ಬಗೆಹರಿಯಲಿ ರೈತರು-ಕೇಂದ್ರದ ನಡುವಿನ ಬಿಕ್ಕಟ್ಟು


Team Udayavani, Jan 22, 2021, 7:30 AM IST

ಬಗೆಹರಿಯಲಿ ರೈತರು-ಕೇಂದ್ರದ ನಡುವಿನ ಬಿಕ್ಕಟ್ಟು

ಮೂರು ಕೃಷಿ ಕಾಯ್ದೆಗಳ ವಿಚಾರದಲ್ಲಿ ಕೆಲವು ತಿಂಗಳುಗಳಿಂದ ಕೇಂದ್ರ ಹಾಗೂ ರೈತರ ನಡುವೆ ಜಟಿಲವಾಗುತ್ತಾ ಬಂದಿದ್ದ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದುವರೆಗೂ ಈ ವಿಚಾರದಲ್ಲಿ ಕೇಂದ್ರ ಹಾಗೂ ರೈತ ಸಂಘಟನೆಗಳ ನಡುವೆ 10 ಬಾರಿ ಸಭೆ ನಡೆದಿದ್ದು, ಯಾವ ಸಭೆಯೂ ಫ‌ಲಪ್ರದವಾಗಿಲ್ಲ.

ಬುಧವಾರ ನಡೆದ 10ನೇ ಸುತ್ತಿನ ಸಭೆಯಲ್ಲಿ ಕೇಂದ್ರ ಸರಕಾರ‌ ಒಂದೂವರೆ ವರ್ಷದವರೆಗೆ ಮೂರು ಕೃಷಿ ಕಾಯ್ದೆಗಳನ್ನು ಅಮಾನತಿನಲ್ಲಿಡುವ ಪ್ರಸ್ತಾವವಿರಿಸಿತ್ತು. ಈ ನಿರ್ಣಯವನ್ನು ರೈತ ಸಂಘಟನೆಗಳು ಒಪ್ಪಿಕೊಳ್ಳಬಹುದೆಂಬ ನಿರೀಕ್ಷೆಯಿತ್ತಾದರೂ ಕೇಂದ್ರದ ಈ ಪ್ರಸ್ತಾವವನ್ನೂ ಅವು ನಿರಾಕರಿಸಿವೆ.

“ನೀ ಕೊಡೆ, ನಾ ಬಿಡೆ’ ಎನ್ನುವಂತಾಗಿರುವ ಈ ಬಿಕ್ಕಟ್ಟು, ಬೇಗನೇ ತಾರ್ಕಿಕ ಅಂತ್ಯ ಕಾಣಲೇಬೇಕಿದೆ. ಆದಾಗ್ಯೂ ಕೇಂದ್ರ ಸರಕಾರ, ಈ ಕಾಯ್ದೆಗಳ  ಜಾರಿಯನ್ನು ಮುಂದೂಡಲು ಸಿದ್ಧವಿದೆಯೇ ಹೊರತು, ರದ್ದು ಮಾಡಲು ಮುಂದಾಗುವ ಇರಾದೆಯಲ್ಲಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಕೃಷಿ ಕಾಯ್ದೆಗಳು ರೈತ ಸ್ನೇಹಿಯಾಗಿವೆ, ದೇಶದ ಕೃಷಿ ವಲಯವನ್ನೂ ಆಮೂಲಾಗ್ರವಾಗಿ ಬದಲಿಸಲಿವೆ ಎನ್ನುವ ವಾದಕ್ಕೆ ಅದು ಬದ್ಧವಾಗಿ ನಿಂತಿದೆ.

ಈ ಕಾಯ್ದೆಗಳ ಮೂಲಕ ಕೇಂದ್ರವು ಎಪಿಎಂಸಿಯ ಹೊರಗೂ ರೈತರು ತಮ್ಮ ಬೆಳೆಗಳ ಮಾರಾಟಕ್ಕೆ ಅವಕಾಶ, ಅಂತಾರಾಜ್ಯ ಮಾರಾಟಕ್ಕೆ ಇದ್ದ ತಡೆ ತೆರವು, ಆನ್‌ಲೈನ್‌ ವ್ಯಾಪಾರಕ್ಕೆ ವ್ಯವಸ್ಥೆಯಂಥ ವಿನೂತನ ಕ್ರಮಗಳಿಗೆ ಮುಂದಾಗಿದೆ. ಆದರೆ ಇದರಿಂದಾಗಿ ಎಪಿಎಂಸಿ ನಗಣ್ಯವಾಗುತ್ತದೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ರದ್ದಾಗುತ್ತದೆ, ರೈತರು ಬಂಡವಾಳಶಾಹಿಗಳ ಕಪಿ ಮುಷ್ಠಿಗೆ ಸಿಲುಕುತ್ತಾರೆ ಎನ್ನುವುದು ರೈತ ಸಂಘಟನೆಗಳ ವಾದ. ಕೇಂದ್ರವು ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ನಿಲ್ಲುವುದಿಲ್ಲ ಎಂದು ಪದೇ ಪದೆ ಹೇಳುತ್ತಲೇ ಇದೆ. ಆದರೆ ಇದನ್ನು ಕಾನೂನಿನ ರೂಪದಲ್ಲಿ ಖಾತರಿ ಪಡಿಸಿ ಎನ್ನುವುದು ರೈತರ ವಾದ. ಈಗ ಈ ಮೂರೂ ಕಾಯ್ದೆಗಳನ್ನು ಪೂರ್ಣವಾಗಿ ರದ್ದು ಮಾಡಲೇಬೇಕು ಎನ್ನುವ ಕೂಗು ಅಧಿಕವಾಗಿದೆ.

ಹಾಗೆಂದು ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ, ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ ಹಾಗೂ ಕೃಷಿ ಸೇವೆ ಮತ್ತು ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳನ್ನು ಏಕಾಏಕಿ ತೆಗೆದುಹಾಕಬೇಕು ಎನ್ನುವುದೂ ತರವಲ್ಲ. ಅದರಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಗಳಾಗಲಿ, ಕೇಂದ್ರವೂ ಬೆಂಬಲ ಬೆಲೆ ವ್ಯವಸ್ಥೆಗೆ ಖಾತರಿ ನೀಡುವಂಥ ಕಾನೂನನ್ನು ಜಾರಿ ಮಾಡಲಿ. ಆಗ ರೈತರ ಆತಂಕ ಶಮನವಾಗಬಹುದು. ಮಾತುಕತೆಯೇ ಪರಿಹಾರಕ್ಕೆ ಮುಖ್ಯ ಹಾದಿ. ಆರೋಪ-ಪ್ರತ್ಯಾರೋಪಗಳಿಂದ ಪರಿಸ್ಥಿತಿ ಸುಧಾರಿಸುವುದಿಲ್ಲ. ಈ ಪ್ರತಿಭಟನೆಗಳು ರಾಜಕೀಯ ಸ್ವರೂಪದಿಂದ ಕೂಡಿದೆ ಎನ್ನುವುದೋ, ಖಲಿಸ್ಥಾನಿ ಬೆಂಬಲಿಗರು ಈ ಹೋರಾಟದ ಭಾಗವಾಗಿದ್ದಾರೆ ಎನ್ನುವ ಹೇಳಿಕೆಗಳೆಲ್ಲ ಪರಿಸ್ಥಿತಿ ಹದಗೆಡುವುದಕ್ಕೆ ಕಾರಣವಾಗುತ್ತಿದೆ. ಇನ್ನೊಂದೆಡೆ ವಿಪಕ್ಷಗಳೂ ಕೂಡ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಲೇ ಇರುವುದರಿಂದ ಪರಿಸ್ಥಿತಿ ಕಗ್ಗಂಟಾಗುತ್ತಲೇ ಬಂದಿದೆ. ವಿಪಕ್ಷಗಳೂ ಬೆಂಕಿ ಬಿದ್ದ ಮನೆಯಲ್ಲಿ ಹಿಡಿಯುವ ಕೆಲಸ ಬಿಟ್ಟು, ಪ್ರಾಮಾಣಿಕತೆಯಿಂದ ಈ ವಿಷಯವನ್ನು ನಿಭಾಯಿಸುವಂತಾಗಲಿ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.