ಸಹಕಾರ ಬ್ಯಾಂಕ್ ಗಳಿಗೆ ಒಂದೇ ಸಾಫ್ಟ್‌ವೇರ್; ಚರ್ಚಿಸಿ ನಿರ್ಧಾರ: ಸಚಿವ ಸೋಮಶೇಖರ್ ಸೂಚನೆ

ಇನ್ನು 15 ದಿನದಲ್ಲಿ ನಡೆಯುವ ಮತ್ತೊಂದು ಸಭೆಯಲ್ಲಿ ತೀರ್ಮಾನ ತಿಳಿಸಲು ಸೂಚನೆ

Team Udayavani, Jun 17, 2020, 7:53 PM IST

ಸಹಕಾರ ಬ್ಯಾಂಕ್ ಗಳಿಗೆ ಒಂದೇ ಸಾಫ್ಟ್‌ವೇರ್; ಚರ್ಚಿಸಿ ನಿರ್ಧಾರ: ಸಚಿವ ಸೋಮಶೇಖರ್ ಸೂಚನೆ

ಬೆಂಗಳೂರು: ಸಹಕಾರ ಇಲಾಖೆಯ ವ್ಯಾಪ್ತಿಯೊಳಗೆ ಬರುವ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಹಾಗೂ ವಿಎಸ್ಎಸ್ಎನ್ ಸಂಘಗಳಿಗೆ ಒಂದೇ ಸಾಫ್ಟ್‌ವೇರ್ ಅಳವಡಿಸಲು ಸರ್ಕಾರದ ಅಡಿ ಬರುವ ಸಾಫ್ಟ್‌ವೇರ್ ಏಜೆನ್ಸಿ ಜೊತೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಸೂಚನೆ ನೀಡಿದರು.

ಸಹಕಾರ ಇಲಾಖೆಯಡಿ ಬರುವ ಎಲ್ಲ ಬ್ಯಾಂಕಿಂಗ್ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡಿ ಒಂದೇ ಸಾಫ್ಟ್‌ವೇರ್ ಅಡಿ ತರುವ ಸಲುವಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಸಭಾಂಗಣದಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸಾಧ್ಯಾಸಾಧ್ಯತೆ ಚರ್ಚಿಸಿ ತೀರ್ಮಾನಕ್ಕೆ ಬನ್ನಿ
ಶೀಘ್ರದಲ್ಲೇ ಡಿಸಿಸಿ ಹಾಗೂ ಅಪೆಕ್ಸ್ ಬ್ಯಾಂಕ್ ಮತ್ತು ವಿಎಸ್ಎಸ್ಎನ್ ಸಂಘಗಳು ಸರ್ಕಾರಿ ಸಾಫ್ಟ್‌ವೇರ್ ಏಜೆನ್ಸಿಯವರ ಜೊತೆ ಸಭೆ ಕರೆದು ಸಾಧ್ಯಾಸಾಧ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಈಗಿರುವ ಎಲ್ಲ ವ್ಯವಸ್ಥೆಯನ್ನು ಹೇಗೆ ಸಾಫ್ಟ್‌ವೇರ್ ಗೆ ಅಳವಡಿಸಬೇಕು. ಮುಂದಿನ ದಿನಗಳಲ್ಲಿ ಸಮಸ್ಯೆಗಳು ತಲೆದೋರದಂತೆ ಹೇಗೆ ನೋಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಕೂಡಲೇ ಸಭೆ ಸೇರಿ ಈ ಬ್ಯಾಂಕ್ ಗಳ ಅಧ್ಯಕ್ಷರು ಚರ್ಚಿಸಿ ಒಂದು ಸಹಮತಕ್ಕೆ ಬರಬೇಕು. ಇನ್ನು 15 ದಿನಗಳ ಬಳಿಕ ಮತ್ತೊಮ್ಮೆ ಸಭೆ ಸೇರೋಣ ಎಂದು ಸಹಕಾರ ಸಚಿವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಹಾಗೂ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅವರಿಗೆ ತಿಳಿಸಿದರು.

ಲಾಭದ ಬಗ್ಗೆ ಮೊದಲು ತಿಳಿದುಕೊಳ್ಳಿ
ಡಿಸಿಸಿ, ಅಪೆಕ್ಸ್ ಬ್ಯಾಂಕ್ ಹಾಗೂ 5 ಸಾವಿರ ಇರುವ ವಿಎಸ್ಎಸ್ಎನ್ ಬ್ಯಾಂಕ್ ಗಳನ್ನು ಒಂದೇ ಸಾಫ್ಟ್‌ವೇರ್ ಅಡಿ ತರಬೇಕೆಂದರೆ ಸಾಧ್ಯವೇ? ಹಾಗೂ ಉಪಯೋಗ ಏನು ಎಂಬುದು ನಿಮ್ಮೆಲ್ಲರಿಗೂ ತಿಳಿದಿರಬೇಕು ಎಂದು ಸಚಿವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಹೀಗೆ ಮಾಡಿರುವುದರಿಂದ ವಂಚನೆಗಳನ್ನು ತಪ್ಪಿಸಬಹುದಾಗಿದೆ. ಒಮ್ಮೆ ದಾಖಲೆಯನ್ನು ಅಪ್ಡೇಟ್ ಮಾಡುವುದರಿಂದ ಅದನ್ನು ಪುನಃ ತಿದ್ದುವ ಅವಕಾಶ ಇರುವುದಿಲ್ಲ. ಜೊತೆಗೆ ಯಾರು ಯಾವ ಬ್ಯಾಂಕ್ ನಲ್ಲಿ ಎಷ್ಟು ಸಾಲ ಪಡೆದಿದ್ದಾರೆಂಬ ಮಾಹಿತಿಯೂ ದೊರೆಯುತ್ತದೆ ಎಂದು ತಿಳಿಸಿದರು.

ಒಂದೇ ಸಾಫ್ಟ್‌ವೇರ್ ಬೇಕು
ಸಾಲಮನ್ನಾ ಸಂದರ್ಭದಲ್ಲಿ ಕಂಪ್ಯೂಟರೀಕರಣ ಮಾಡಲು ತುಂಬಾ ಕಷ್ಟವಾಗಿತ್ತು. ಪುನಃ ಡಾಟಾವನ್ನು ರೀ ಎಂಟ್ರಿ ಮಾಡುವುದಕ್ಕೆ ತುಂಬಾ ಸಮಯ ಹಾಗೂ ಸಿಬ್ಬಂದಿಯ ಕೆಲಸ ವ್ಯರ್ಥವಾಗಿದೆ. ಈ ಹಿನ್ನೆಲೆಯಲ್ಲಿ ಒಂದೇ ಸಾಫ್ಟ್‌ವೇರ್ ಅವಶ್ಯಕತೆ ಇದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಅಪೆಕ್ಸ್ ಬ್ಯಾಂಕ್ ಇಲ್ಲವೇ ಡಿಸಿಸಿ ಬ್ಯಾಂಕ್ ಗಳು ಒಮ್ಮತದ ತೀರ್ಮಾನಕ್ಕೆ ಬರಬೇಕಿದ್ದು, ಸಾಫ್ಟ್‌ವೇರ್ ಅನ್ನು ಅವರೇ ಕೊಡುವುದಾದರೆ ನಾವು ಅದನ್ನೇ ಎಲ್ಲ ಬ್ಯಾಂಕ್ ಗಳಲ್ಲೂ ಅಳವಡಿಸಿಕೊಳ್ಳುತ್ತೇವೆ. ಸಹಕಾರ ಇಲಾಖೆಯಿಂದಲೇ ಒಂದೇ ಸಾಫ್ಟ್‌ವೇರ್ ಕೊಡಬೇಕೆಂದಿದ್ದರೆ ಅದನ್ನೂ ಇಲಾಖೆಯಿಂದ ಭರಿಸಲಾಗುವುದು ಎಂಬ ಸೂಚನೆಯನ್ನು ನೀಡಲಾಯಿತು.

ಕಡಿಮೆ ಖರ್ಚಿನಲ್ಲಿ ಹಾಗೂ ನಮ್ಮ ಅಗತ್ಯಕ್ಕೆ ತಕ್ಕಂತೆ ಇರುವ ಸಾಫ್ಟ್‌ವೇರ್ ಇದ್ದರೆ ಸಾಕು. ಈ ನಿಟ್ಟಿನಲ್ಲಿ ಖರೀದಿ ಮಾಡುವ ಚಿಂತನೆಯಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಏಜೆನ್ಸಿಗಳೇ ಏಕೆ?
ಖಾಸಗೀ ಏಜೆನ್ಸಿಗಳಿಗೆ ಸಾಫ್ಟ್‌ವೇರ್ ಅಭಿವೃದ್ಧಿಪಡಿಸುವ ಜವಾಬ್ದಾರಿ ಕೊಡುವ ಬದಲು ಸರ್ಕಾರಿ ಏಜೆನ್ಸಿಗಳಿಗೆ ಕೊಡಬೇಕು. ಒಂದು ವೇಳೆ ಆ ಖಾಸಗಿ ಏಜೆನ್ಸಿ ಜೊತೆ ಒಪ್ಪಂದ ರದ್ದು ಮಾಡಿಕೊಂಡರೆ ಡೇಟಾವನ್ನು ಅವರಿಂದ ಪಡೆಯಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಏಜೆನ್ಸಿಯ ಬಳಿ ಸಾಫ್ಟ್‌ವೇರ್ ಸಿದ್ಧಪಡಿಸಿದರೆ ಡಾಟಾ ನಾಶವಾಗುವ ಇಲ್ಲವೇ ಸರ್ಕಾರೇತರ ವ್ಯಕ್ತಿಗಳಿಗೆ ಇಲ್ಲವೇ ಸಂಸ್ಥೆಗಳಿಗೆ ಸಿಗುವ ಸಾಧ್ಯತೆ ಇರುವುದಿಲ್ಲ. ಜೊತೆಗೆ ಸಾಫ್ಟ್‌ವೇರ್ ಅಭಿವೃದ್ಧಿಗೆ ತಗುಲುವು ದುಡ್ಡು ಸರ್ಕಾರದ ಖಾತೆಗೇ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಏಜೆನ್ಸಿಯವರಿಂದಲೇ ಸಾಫ್ಟ್‌ವೇರ್ ಅಭಿವೃದ್ಧಿಪಡಿಸೋಣ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಆದರೆ, ಅನುಷ್ಠಾನದ ಬಗ್ಗೆ ಹಾಗೂ ಇರುವ ಸಮಸ್ಯೆಗಳ ಬಗ್ಗೆ ಈ ಬ್ಯಾಂಕ್ ಗಳು ಚರ್ಚಿಸಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಸರ್ಕಾರಿ ಏಜೆನ್ಸಿ ಬಳಕೆಗೆ ಸಲಹೆ
ಮುಖ್ಯಮಂತ್ರಿಗಳ ಇ  ಆಡಳಿತ ಸಲಹೆಗಾರರಾದ ಬೇಳೂರು ಸುದರ್ಶನ್ ಮಾತನಾಡಿ, ಸರ್ಕಾರದ ಸುಪರ್ದಿಯಲ್ಲಿ ಅನೇಕ ಸಾಫ್ಟ್‌ವೇರ್ ಗಳನ್ನು ಅಭಿವೃದ್ಧಿಪಡಿಸಲಾಗುದೆ. ಇದಕ್ಕಾಗಿ ಸರ್ಕಾರಿ ಅಧೀನದ ಸಾಫ್ಟ್‌ವೇರ್ ಏಜೆನ್ಸಿ ಇರುವುದರಿಂದ ಅದನ್ನೇ ಬಳಸಿಕೊಂಡರೆ ಹಣ ಸಂದಾಯ ಮಾಡುವ ಅವಶ್ಯಕತೆ ಇರುವುದಿಲ್ಲ. ಒಮ್ಮೆ ತಜ್ಞರ ಬಳಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಸಲಹೆ ನೀಡಿದರು.

ಅಪರ ಮುಖ್ಯ ಕಾರ್ಯದರ್ಶಿಗಳಾದ ನಾಗಲಾಂಬಿಕಾ ದೇವಿ, ಸಹಕಾರ ಸಂಘಗಳ ನಿಬಂಧಕರಾದ ಪ್ರಸನ್ನಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.