“ರೈಡ್‌ ಫಾರ್‌ ಅಪ್ಪು”: ರಾಜ್ಯಾದ್ಯಂತ ಸೈಕ್ಲಿಂಗ್


Team Udayavani, Jan 1, 2022, 12:11 PM IST

8cycle

ಕಲಬುರಗಿ: ಬಹುತೇಕ ಜನ ಸೈಕ್ಲಿಂಗ್‌ನ್ನು ತಮ್ಮ ಹವ್ಯಾಸಕ್ಕಾಗಿಯೋ ಅಥವಾ ಯಾವುದೋ ದಾಖಲೆ ಸೃಷ್ಟಿ ಮಾಡಲೆಂದೋ ಮಾಡುತ್ತಾರೆ. ಆದರೆ, ಇಲ್ಲೊಬ್ಬರು ಕಳೆದ ಎರಡು ತಿಂಗಳ ಹಿಂದೆ ನಿಧನರಾದ ನಟ ಪುನೀತ್‌ ರಾಜಕುಮಾರ ಸ್ಮರಣೆ ಮತ್ತು ಅವರಿಗೆ ಅರ್ಪಿಸಲೆಂದೇ ಸೈಕ್ಲಿಂಗ್‌ ಮಾಡುತ್ತಿದ್ದಾರೆ. ಏಕಾಂಗಿಯಾಗಿ ಸೈಕಲ್‌ ತುಳಿಯುತ್ತಲೇ ರಾಜ್ಯ ಸುತ್ತುತ್ತಿದ್ದಾರೆ.

ಬೆಂಗಳೂರಿನ ಶರತ್‌ ಕುಮಾರ ಸಿದ್ಧನೂರ ಎಂಬುವವರೇ ಈ ಸಾಹಸಿ. ನ.22ರಂದು ಬೆಂಗಳೂರಿನ ಮಾಗಡಿ ರಸ್ತೆಯಿಂದ ಸೈಕ್ಲಿಂಗ್‌ ಆರಂಭಿಸಿದ್ದು, ಇದೀಗ ಕಲಬುರಗಿ ನಗರಕ್ಕೆ ತಲುಪಿದ್ದಾರೆ. ಮನೆಯಿಂದ ಹೊರಟು ಈಗಾಗಲೇ 40 ದಿನ ಕಳೆದಿದ್ದು, ಸುಮಾರು ಒಂದು ಸಾವಿರ ಕಿಲೋ ಮೀಟರ್‌ ಸೈಕ್ಲಿಂಗ್‌ ಮಾಡಿದ್ದಾರೆ.

ಶುಕ್ರವಾರ ನಗರದ ಯಾತ್ರಿಕ ನಿವಾಸದ ಸಮೀಪ “ಉದಯವಾಣಿ’ ಜತೆ ಶರತ್‌ ಮಾತಿಗೆ ಸಿಕ್ಕರು. ನಟ ಪುನೀತ್‌ ಅವರಿಗೆ ಅರ್ಪಿಸುವ ಉದ್ದೇಶದಿಂದ ಸೈಕ್ಲಿಂಗ್‌ ಮೂಲಕ ರಾಜ್ಯಾದ್ಯಂತ ಸಂಚರಿಸುತ್ತಿದ್ದೇನೆ. ಅಪ್ಪು ಅವರಿಗೂ ಸೈಕ್ಲಿಂಗ್‌ ಅಚ್ಚುಮೆಚ್ಚು ಆಗಿದ್ದರಿಂದ ಅವರ ಸ್ಮರಣೆಯಲ್ಲಿ ಸೈಕ್ಲಿಂಗ್‌ ಮಾಡುತ್ತಿದ್ದೇನೆ. ಬೆಂಗಳೂರಿನಿಂದ ಹೊರಟು ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸೈಕ್ಲಿಂಗ್‌ ಮುಗಿಸಿದ್ದೇನೆ ಎಂದು ಹೇಳಿದರು.

ನಿತ್ಯ 50 ಕಿ.ಮೀ ಸಂಚಾರ

ಗೂಗಲ್‌ ಸರ್ಚ್‌ ಇಂಜಿನ್‌ನ ಪರಿಣಿತರಾದ ಶರತ್‌ ಅವರಿಗೆ ಸೈಕ್ಲಿಂಗ್‌ ಹವ್ಯಾಸವಿದೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೈಕಲ್‌ ಮೂಲಕವೇ ಸಂಚರಿಸುತ್ತಿರುವ ಇವರು ನಿತ್ಯವೂ ಸರಿಸುಮಾರು 50 ಕಿ.ಮೀ ಸೈಕಲ್‌ ತುಳಿಯುತ್ತಿದ್ದಾರೆ. ಎಲ್ಲೆಡೆ “ರೈಡ್‌ ಫಾರ್‌ ಅಪ್ಪು’ ಎಂದು ಹೊರಟಿದ್ದಾರೆ. ಪುನೀತ್‌ ಸ್ಮರಣೆಯಲ್ಲಿ ಮಾಡುತ್ತಿರುವ ಈ ಸೈಕ್ಲಿಂಗ್‌ಗೆ ಇದುವರೆಗೆ ಸಂಚಾರ ಮಾಡಿದ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸೈಕಲ್‌ ಮೇಲಿನ “ರೈಡ್‌ ಫಾರ್‌ ಅಪ್ಪು’ ಬರಹ ನೋಡಿಯೇ ಅವರ ಅಭಿಮಾನಿಗಳು ಆತ್ಮೀಯವಾಗಿ ತಮ್ಮ ಜಿಲ್ಲೆಗೆ ಸ್ವಾಗತಿಸುತ್ತಿದ್ದಾರೆ. ಅಲ್ಲದೇ, ಕೆಲವು ಕಡೆಗಳಲ್ಲಿ ರಾತ್ರಿ ವಸತಿ ವ್ಯವಸ್ಥೆಯನ್ನು ಅಪ್ಪು ಅಭಿಮಾನಿಗಳೇ ಮಾಡಿದ್ದರು. ಉಳಿದಂತೆ ಮಠ ಮಾನ್ಯಗಳಲ್ಲಿ ರಾತ್ರಿ ಕಳೆದು ಮುಂದೆ ಸಂಚರಿಸುತ್ತಿದ್ದೇನೆ ಎನ್ನುತ್ತಾರೆ ಅವರು.

ತಾಣಗಳ ಪರಿಚಯಿಸುವ ಗುರಿ

ಸೈಕ್ಲಿಂಗ್‌ ಮೂಲಕ ತಾವು ಸಂಚರಿಸುವ ಜಿಲ್ಲೆ ಮತ್ತು ಪ್ರದೇಶದ ಸ್ಥಳೀಯ ತಾಣಗಳು, ವಿಶೇಷ ಆಹಾರ ಪದ್ಧತಿ ಪರಿಚಯಿಸುವ ಉದ್ದೇಶ ಹೊಂದಿದ್ದೇನೆ. ಮೊಬೈಲ್‌ನಲ್ಲಿ ಸ್ಥಳೀಯ ವಿಶೇಷತೆಗಳನ್ನು ಚಿತ್ರೀಕರಿಸಿ ಅದನ್ನು ಯೂ-ಟೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. ಮುಂದೆ ಬೀದರ್‌, ವಿಜಯಪುರ, ಬೆಳಗಾವಿ, ಕಾರವಾರ, ಮಂಗಳೂರು… ಹೀಗೆ ಎಲ್ಲ ಜಿಲ್ಲೆಗಳಲ್ಲಿ ಸೈಕ್ಲಿಂಗ್‌ ಮೂಲಕ ಸಂಚರಿಸಿ ಬೆಂಗಳೂರಿಗೆ ತಲುಪಲಾಗುತ್ತದೆ ಎಂದು ಶರತ್‌ ಹೇಳುತ್ತಾರೆ.

ನಟ ಪುನೀತ್‌ ರಾಜಕುಮಾರ ಅವರ ಸ್ಮರಣೆ ಮತ್ತು ಈ ಸೈಕ್ಲಿಂಗ್‌ ಅವರಿಗೆ ಅರ್ಪಿಸಲು ರಾಜ್ಯ ಸುತ್ತುತ್ತಿದ್ದೇನೆ. ಒಟ್ಟಾರೆ ಅಂದಾಜು 4 ಸಾವಿರಕ್ಕೂ ಅಧಿಕ ಕಿ.ಮೀ ಆಗಲಿದ್ದು, ಮೂರೂವರೆ ತಿಂಗಳ ಕಾಲ ಈ ಸಂಚಾರ ನಡೆಯಲಿದೆ. ರಾಜ್ಯ ಸುತ್ತಿದ ಮೇಲೆ ಅಪ್ಪು ಸಮಾಧಿಗೆ ಹೋಗಿ ನಮನ ಸಲ್ಲಿಸಲಿದ್ದೇನೆ. ಶರತ್ಸಿದ್ದನೂರ, ಸೈಕ್ಲಿಂಗ್ಸಾಹಸಿ

-ರಂಗಪ್ಪ ಗಧಾರ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.