ ಜೋಹರ್ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ
Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ
ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ
You seem to have an Ad Blocker on.
To continue reading, please turn it off or whitelist Udayavani.