ಒತ್ತುವರಿ ಕಾಫಿ ತೋಟ ಗುತ್ತಿಗೆಗೆ ನಿಯಮ; ಎಕ್ರೆಗೆ 2 ಸಾವಿರ ರೂ. ನಿಗದಿ

50 ಸಾವಿರ ರೈತರಿಗೆ ಒತ್ತುವರಿ ಆರೋಪದಿಂದ ಮುಕ್ತಿ

Team Udayavani, Dec 20, 2022, 7:35 AM IST

ಒತ್ತುವರಿ ಕಾಫಿ ತೋಟ ಗುತ್ತಿಗೆಗೆ ನಿಯಮ; ಎಕ್ರೆಗೆ 2 ಸಾವಿರ ರೂ. ನಿಗದಿ, 30 ವರ್ಷ ಗುತ್ತಿಗೆ ಅವಧಿ

ಬೆಳಗಾವಿ: ಮಲೆನಾಡು ಭಾಗದಲ್ಲಿ ಸರಕಾರಿ ಜಾಗದಲ್ಲಿರುವ ಕಾಫಿ ತೋಟ ಒತ್ತುವರಿಯನ್ನು ಸಕ್ರಮಗೊಳಿಸಿ ಗುತ್ತಿಗೆಗೆ ನೀಡಲು ರಾಜ್ಯ ಸರಕಾರ ನಿಯಮಾವಳಿ ಸಿದ್ಧಪಡಿಸಿದೆ. ಒಂದು ಎಕ್ರೆಗೆ ವರ್ಷಕ್ಕೆ ಎರಡು ಸಾವಿರ ರೂ.ಯಂತೆ 30 ವರ್ಷಗಳ ಲೀಸ್‌ ಮೊತ್ತವನ್ನು ಮೊದಲೇ ಕಟ್ಟಿಸಿಕೊಳ್ಳಲು ನಿರ್ಧರಿಸಲಾಗಿದೆ.

ಸುಮಾರು ಒಂದು ಲಕ್ಷ ಎಕ್ರೆ ಸಕ್ರಮವಾಗಲಿದ್ದು, ರಾಜ್ಯದ ಬೊಕ್ಕಸಕ್ಕೆ 400 ಕೋಟಿ ರೂ.ವರೆಗೆ ಆದಾಯವೂ ಸಂಗ್ರಹವಾಗಲಿದೆ.

ಇಪ್ಪತ್ತು ಎಕ್ರೆವರೆಗಿನ ಒತ್ತುವರಿ ಸಕ್ರಮಕ್ಕೆ ತೀರ್ಮಾನಿಸಿದ್ದು, 1ರಿಂದ 5 ಎಕರೆ ಒತ್ತುವರಿ ಪ್ರಮಾಣವೇ ಶೇ.80ರಷ್ಟು ಇದೆ. ಸಣ್ಣ ಮತ್ತು ಅತಿ ಸಣ್ಣ ರೈತರೇ ಹೆಚ್ಚಾಗಿದ್ದಾರೆ ಎಂದು ಹೇಳಲಾಗಿದೆ. ರೈತರಿಗೆ ಕಾಫಿ ತೋಟ ಗುತ್ತಿಗೆ ನೀಡುವ ಸಂಬಂಧ ಇದೇ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ.

ಪ್ರಮಾಣಪತ್ರ
ಕಾಫಿ ತೋಟ ಒತ್ತುವರಿ ಸಕ್ರಮಕ್ಕೆ ಪ್ರತ್ಯೇಕ ನಮೂನೆ ಸಿದ್ಧಪಡಿಸಲಾಗುತ್ತಿದ್ದು, ಮೊದಲು ಒತ್ತುವರಿ ಮಾಡಿಕೊಂಡಿರುವ ರೈತ ಪ್ರಮಾಣಪತ್ರ ನೀಡಬೇಕು. ಎಷ್ಟು ಎಕ್ರೆ ಒತ್ತುವರಿ ಎಂಬುದನ್ನು ತಿಳಿಸಬೇಕು. ಅನಂತರ ಆ ಜಮೀನು ಗುತ್ತಿಗೆ ಆಧಾರದಲ್ಲಿ ಪಡೆಯಲು ಅರ್ಜಿ ಸಲ್ಲಿಸಬೇಕು. ಸರಕಾರ ನಿಗದಿಪಡಿಸುವ ಮೊತ್ತವನ್ನು ಒಮ್ಮೆಲೇ ಪಾವತಿಸಬೇಕು. 30 ವರ್ಷಗಳಿಗೆ ಮಾತ್ರ ಸದ್ಯಕ್ಕೆ ಗುತ್ತಿಗೆಗೆ ನೀಡಲು ತೀರ್ಮಾನಿಸಲಾಗಿದ್ದು, ಇನಂತರ ಆಗಿನ ಪರಿಸ್ಥಿತಿ ನೋಡಿಕೊಂಡು ಮುಂದುವರಿಯಲು ನಿರ್ಧರಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಈಗಾಗಲೇ ಒಂದು ಲಕ್ಷ ಎಕ್ರೆ ಕಾಫಿ ತೋಟ ಒತ್ತುವರಿ ಗುರುತಿಸಲಾಗಿದೆ. ಕಾಫಿ ತೋಟದ ಮಧ್ಯೆ ಸರಕಾರಿ ಜಾಗ ಇದ್ದು, ಅಲ್ಲಿ ಒತ್ತುವರಿ ಮಾಡಿ ತೋಟ ಮಾಡಲಾಗಿದೆ.
ಮಲೆನಾಡು ಭಾಗದ ಜನಪ್ರತಿನಿಧಿಗಳ ಜತೆ ಈ ಬಗ್ಗೆ ಹಲವು ಸುತ್ತಿನ ಸಭೆ ನಡೆದು ನಿಯಮಾವಳಿ ರೂಪುರೇಷೆ ಚರ್ಚಿಸಲಾಗಿದ್ದು, ಅನಂತರವೇ ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಸೇಂದಿವನವೂ ಕೃಷಿಗೆ ಬಳಕೆ
ಈ ನಡುವೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿರುವ ಸೇಂದಿವನ ಜಾಗ ರೈತರಿಗೆ ಉಳುಮೆ ಮಾಡಲು ಸಾಗುವಳಿ ಚೀಟಿ ನೀಡಲು ಸರಕಾರ ಮುಂದಾಗಿದ್ದು, ಈ ವಿಚಾರವೂ ಭೂ ಕಂದಾಯ ತಿದ್ದುಪಡಿ ಮಸೂದೆಯಲ್ಲಿ ಸೇರಿದೆ.

ಈ ಹಿಂದೆ ಸೇಂದಿವನಎಂದು ಗುರುತಿಸಲಾಗಿದ್ದ ಜಾಗ ಸರಕಾರದ ಸುಪರ್ದಿಯಲ್ಲಿದ್ದು, ಅಲ್ಲಿ ಕೃಷಿ ಚುಟುವಟಿಕೆ ನಡೆಸುತ್ತಿರುವ ರೈತರಿಗೆ ಶಾಶ್ವತವಾಗಿ ಸಾಗುವಳಿಚೀಟಿ ನೀಡುವುದು ಸರಕಾರದ ಉದ್ದೇಶವಾಗಿದಸೆ ಎಂದು ಹೇಳಲಾಗಿದೆ.

ಮಲೆನಾಡು, ಕರಾವಳಿ ಭಾಗದಲ್ಲಿ 50 ಸಾವಿರ ಎಕ್ರೆಗೂ ಹೆಚ್ಚು ಸೇಂದಿವನದ ಜಾಗ ಇದೆ. ಅಲ್ಲಿ ರೈತರು ಕೃಷಿ ಚಟುವಟಿಕೆ ಮಾಡುತ್ತಿದ್ದು, ಈಗ ಆ ಜಾಗವನ್ನು ರೈತರಿಗೆ ಬಿಟ್ಟುಕೊಟ್ಟು ಬಗರ್‌ಹುಕುಂ ಅಡಿ ಸಾಗುವಳಿ ಚೀಟಿ ನೀಡಲು ನಿಯಮಾವಳಿ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಾಫಿ ತೋಟ ಒತ್ತುವರಿ ಸಕ್ರಮಗೊಳಿಸಿ ಗುತ್ತಿಗೆಗೆ ನೀಡುವುದರಿಂದ ಸುಮಾರು 40ರಿಂದ 50 ಸಾವಿರ ರೈತರಿಗೆ ಇದರಿಂದ ಅನುಕೂಲವಾಗಲಿದೆ. ಈ ಭಾಗದ ರೈತರ ಮನವಿ ಮೇರೆಗೆ ಸರಕಾರ ಇದಕ್ಕೆ ಮುಂದಾಗಿದೆ. ಗುತ್ತಿಗೆ ನೀಡುವುದರಿಂದ ಸರಕಾರಕ್ಕೂ ಆದಾಯ ಸಿಗಲಿದೆ.
– ಆರ್‌.ಅಶೋಕ್‌, ಕಂದಾಯ ಸಚಿವ

-ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.