ಮದ್ಯ ಸಿಗುತ್ತಿಲ್ಲವೆಂದು ಸ್ಯಾನಿಟೈಸರ್ ಗೆ ನೀರು ಬೆರೆಸಿ ಕುಡಿದ ಹತ್ತು ಮಂದಿ ಸಾವು


Team Udayavani, Jul 31, 2020, 8:02 PM IST

ಆಲ್ಕೋಹಾಲ್ ಸಿಗುತ್ತಿಲ್ಲವೆಂದು ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್‌ ಕುಡಿದ ಹತ್ತು ಮಂದಿ ಸಾವು

ಆಂಧ್ರಪ್ರದೇಶ: ಹ್ಯಾಂಡ್‌ ಸ್ಯಾನಿಟೈಸರ್‌ನಲ್ಲಿ ಆಲ್ಕೋಹಾಲ್‌ ಅಂಶವಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಆಲ್ಕೋಹಾಲ್‌ ಬದಲಿಗೆ ಸ್ಯಾನಿಟೈಸರನ್ನೇ ಸೇವಿಸಿದರೆ ಏನಾಗಬೇಡ. ಆಂಧ್ರದ ಪ್ರಕಾಶಂ ಜಿಲ್ಲೆಯ ಕುರಿಚೇಡು ಗ್ರಾಮದಲ್ಲಾದದ್ದೂ ಅದೇ. ದಿನಾ ಮದ್ಯ ಸೇವಿಸಿ ನಶೆ ಏರಿಸುತ್ತಿದ್ದವರಿಗೆ ಕೆಲವು ದಿನಗಳಿಂದ ಲಾಕ್‌ಡೌನ್‌ ಇದ್ದ ಕಾರಣ ಆಲ್ಕೋಹಾಲ್‌ ಸಿಗಲಿಲ್ಲ. ಹೇಗೋ ಸ್ಯಾನಿಟೈಸರ್‌ನಲ್ಲೂ ಆಲ್ಕೋಹಾಲ್‌ ಅಂಶ ಇದೆಯಲ್ಲ ಎಂದು ಅದನ್ನೇ ಸೇವಿಸಿದ್ದಾರೆ. ಆದರೆ ಕುಡಿದದ್ದು ಅಮಲೇರದೆ ಹತ್ತು ಮಂದಿಯ ಪ್ರಾಣವನ್ನೇ ಕಸಿದುಕೊಂಡಿದೆ.

ಕೋವಿಡ್‌ ಸೋಂಕಿತರ ಪ್ರಮಾಣ ಹೆಚ್ಚಳದಿಂದಾಗಿ ಕೆಲವು ದಿನಗಳಿಂದ ಕುರಿಚೇಡು ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಗಿತ್ತು ಮತ್ತು ಮದ್ಯ ಮಾರಾಟವನ್ನು ನಿರ್ಬಂಧಿಸಲಾಗಿತ್ತು. ಮದ್ಯವೇ ಸಿಗದೆ ನಶೆ ಏರಿಸಲು ಏನನ್ನು ಬಳಸುವುದೆಂದಾಗ ಅವರಿಗೆ ಸಿಕ್ಕಿದ್ದು ಸ್ಯಾನಿಟೈಸರ್‌. ಅದರ ಮಾರಾಟಕ್ಕೆ ಯಾವುದೇ ನಿರ್ಬಂಧವಿರದೆ ಸುಲಭವಾಗಿ ಲಭ್ಯವಾಗುತ್ತಿತ್ತು.

ಸಾವನ್ನಪ್ಪಿದವರು ಕಳೆದ 8-10 ದಿನಗಳಿಂದ ನೀರು ಅಥವಾ ತಂಪು ಪಾನೀಯಗಳೊಂದಿಗೆ ಸ್ಯಾನಿಟೈಸರ್‌ ಬೆರೆಸಿ ಸೇವಿಸುತ್ತಿದ್ದರು. ಅದಕ್ಕಾಗಿ ಪ್ರಕಾಶಂ ಜಿಲ್ಲೆಯ ಕುರಿಚೇಡು ಗ್ರಾಮದಲ್ಲಿರುವ ದೇವಾಲಯದ ಹಿಂದೆ ಜಮಾಯಿಸುತ್ತಿದ್ದರು. ಸ್ಯಾನಿಟೈಸರ್‌ ಸೇವನೆ ಬಳಿಕ ಹೊಟ್ಟೆ ನೋವು, ವಾಂತಿಯಾಗಿ ಅವರನ್ನು ದರ್ಸಿಯಲ್ಲಿರುವ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ 7 ಮಂದಿ ಶುಕ್ರವಾರ ಮೃತಪಟ್ಟರೆ, ಉಳಿದವರು ಎರಡು ದಿನ ಹಿಂದೆಯೇ ಮೃತ ಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶಕ್ಕೆ ಭೇಟಿ ನೀಡಿದ ಪೊಲೀಸರು, ಕನಿಷ್ಠ 20 ಮನೆಗಳಲ್ಲಿ ಸ್ಯಾನಿಟೈಸರ್‌ಗಳನ್ನು ಪತ್ತೆ ಮಾಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಮೃತರ ಮನೆಗಳಲ್ಲಿ ಖಾಲಿ ಮತ್ತು ತೆರೆಯದ ಸ್ಯಾನಿಟೈಸರ್‌ ಬಾಟಲಿಗಳನ್ನು ಕಂಡುಬಂದಿದ್ದು, ಸಂತ್ರಸ್ತರು ಇದನ್ನು ಮದ್ಯದ ಬದಲಿಗೆ ಸೇವಿಸುತ್ತಿದ್ದರು ಎಂದು ಕುಟುಂಬ ಸದಸ್ಯರು ಖಚಿತಪಡಿಸಿದ್ದಾರೆ.

ಮೃತಪಟ್ಟವರಲ್ಲಿ ಹೆಚ್ಚಿನವರು ದೈನಂದಿನ ಕೂಲಿ ಕಾರ್ಮಿಕರು ಮತ್ತು ಭಿಕ್ಷುಕರು. ನಾವು ಕೆಲವು ಅಂಗಡಿಗಳಿಂದ ಸ್ಯಾನಿಟೈಸರ್‌ಗಳ ಸ್ಟಾಕ್‌ ಅನ್ನು ವಶಪಡಿಸಿಕೊಂಡಿದ್ದೇವೆ ಮತ್ತು ಅದಕ್ಕೆ ಬಳಸಿದ ರಾಸಾಯನಿಕಗಳನ್ನು ಪರೀಕ್ಷೆಗೊಳಪಡಿಸಲಾಗುವುದು. ಮರಣೋತ್ತರ ವರದಿಯ ಹೊರತಾಗಿ, ನಿಖರವಾಗಿ ಏನಾಯಿತು ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಟಾಕ್ಸಿಕಾಲಜಿ ವರದಿಯನ್ನು ಕೋರಿದ್ದೇವೆ ಎಂದು ಪ್ರಕಾಶಂ ಜಿಲ್ಲಾ ಎಸ್ಪಿ ಸಿದ್ಧಾರ್ಥ್ ಕೌಶಲ್‌ ತಿಳಿಸಿದ್ದಾರೆ.

ಉಪ ಪೊಲೀಸರು ಎಸ್ಪಿ ಪ್ರಕಾಶ್‌ ರಾವ್‌ ಮಾತನಾಡಿ, ಅವರು ಅಕ್ರಮವಾಗಿ ಮದ್ಯ ಸೇವಿಸಿದ್ದಾರೆ ಎಂದು ಭಾವಿಸಲಾಗಿತ್ತು. ಪ್ರಸ್ತುತ ಕುರಿಚೇಡು ಗ್ರಾಮ ಕೋವಿಡ್‌ ಸಂಕಷ್ಟದಿಂದ ಸೀಲ್‌ಡೌನ್‌ನಲ್ಲಿದೆ ಮತ್ತು ಕಳೆದ ಕೆಲವು ದಿನಗಳಿಂದ ಮದ್ಯದ ಮಾರಾಟವನ್ನೂ ಮುಚ್ಚಲಾಗಿದೆ. ಆದಾಗ್ಯೂ ನಿತ್ಯ ಕುಡಿಯುವ ಅಭ್ಯಾಸ ಉಳ್ಳವರು ಅಕ್ರಮವಾಗಿ ಬಟ್ಟಿ ಇಳಿಸಿದ ಅರಾಕ್‌ ಅನ್ನು ಹೊರತುಪಡಿಸಿ ಆಲ್ಕೋಹಾಲ್‌ ಅಂಶ ಹೊಂದಿರುವ ಸ್ಯಾನಿಟೈಸರನ್ನು° ಸೇವಿಸುತ್ತಿದ್ದಾರೆಂದು ಹೇಳಿದ್ದಾರೆ.

ದರ್ಸಿ ಶಾಸಕ ಎಂ. ವೇಣುಗೋಪಾಲ್‌ ಮಾತನಾಡಿ, ಸ್ಯಾನಿಟೈಸರ್‌ ಸೇವಿಸಿ ಕೆಲವರು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟರೆ, ಕೆಲವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಕೆಲವು ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿದ್ದು, ಅವರಲ್ಲಿ ಪುನರ್ವಸತಿ ಕೇಂದ್ರಗಳಿಗೆ ಸೇರಲು ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ಎಸ್ಪಿ ಮತ್ತು ಜಿಲ್ಲಾಧಿಕಾರಿಗಳಿಂದ ಪ್ರಕರಣದ ಕುರಿತು ವರದಿ ಕೋರಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.