ರಫೇಲ್‌ ವಿರಾಟ ರೂಪ, ವೈವಿಧ್ಯತೆಯ ವೈಭವ : ಗಣರಾಜ್ಯ ಪರೇಡ್ ನಲ್ಲಿ ರಕ್ಷಣಾಪಡೆಗಳ ಬಲಪ್ರದರ್ಶನ


Team Udayavani, Jan 26, 2021, 8:01 PM IST

ರಫೇಲ್‌ ವಿರಾಟ ರೂಪ, ವೈವಿಧ್ಯತೆಯ ವೈಭವ : ಗಣರಾಜ್ಯ ಪರೇಡ್ ನಲ್ಲಿ ರಕ್ಷಣಾಪಡೆಗಳ ಬಲಪ್ರದರ್ಶನ

ನವದೆಹಲಿ: ಒಂದೆಡೆ ರಫೇಲ್‌ ಬಲಭೀಮನ “ಬ್ರಹ್ಮಾಸ್ತ್ರದ ಕೌತುಕ, ಟಿ-90 ಭೀಷ್ಮ ಟ್ಯಾಂಕ್‌ನ ವಿರಾಟ ರೂಪ, ಸುಖೋಯ್‌-30ಎಂಕೆಐ ಯುದ್ಧ ವಿಮಾನದ ಚಮತ್ಕಾರ… ಮತ್ತೂಂದೆಡೆ, ಜನಪದ ಹಾಡುಗಳಿಗೆ ಪುಟಾಣಿಗಳ ನೃತ್ಯ, ಆತ್ಮನಿರ್ಭರ ಭಾರತ, ವಿಜಯನಗರ ಸಾಮ್ರಾಜ್ಯ, ಅಯೋಧ್ಯೆಯ ರಾಮಮಂದಿರ ಬಿಂಬಿಸುವ ಸ್ತಬ್ಧಚಿತ್ರಗಳ ಲೋಕ…
ಇದು ದೆಹಲಿಯ ರಾಜಪಥದಲ್ಲಿ 72ನೇ ಗಣರಾಜ್ಯೋತ್ಸವದ ದಿನವಾದ ಮಂಗಳವಾರ ನಡೆದ ಅಭೂತಪೂರ್ವ ಪರೇಡ್‌ನ‌ ಚಿತ್ರಣ. ಗಣರಾಜ್ಯ ದಿನದ ಪರೇಡ್‌ನಲ್ಲಿ ದೇಶದ ರಕ್ಷಣಾ ಪಡೆಗಳ ಸಾಮರ್ಥ್ಯ ಹಾಗೂ ಸಾಂಸ್ಕೃತಿಕ ವೈಭವವು ಅನಾವರಣಗೊಂಡಿದ್ದು, ಅಲ್ಲಿ ನೆರೆದಿದ್ದ 25 ಸಾವಿರದಷ್ಟು ಮಂದಿಯ ಕಣ್ಣುಗಳಿಗೆ ಹಬ್ಬ ಹಾಗೂ ಬೆರಗು ಮೂಡಿಸಿದವು.

ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 17 ಸ್ತಬ್ಧಚಿತ್ರಗಳು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ 9 ಟ್ಯಾಬ್ಲೋಗಳು ಹಾಗೂ ರಕ್ಷಣಾ ಸಚಿವಾಲಯದ 6 ಸ್ತಬ್ಧಚಿತ್ರಗಳು ಪರೇಡ್‌ನಲ್ಲಿ ಭಾಗಿಯಾದವು. ಕೊರೊನಾ ಹಿನ್ನೆಲೆಯಲ್ಲಿ 15 ವರ್ಷದೊಳಗಿನ ಹಾಗೂ 65 ದಾಟಿದವರಿಗೆ ಪ್ರವೇಶಕ್ಕೆ ಅನುಮತಿಯಿಲ್ಲದ ಕಾರಣ, ಈ ವರ್ಷ ವೀಕ್ಷಕರ ಸಂಖ್ಯೆ ಸ್ವಲ್ಪಮಟ್ಟಿಗೆ ಕಡಿಮೆಯಿತ್ತು.

ವಿದೇಶಿ ಅತಿಥಿಯಿಲ್ಲ:
ಕಳೆದ 55 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿದೇಶಿ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಆದರೆ, 122 ಸದಸ್ಯರ ಬಾಂಗ್ಲಾ ಸಶಸ್ತ್ರ ಪಡೆಯು ಪಥಸಂಚಲನದಲ್ಲಿ ಪಾಲ್ಗೊಂಡಿತ್ತು. 1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯ ಸಾಧಿಸಿದ ನೆನಪಲ್ಲಿ ದೇಶವು ಸ್ವರ್ಣಿಮ್‌ ವಿಜಯ ವರ್ಷವನ್ನು ಆಚರಿಸುತ್ತಿದ್ದು, ಭಾರತೀಯ ಸೇನೆಯ ಟಿ-90 ಭೀಷ್ಮ, ಬಿಎಂಪಿ-2 ಶರಥ್‌, ಬ್ರಹ್ಮೋಸ್‌ ಕ್ಷಿಪಣಿಯ ಲಾಂಚರ್‌, ಪಿನಾಕಾ, ಎಲೆಕ್ಟ್ರಾನಿಕ್‌ ವಾರ್‌ಫೇರ್‌ ಸಿಸ್ಟಂ ಸಂವಿಜಯ್‌ ಕೂಡ ಪರೇಡ್ನಲ್ಲಿ ಬಲ ಪ್ರದರ್ಶನ ಮಾಡಿದವು.

ತೇಜಸ್‌ ಯುದ್ಧ ವಿಮಾನದ ಯಶಸ್ವಿ ಟೇಕ್‌ ಆಫ್ ಹಾಗೂ ಟ್ಯಾಂಕ್‌ ನಿಗ್ರಹ ಕ್ಷಿಪಣಿ ವ್ಯವಸ್ಥೆಯನ್ನು ಬಂಬಿಸುವ ಎರಡು ಸ್ತಬ್ಧ ಚಿತ್ರಗಳನ್ನು ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಪ್ರದರ್ಶಿಸಿತು. ಪರೇಡ್‌ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.

131 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಾಟ
ಜಮ್ಮು ಜಿಲ್ಲೆಯ ಭಾರತ-ಪಾಕ್‌ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಮಂಗಳವಾರ ಬರೋಬ್ಬರಿ 131 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. 30×20 ಅಡಿ ವಿಸ್ತೀರ್ಣದ ತ್ರಿವರ್ಣ ಧ್ವಜ ಇದಾಗಿದ್ದು, ಅತ್ತ ಪಾಕಿಸ್ತಾನದಲ್ಲಿ ಭೂಪ್ರದೇಶದಲ್ಲಿ ನಿಂತು ನೋಡಿದರೂ ಈ ಧ್ವಜ ಕಾಣಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶಗಳಲ್ಲೂ ಸಂಭ್ರಮ
ಚೀನಾ, ಸಿಂಗಾಪುರ, ಬಾಂಗ್ಲಾ, ಪಾಕಿಸ್ತಾನ, ಆಸ್ಟ್ರೇಲಿಯ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯವಾಗಿ ಚೀನಾ ರಾಜಧಾನಿ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತದ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮ ನಡೆಸಲಾಯಿತು. ಕೊರೊನಾ ನಿಯಂತ್ರಿಸಲು ಚೀನಾಡಳಿತ ಬಿಗಿ ನಿರ್ಬಂಧಗಳನ್ನು ಹೇರಿರುವುದರಿಂದ; ಅಧಿಕಾರಿಗಳು ಮತ್ತು ಕುಟುಂಬವರ್ಗ ಮಾತ್ರ ಪಾಲ್ಗೊಂಡಿತ್ತು. ಚೈತಿ ಆರ್ಟ್ಸ್ ಫೌಂಡೇಶನ್‌ನಿಂದ ಸಿದ್ಧಪಡಿಸಲ್ಪಟ್ಟಿರುವ ವಂದೇ ಮಾತರಂ ಅನ್ನು ನುಡಿಸಬಲ್ಲಂತಹ ವಿಶೇಷ ಸಂಗೀತವಾದ್ಯವನ್ನು; ರಾಯಭಾರಿ ವಿಕ್ರಮ್‌ ಮಿಸ್ರಿ ಬಿಡುಗಡೆಗೊಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.