![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 21, 2020, 4:52 PM IST
ಬ್ರಹ್ಮಾವರ ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ ಇನ್ನೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದ ಘಟನೆ ಬಾರಕೂರು ಚೌಳಿಕೆರೆ ಬಳಿ ರವಿವಾರ ನಡೆದಿದೆ.
ಮೃತ ದುರ್ದೈವಿಯನ್ನು ಉದ್ಯಮಿ ವಕ್ವಾಡಿಯ ಸಂತೋಷ ಶೆಟ್ಟಿ ಎಂದು ಗುರುತಿಸಲಾಗಿದ್ದು ಇವರು ಕೋಟೇಶ್ವರ ಸಮೀಪದ ಬೀಜಾಡಿಯಲ್ಲಿ ಶ್ರೀ ಲಕ್ಷ್ಮೀ ಗ್ಲಾಸ್ ಮತ್ತು ಫ್ಲೈ ವುಡ್ ಶಾಪ್ ನಡೆಸುತ್ತಿದ್ದರು ಎಂದು ಹೇಳಲಾಗಿದೆ.
ಕಾರಿನಲ್ಲಿದ್ದ ಮಹಿಳೆಯ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ, ಸದ್ಯ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಾರಕೂರಿನ ಚೌಳಿಕೆರೆ ಬಳಿ ಕಡಿದಾದ ತಿರುವೊಂದು ಇದ್ದು ಕೆರೆಗೆ ಯಾವುದೇ ರೀತಿಯ ತಡೆಗೋಡೆ ಇಲ್ಲದೆ ಇಂತಹ ದುರ್ಘಟನೆಗಳು ನಡೆಯುತ್ತಿದೆ ಎನ್ನಲಾಗಿದೆ.
ಈ ಹಿಂದೆ ಇಲ್ಲಿ ಹಲವಾರು ಅಪಘಾತ ಗಳು ಸಂಭವಿಸಿದ್ದು , ಸ್ವಲ್ಪ ಸಮಯದ ಹಿಂದೆ ಒಂದು ಬೈಕ್ ಸಹ ಕೆರೆಗೆ ಬಿದ್ದಿತ್ತು ಹಾಗಾಗಿ ಕೆರೆಗೆ ಒಂದು ಕಬ್ಬಿಣದ ತಡೆ ಗೋಡೆಯ ಅವಶ್ಯಕತೆ ಅನಿವಾರ್ಯ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.