BJP ಸಾರಥ್ಯಕ್ಕೆ ಹಿಂಜರಿಕೆ: ಪಕ್ಷಕ್ಕೆ ಸವಾಲಾದ ವಿಪಕ್ಷ ನಾಯಕ, ಅಧ್ಯಕ್ಷರ ಆಯ್ಕೆ

ಮೇರೆ ಮೀರಿದ ಗುಂಪುಗಾರಿಕೆ ರಾಜಕಾರಣ, ಎಸ್‌ಐಟಿ ಭಯ

Team Udayavani, Jun 30, 2023, 7:15 AM IST

BJP FLAG 1

ಬೆಂಗಳೂರು: ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಒಂದೆಡೆ ಬಣ ರಾಜಕಾರಣ ಮೇರೆ ಮೀರುತ್ತಿದ್ದರೆ ಇನ್ನೊಂದೆಡೆ ನವ ನಾಯಕತ್ವ ಸ್ವೀಕಾರಕ್ಕೆ ಎರಡನೇ ಹಂತದ ನಾಯಕರು ಹಿಂಜರಿಯುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ತಪ್ಪು ಮಾಡಿದವರನ್ನು ನಿತ್ಯ ಸಮರ್ಥನೆ ಮಾಡುವ ಬದಲು ಈಗ “ಮಾಡಿದ್ದುಣ್ಣಲಿ ಮಹಾರಾಯ’ ಎಂಬ ತಟಸ್ಥ ಧೋರಣೆ ಬಿಜೆಪಿಯ ಭರವಸೆಯ ಬುಡವನ್ನೇ ಅಲ್ಲಾಡಿಸಲಾರಂಭಿಸಿದೆ.

ಇದರ ಫ‌ಲವಾಗಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಹರನ್ನು ಆಯ್ಕೆ ಮಾಡುವುದೇ ಬಿಜೆಪಿ ವರಿಷ್ಠರಿಗೆ ಸವಾಲಾಗಿ ಪರಿಣಮಿಸಿದೆ. ವಿಧಾನಮಂಡಲದ ಬಜೆಟ್‌ ಅಧಿವೇಶನಕ್ಕೆ ದಿನಗಣನೆ ಪ್ರಾರಂಭವಾಗಿದ್ದರೂ ವಿಪಕ್ಷ ನಾಯಕ ಯಾರು ಎಂಬುದನ್ನು ಇತ್ಯರ್ಥಗೊಳಿಸುವುದಕ್ಕೆ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಈ ಜವಾಬ್ದಾರಿ ಕಟ್ಟುವುದು ಅನಿವಾರ್ಯವಾಗಬಹುದು ಎಂದು ಪಕ್ಷದೊಳಗೆ ಹೇಳಲಾಗುತ್ತಿದೆ.

ಎಸ್‌ಐಟಿ ಭಯ

ಬಿಜೆಪಿಯ ಎರಡನೇ ಹಂತದ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವುದಕ್ಕೆ ಹಿಂಜರಿಯಲು ಪ್ರಧಾನ ಕಾರಣ ವರ್ಚಸ್ಸಿನ ಪ್ರಜ್ಞೆ. ಈಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವರಿಷ್ಠರು ಪರಿಗಣಿಸಿರುವ ಹೆಸರುಗಳ ಪೈಕಿ ಬಹುತೇಕರಿಗೆ ಕಳಂಕದ ಹೊರೆ ಇಲ್ಲ. ಆದರೆ ಈಗ ಜವಾಬ್ದಾರಿ ಹೊತ್ತುಕೊಂಡರೆ ಕಳಂಕಿತರ ಸಮರ್ಥನೆ ಮಾಡುವುದೇ ನಿತ್ಯ ಕಾಯಕ ವಾಗಬೇಕಾಗುತ್ತದೆ. ಅಧಿಕಾರದಲ್ಲಿದ್ದಾಗ ತಪ್ಪು ಮಾಡಿ ದವರ ಸಮರ್ಥನೆಯನ್ನು ಅಧಿಕಾರ ವಂಚಿತರು ಅಥವಾ ಅಲ್ಪಕಾಲ ಅಧಿಕಾರ ಅನುಭವಿಸಿದವರು ಏಕೆ ಮಾಡಬೇಕೆಂಬುದು ಹೊಸಬರ ವಾದ.

ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಈಗ ಮುಖ್ಯ ಮಂತ್ರಿಯಾಗಿರುವ ಸಿದ್ದರಾಮಯ್ಯ ಅತ್ಯಂತ ಚತುರ ರಾಜಕಾರಣಿ. ತಮ್ಮ ಹಳೆಯ ಪಟ್ಟುಗಳ ಮೂಲಕ ಎದುರಾಳಿಗಳನ್ನು ಕಂಗೆಡಿಸುವುದರಲ್ಲಿ ಎತ್ತಿದ ಕೈ. ಈಗಾಗಲೇ ಅವರು ಎಸ್‌ಐಟಿ ರಚನೆ ಮಾಡಿ ಬಿಜೆಪಿ ಕಾಲದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ. ಎಸ್‌ಐಟಿ ರಚನೆಯಾದರೆ ದಿನಕ್ಕೊಬ್ಬ ಮಾಜಿ ಸಚಿವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಎದುರಾಗಬಹುದು, ಹಠಕ್ಕೆ ಬಿದ್ದರೆ ಕೆಲವರ ಬಂಧನವನ್ನೂ ತಳ್ಳಿ ಹಾಕುವಂತಿಲ್ಲ.

ಆಗ ಹಿಂದೆ ಹಗರಣ ಮಾಡಿದವರನ್ನು ಸಮರ್ಥನೆ ಮಾಡಿಕೊಳ್ಳುವುದು ಹೊಸದಾಗಿ ಅಧಿಕಾರ ವಹಿಸಿಕೊಂಡವರಿಗೆ ಸವಾಲಾಗಿ ಪರಿಣಮಿಸುತ್ತದೆ. ಹಿಂದಿನವರು ಮಾಡಿದ ಹಗರಣಗಳ ಸಮರ್ಥನೆ ಮಾಡಿ ಕೊಳ್ಳುತ್ತ ಕುಳಿತರೆ ಸಾರ್ವಜನಿಕವಾಗಿ ತಮ್ಮ ವರ್ಚಸ್ಸು ಮಂಕಾ ಗುತ್ತದೆ. ವಿಪಕ್ಷ ನಾಯಕನಾದರೆ ಸದನದೊಳಗೆ, ರಾಜ್ಯಾಧ್ಯಕ್ಷ ನಾದರೆ ಸದನದ ಹೊರಗೆ ಹಿಂದಿನ ಸರಕಾರದ ನಡೆಗಳನ್ನು ಸಮರ್ಥಿಸಿಕೊಳ್ಳುವುದೇ ಕಾಯಕವಾಗುತ್ತದೆ ಎಂಬುದು ಹೊಸಬರ ವಾದ. ಹೀಗಾಗಿ ಪಕ್ಷ ಪರಿಗಣಿಸಿ ಚರ್ಚೆಗೆ ಬಿಟ್ಟ ಹೆಸರುಗಳ ಪೈಕಿ ಬಹುತೇಕರು ಈಗ ಹಿಂದೆ ಸರಿದಿದ್ದಾರೆ.

ಜು. 2ರಂದು ಶಾಸಕಾಂಗ ಸಭೆ

ಇವೆಲ್ಲದರ ಮಧ್ಯೆ ಜುಲೈ 2ರಂದು ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ಶಾಸಕಾಂಗ ಪಕ್ಷದ ನಾಯಕ ಯಾರು ಎಂಬುದೇ ನಿಗೂಢವಾಗಿ ಉಳಿದಿದೆ. ವಿಪಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಗಳ ಪೈಕಿ ಪ್ರಮುಖರೊಬ್ಬರಿಗೆ ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಕಾರಣ ಕೇಳಿ ನೋಟಿಸ್‌ ನೀಡುವುದು ಅಂತಿಮಗೊಂಡಿದೆ. ಹೀಗಾಗಿ ಅವರು ರೇಸ್‌ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ.

ಯಡಿಯೂರಪ್ಪ  ಸಭೆ

ಹೊಸಬರು ಹಿಂಜರಿಯುತ್ತಿದ್ದರೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮಾತ್ರ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದ ಅವರು ಶುಕ್ರವಾರ ಬೆಳಗ್ಗೆ ಪಕ್ಷದ ರಾಜ್ಯ ಕಚೇರಿಗೆ ತೆರಳಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹಾಗೂ ಶಿಸ್ತು ಸಮಿತಿ ಸಂಚಾಲಕ ಲಿಂಗರಾಜ್‌ ಪಾಟೀಲ್‌ ಸೇರಿದಂತೆ ಪ್ರಮುಖರ ಜತೆಗೆ ಸಭೆ ನಡೆಸಲು ನಿರ್ಧರಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ರೇಣುಗೆ ನೋಟಿಸ್‌

ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡಬಾರದು ಎಂದು ಹೇಳಿದ್ದರೂ ಇದನ್ನು ಮೀರಿದ ಮಾಜಿ ಶಾಸಕ ರೇಣುಕಾಚಾರ್ಯ ಅವರಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. ಹಾಗೆಯೇ ಶುಕ್ರವಾರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೂ ನೋಟಿಸ್‌ ನೀಡುವ ಸಾಧ್ಯತೆ ಇದೆ.

ಕೇಂದ್ರ ಸಂಪುಟದಲ್ಲಿ ಭರ್ಜರಿ ಬದಲಾವಣೆ?

2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮ್ಯಾರಥಾನ್‌ ಕಾರ್ಯತಂತ್ರ ಸಭೆಗಳನ್ನು ಆಯೋಜಿಸುತ್ತಿರುವ ಬಿಜೆಪಿ ಹಿರಿಯ ನಾಯಕರು ಬುಧವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ. 5 ತಾಸುಗಳ ಕಾಲ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗಿಯಾಗಿದ್ದರು. ಸಭೆಯಲ್ಲಿ ನಡ್ಡಾ ಅವರ ಪಾಲ್ಗೊಳ್ಳುವಿಕೆಯು ಸರಕಾರ ಮಾತ್ರವಲ್ಲದೆ ಬಿಜೆಪಿಯ ಸಂಘಟನೆಯಲ್ಲೂ ಸಂಭಾವ್ಯ ಬದಲಾವಣೆಯ ಸುಳಿವು ನೀಡಿದೆ. ವಿಶೇಷವೆಂದರೆ ಕರ್ನಾಟಕ ಸೇರಿದಂತೆ ರಾಜ್ಯಮಟ್ಟದಲ್ಲಿ ಸಂಘಟನಾತ್ಮಕ ಬದಲಾವಣೆಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ.

ಜು. 3ರಂದು ಪ್ರಧಾನಿ ಮೋದಿ ಸಚಿವ ಸಂಪುಟದ ಸದಸ್ಯರ ಜತೆ ಮತ್ತೆ ಮಹತ್ವದ ಸಭೆ ನಡೆಸಲಿದ್ದು, ಅಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.

ಇದೇ ವೇಳೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ಬಿಜೆಪಿಯು ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢದಂತಹ ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ತನ್ನ ಒಟ್ಟಾರೆ ಕಾರ್ಯತಂತ್ರವನ್ನು ಬದಲಿಸುವ ಕುರಿತೂ ಬುಧವಾರದ ಸಭೆಯಲ್ಲಿ ಚರ್ಚಿಸಲಾಗಿದೆ.

ರಾಘವೇಂದ್ರ ಭಟ್‌

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.