ಸ್ವಯಂ ಬಳಕೆ ಮರಳು ಸಾಗಣೆಗಿಲ್ಲ ನಿರ್ಬಂಧ : ಕರಾವಳಿಗೆ ಪ್ರತ್ಯೇಕ ಮರಳು ನೀತಿ


Team Udayavani, Feb 11, 2021, 6:50 AM IST

ಸ್ವಯಂ ಬಳಕೆ ಮರಳು ಸಾಗಣೆಗಿಲ್ಲ ನಿರ್ಬಂಧ : ಕರಾವಳಿಗೆ ಪ್ರತ್ಯೇಕ ಮರಳು ನೀತಿ

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ಹೊಸ ಗಣಿ ನೀತಿ -2021 ರೂಪಿಸಲಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಸ್ವಯಂ ಬಳಕೆಗೆ ದ್ವಿಚಕ್ರ, ತ್ರಿಚಕ್ರ, ಎತ್ತಿನಗಾಡಿ, ಟಂ ಟಂಗಳಲ್ಲಿ ಉಚಿತವಾಗಿ ಮರಳು ಸಾಗಣೆಗೆ ಯಾವುದೇ ನಿರ್ಬಂಧ ಇಲ್ಲದೆ ಅವಕಾಶ ಕೊಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮರಳು, ಕಲ್ಲು, ಜಲ್ಲಿ ಕ್ರಷರ್‌ ವಿಚಾರದಲ್ಲಿ ಸ್ಪಷ್ಟ ನೀತಿಯ ಅಗತ್ಯವಿದೆ. ಈ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆ ದಿದ್ದು ಶೀಘ್ರ ರೂಪು-ರೇಷೆ ಪ್ರಕಟಿಸಲಾಗುವುದು. ಕರಾವಳಿ ಭಾಗದ ಮರಳು ಸಮಸ್ಯೆ ಬೇರೆಯದೇ ಇರುವುದರಿಂದ ಅಲ್ಲಿಗೆ ಪ್ರತ್ಯೇಕ ನೀತಿ ರೂಪಿಸಲಾಗುವುದು ಅದಕ್ಕೂ ಮುನ್ನ ಅಲ್ಲಿನ ಜನಪ್ರತಿನಿಧಿಗಳ ಜತೆಯೂ ಚರ್ಚಿಸಲಾಗುವುದು ಎಂದರು.

ನಿರ್ಬಂಧ ತೆರವು
ಗ್ರಾಮೀಣ ಭಾಗದಲ್ಲಿ ಸ್ವಯಂ ಬಳಕೆಗೆ ಮರಳು ತೆಗೆದರೂ ಕೇಸು ದಾಖಲಿಸಲಾಗುತ್ತಿದೆ. ಇದರಿಂದ ಜನರು ಕಷ್ಟಪಡುತ್ತಿದ್ದಾರೆ. ಹೀಗಾಗಿ ರೈತರಿಗೆ ರಾಜಧನ ಹಾಗೂ ಪರವಾನಿಗೆ ಅನ್ವಯವಾಗದಂತೆ ನೋಡಿಕೊಳ್ಳಲಾಗುವುದು. ಹಳ್ಳ, ತೊರೆ ಸೇರಿ ತೆಗೆಯುವ ಮರಳು ಪ್ರಮಾಣ ಆಧರಿಸಿ 100 ರೂ. ವರೆಗೆ ಪಂಚಾಯತ್‌ ಮಟ್ಟದಲ್ಲೇ ರಾಜಧನ ನಿಗದಿಪಡಿಸಿ ಸ್ವಯಂ ಬಳಕೆಗೆ ಮರಳು ಸಾಗಣೆಗೆ ಅವಕಾಶ ನೀಡಲಾಗುವುದು. ಅದು ಜಿಲ್ಲೆಯ ಗಡಿ ದಾಟುವಂತಿಲ್ಲ, ಟ್ರ್ಯಾಕ್ಟರ್‌ ಅಥವಾ ಲಾರಿಗೆ ತುಂಬುವಂತಿಲ್ಲ, ಮಾರಾಟ ಮಾಡುವಂತಿಲ್ಲ, ಸರಕಾರ ಹರಾಜು ಹಾಕಿದ ಬ್ಲಾಕ್‌ಗಳಲ್ಲಿ ಮರಳು ತೆಗೆಯುವಂತಿಲ್ಲ ಎಂಬ ಷರತ್ತು ವಿಧಿಸಲಾಗುವುದು ಎಂದು ತಿಳಿಸಿದರು.

ರಾಜ್ಯಾದ್ಯಂತ ಒಟ್ಟು 183 ಬ್ಲಾಕ್‌ಗಳಲ್ಲಿ ಮರಳು ತೆಗೆಯಲು ಅವಕಾಶ ಇದ್ದು ಪ್ರತಿ ಟನ್‌ಗೆ 300 ರೂ. ವರೆಗೆ ರಾಜಧನ ನಿಗದಿ ಮಾಡಲಾಗುವುದು ಎಂದರು.

ಅಕ್ರಮವಾಗಿರುವ ಜಲ್ಲಿ ಕ್ರಷರ್‌ಗಳನ್ನು ಐದು ಪಟ್ಟು ದಂಡ ವಿಧಿಸಿ ಕಾನೂನು ಬದ್ಧವಾಗಿದ್ದರೆ ಸಕ್ರಮ ಮಾಡಲಾಗುವುದು. ರಾಜ್ಯದ ನಿರ್ಮಾಣ ಕಾಮಗಾರಿಗಳಿಗೆ ಮರಳು, ಜಲ್ಲಿ ಅಗತ್ಯವಾಗಿದೆ. ಇದು ಸಿಗದಿದ್ದರೆ ಎಲ್ಲರೂ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.