ಪ್ರೀತಂ ಗೌಡರಿಗೆ ಸವಾಲು; ಹಾಸನದಿಂದ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ
ಹಟ ಸಾಧನೆಗಾಗಿ ಎಂತಹ ಸವಾಲು ಎದುರಿಸುವುದಕ್ಕೂ ಸೈ
Team Udayavani, Feb 24, 2023, 8:00 AM IST
ಹಾಸನ: ಎಚ್.ಡಿ. ರೇವಣ್ಣ ಅವರು ಹಿಡಿದ ಹಟ ಬಿಡುವುದಿಲ್ಲ. ಹಟ ಸಾಧನೆಗಾಗಿ ಎಂತಹ ಸವಾಲು ಎದುರಿಸುವುದಕ್ಕೂ ಸೈ ಎನ್ನುವುದು ರೇವಣ್ಣ ಅವರ ಸ್ವಭಾವ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಲೇಬೇಕು ಎಂದು ರೇವಣ್ಣ ಹಠಕ್ಕೆ ಬಿದ್ದಂತೆ ಕಾಣುತ್ತಿದೆ.
ಎಚ್.ಡಿ. ಕುಮಾರಸ್ವಾಮಿ ಅವರು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆಗೆ ಒಪ್ಪುತ್ತಿಲ್ಲ. ಮಾಜಿ ಶಾಸಕ ಎಚ್.ಎಸ್. ಪ್ರಕಾಶ್ ಅವರ ಪುತ್ರ ಎಚ್.ಪಿ. ಸ್ವರೂಪ್ ಅವರನ್ನು ಸ್ಪರ್ಧೆಗಿಳಿಸುವ ಚಿಂತನೆ ನಡೆಸಿದ್ದರು. ಆದರೆ ಬಿಜೆಪಿ ಶಾಸಕ ಪ್ರೀತಂ ಜೆ. ಗೌಡ ಅವರನ್ನು ಎದುರಿಸುವ ಸಾಮರ್ಥ್ಯ ಸ್ವರೂಪ್ಗೆ ಇಲ್ಲ ಎಂಬ ಅಭಿಪ್ರಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರೇ ಹಾಸನ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯುವುದು ಸೂಕ್ತ ಎಂಬ ಅಭಿಪ್ರಾಯ ಜೆಡಿಎಸ್ ವಲಯದಲ್ಲಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರು ಗುರುವಾರದಿಂದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಈ ನಡೆಯನ್ನು ಗಮನಿಸಿದರೆ ಹಾಸನ ಕ್ಷೇತ್ರದಲ್ಲಿ ಶಾಸಕ ಪ್ರೀತಂ ಗೌಡ ಎದುರು ಎಚ್.ಡಿ. ರೇವಣ್ಣ ಅವರೇ ಸ್ಪರ್ಧೆಗಿಳಿಯುವುದು ಖಚಿತವೆಂದು ಕಾಣುತ್ತಿದೆ. ಹೊಳೆನರಸೀಪುರ ಮತ್ತು ಹಾಸನ ಕ್ಷೇತ್ರಗಳೆರಡರಲ್ಲೂ ರೇವಣ್ಣ ಸ್ಪರ್ಧೆ ಮಾಡುವ ಸಾಧ್ಯತೆ ಹೆಚ್ಚು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
ಕನ್ನಡದಲ್ಲಿ ಎಂಜಿನಿಯರಿಂಗ್ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.