ಇಂದಿನಿಂದ ಕುಂದಾಪುರ, ಬೈಂದೂರಿಗೆ ಮರಳು : ಇ ಸ್ಯಾಂಡ್‌ ಆ್ಯಪ್‌ ಮೂಲಕ ವಿತರಣೆಗೆ ನಿರ್ಧಾರ


Team Udayavani, Mar 17, 2021, 5:20 AM IST

ಇಂದಿನಿಂದ ಕುಂದಾಪುರ, ಬೈಂದೂರಿಗೆ ಮರಳು : ಇ ಸ್ಯಾಂಡ್‌ ಆ್ಯಪ್‌ ಮೂಲಕ ವಿತರಣೆಗೆ ನಿರ್ಧಾರ

ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಜನತೆಗೆ ಮಾ. 17ರಿಂದ ಮರಳು ದೊರೆಯಲಿದೆ. ಈ ಕುರಿತು ಗಣಿ ಇಲಾಖೆ ಅಧಿಕೃತ ಪ್ರಕಟನೆ ಹೊರಡಿಸಿದೆ. ಇದರ ಬೆನ್ನಿಗೇ ಮಂಗಳವಾರ ಅಪರಾಹ್ನದಿಂದಲೇ ಮರಳು ಬುಕ್ಕಿಂಗ್‌ ಆರಂಭವಾಗಿದೆ.

ವಿತರಣೆಗೆ ಅನುಮತಿ
ಒಂದೆಡೆ ಆಕ್ರಮ ಮರಳು ಸಾಗಾಟ ನಡೆದು ನದಿಗಳೆಲ್ಲ ಖಾಲಿಯಾಗುತ್ತಿದ್ದರೆ ಇನ್ನೊಂದೆಡೆ ಗಣಿಗಾರಿಕೆಗೆ ಅನುಮತಿ ಪಡೆದವರು ವಿತರಣೆಗೆ ಅನುಮತಿಯಿಲ್ಲದೇ ಸಾವಿರಗಟ್ಟಲೆ ಲೋಡು ಮರಳು ಸಂಗ್ರಹ ಮಾಡಿಟ್ಟಿದ್ದು ಬಾಕಿ ಯಾಗಿತ್ತು. ಇದೀಗ ಅನುಮತಿ ದೊರೆತ ಕಾರಣ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕುಂದಾಪುರ ತಾ|ನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸರ್ವೇ ನಂ 180, 157, 189ರಲ್ಲಿನ 11.90 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್‌ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸರ್ವೆ ನಂ. 174, 56 ರಲ್ಲಿನ 5.70 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್‌ ಸಂಖ್ಯೆ 6ರಲ್ಲಿ ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಆ್ಯಪ್‌ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಈ ಮೊದಲು ನೇರ ಖರೀದಿ ಇತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಈ ವರ್ಷದಿಂದ ಆ್ಯಪ್‌ ಮೂಲಕ ನೀಡಲು ಈ ಮೂಲಕ ಪಾರದರ್ಶಕತೆ ಕಾಪಾಡಿಕೊಳ್ಳಲು ತೀರ್ಮಾನಿಸಲಾಗಿದೆ.

ಸಂಪರ್ಕ
ಮರಳನ್ನು ಉಡುಪಿ ಇ ಸ್ಯಾಂಡ್‌ ಆ್ಯಪ್‌ ಮುಖಾಂತರ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ, ಹಿರಿಯ ಭೂವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಎ ಬ್ಲಾಕ್‌, ಮೊದಲನೇ ಮಹಡಿ, ಮಣಿಪಾಲ, ಉಡುಪಿ ಜಿಲ್ಲೆ, ಉಡುಪಿ, ದೂರವಾಣಿ ಸಂಖ್ಯೆ: 0820-2572333, ಉಡುಪಿ ಇ ಸ್ಯಾಂಡ್‌ ಆ್ಯಪ್‌ ದೂರವಾಣಿ ಸಂಖ್ಯೆ 6366248666, 6366743888, 6366871888 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ಸುದಿನ ವರದಿ
ಮರಳು ಕೊರತೆ, ಸಂಗ್ರಹ ಇದ್ದರೂ ಮರಳು ನೀಡಲಾಗದ ಅಸಹಾಯಕತೆ, ಉಡುಪಿ ಬ್ರಹ್ಮಾವರ ದಿಂದ ಮರಳು ತರಿಸುವಾಗ ಆಗುವ ದುಬಾರಿ ದರ, ಬೈಂದೂರು ಹಾಗೂ ಕುಂದಾಪುರ ಜನ ಮರಳಿಗಾಗಿ ಪಡುತ್ತಿರುವ ಸಂಕಷ್ಟದ ಕುರಿತು “ಉದಯವಾಣಿ’ “ಸುದಿನ’ ವರದಿ ಮಾಡಿತ್ತು. ಶೀಘ್ರದಲ್ಲಿಯೇ ಮರಳು ದೊರೆಯಲಿದೆ ಎಂದು ಗಣಿ ಇಲಾಖೆ ಹೇಳಿಕೆ ಆಧರಿಸಿ ಪ್ರಕಟಿಸಲಾಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.