Reservation for Job; ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲು: ಸರ್ಕಾರ ಯೂಟರ್ನ್‌

ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ವಿಧೇಯಕ ಸದ್ಯಕ್ಕೆ ತಡೆ: ಸಿಎಂ ಸಿದ್ದರಾಮಯ್ಯ ಟ್ವೀಟ್‌

Team Udayavani, Jul 17, 2024, 9:32 PM IST

CM-siddu

ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಕೈಗಾ ರಿಕೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿ ತಾತ್ಮಕ ಹುದ್ದೆಗಳಲ್ಲಿ ಶೇ. 50 ಹಾಗೂ ಆಡಳಿತಾತ್ಮಕ ವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲು ನೀಡುವ ಮಸೂದೆಗೆ ಕೈಗಾರಿಕೋದ್ಯಮಿಗಳ ಜತೆಗೆ ಸಂಪುಟ ಸಹೋದ್ಯೋಗಿಗಳಿಂದಲೇ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರಕಾರವು ವಿಧೇಯಕವನ್ನು ತಾತ್ಕಾಲಿಕವಾಗಿ
ತಡೆ ಹಿಡಿದಿದೆ.

ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆಯ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತೂಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಕಾರ್ಯಾ ಲಯ ಬುಧವಾರ ರಾತ್ರಿ ಪ್ರಕಟಿಸುವುದರೊಂದಿಗೆ ಇದೇ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಕ್ಷೀಣಿಸಿದೆ. ಜು. 22ರಂದು ಸಚಿವ ಸಂಪುಟ ಸಭೆ ಕರೆದಿದ್ದು ಈ ವಿಚಾರವನ್ನು ಪರಾಮರ್ಶೆಗೆ ಒಳಪಡಿಸಲಿದೆ. ಇದಕ್ಕಾಗಿ ಸಂಪುಟ ಉಪಸಮಿತಿಯನ್ನೂ ರಚಿಸಿದೆ.

ಏನೇನಾಗಿತ್ತು?
ಸಂಪುಟ ನಿರ್ಣಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಟ್ವೀಟ್‌ ಮಾಡುತ್ತಿದ್ದಂತೆ ಔದ್ಯಮಿಕ ವಲಯ ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು. ಬೃಹತ್‌ ಕೈಗಾರಿಕೆ ಹಾಗೂ ಐಟಿಬಿಟಿ ಇಲಾಖೆ ಸಚಿವರು ಹಾಗೂ ಅಧಿಕಾರಿಗಳಿಗೂ ಉದ್ಯಮಿಗಳು ಕರೆ ಮಾಡಿ ಪ್ರತಿರೋಧ ವ್ಯಕ್ತಪಡಿಸಿದ್ದರು. ಇದರ ಜತೆಗೆ, ಆಂಧ್ರ, ಕೇರಳ ಸೇರಿದಂತೆ ನೆರೆರಾಜ್ಯಗಳು ಕೂಡ ಈ ವಿವಾದದ ಲಾಭ ಪಡೆದುಕೊಂಡು ತಮ್ಮ ರಾಜ್ಯಕ್ಕೆ ಬರುವಂತೆ ಕರ್ನಾಟಕದ ಕಂಪೆನಿಗಳಿಗೆ ಮುಕ್ತ ಆಹ್ವಾನವನ್ನೂ ನೀಡಲಾರಂಭಿಸಿದ್ದವು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸರಕಾರ ಯೂಟರ್ನ್ ಹೊಡೆದು ಕನ್ನಡಿಗರ ಮೀಸಲು ಮಸೂದೆಗೆ ತಾತ್ಕಾಲಿಕ ತಡೆ ತಂದು ಘೋಷಣೆ ಹೊರಡಿಸಿದೆ. ಸರಕಾರದ ಉನ್ನತ ಮೂಲಗಳ ಪ್ರಕಾರ, ಸಿದ್ದರಾಮಯ್ಯ ವಿವಿಧ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜತೆಗೆ ಈ ಸಂಬಂಧ ಚರ್ಚೆ ನಡೆಸಲು ಬಯಸಿದ್ದಾರೆ. ಬಳಿಕ ಮಸೂದೆಯ ಸ್ವರೂಪದಲ್ಲಿ ಬದಲಾವಣೆಗಳಾದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಚರ್ಚೆಯೇ ನಡೆದಿಲ್ಲ
ಸಂಪುಟದ ಹಿರಿಯ ಸಚಿವರೊಬ್ಬರ ಪ್ರಕಾರ, ಈ ವಿಚಾರ ಸಚಿವ ಸಂಪುಟ ಸಭೆಗೆ ಬರುವುದಕ್ಕೂ ಮುನ್ನ ಅಂತರ್‌ ಇಲಾಖಾ ಮಟ್ಟದಲ್ಲಿ ಚರ್ಚೆಯಾಗಬೇಕಿತ್ತು. ಆದರೆ ಕಾರ್ಮಿಕ ಇಲಾಖೆಯಿಂದ ಅಂತಹ ಪ್ರಯತ್ನವೇ ನಡೆದಿಲ್ಲ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು” ಎಂದು ಎಕ್ಸ್‌ (ಟ್ವಿಟರ್‌) ನಲ್ಲಿ ಬರೆದು ಕೊಂಡಿದ್ದಾರೆ.

ರಾಜ್ಯ ಸರ್ಕಾರದ ಪ್ರಸ್ತಾವಿತ ವಿಧೇಯಕಕ್ಕೆ ಉದ್ಯಮ ವಲಯದಿಂದ, ಪ್ರಮುಖ ಉದ್ಯಮಿಗಳಿಂದ ವ್ಯಾಪಕ ವಿರೋಧ, ಟೀಕೆ ವ್ಯಕ್ತವಾದ್ದರಿಂದ ಈ ವಿಧೇಯಕವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲು ಮುಂದಾಗಿದೆ.

ತಡೆಹಿಡಿಯಲು ಕಾರಣವೇನು?
1.  ಸಿ, ಡಿ ದರ್ಜೆ ನೌಕರರಿಗೆ ಶೇ. 100 ಉದ್ಯೋಗ ಮೀಸಲು ಎಂಬ ಅನಗತ್ಯ ವಿವಾದ

2. ಸರಕಾರದ ಮೀಸಲು ಮಸೂದೆಗೆ ಉದ್ಯಮ ಒಕ್ಕೂಟಗಳಿಂದ ಭಾರೀ ಆಕ್ಷೇಪ

3.  ವಿವಾದದ ಬೆನ್ನಲ್ಲೇ ರಾಜ್ಯದ ಖಾಸಗಿ ಕಂಪೆನಿಗಳಿಗೆ ನೆರೆರಾಜ್ಯಗಳಿಂದ ಗಾಳ

4.ಈ ನಿರ್ಧಾರದ ಬಗ್ಗೆ ಸರಕಾರದ ಇಲಾಖೆಗಳ ನಡುವೆಯೇ ಗೊಂದಲ, ಅಸಮಾಧಾನ

5. ದಿಢೀರ್‌ ನಿರ್ಧಾರ ಘೋಷಿಸಿದ್ದಕ್ಕೆ ಸಂಪುಟ ಸಹೋದ್ಯೋಗಿಗಳಿಂದಲೂ ವಿರೋಧ

6. ತರಾತುರಿ ಮಾಡಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂಬ ಉದ್ದೇಶ

ಟಾಪ್ ನ್ಯೂಸ್

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಸಿದ್ದರಾಮಯ್ಯ ಅವರ ಜನಪ್ರೀಯತೆ ಕುಗ್ಗಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ: ಸಂತೋಷ್ ಲಾಡ್

Hubballi: ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ…: ಸಂತೋಷ್ ಲಾಡ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.