![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 30, 2023, 5:37 AM IST
ಮಡಿಕೇರಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (27)ಅನಾರ್ ಹುಸೈನ್ (37) ಜಹೀರ್ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 2.150ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷರಾದ ಸುಂದರ್ ರಾಜ್ ನಿರ್ದೇಶನದಂತೆ ಡಿವೈಎಸ್ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್,ಹರಿ ಪ್ರಸನ್ನ, ಮಧುಸೂದನ್,ಎಚ್. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್, ಚಾಲಕ ಆರೀಫ್ ಪಾಲ್ಗೊಂಡಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.