ತೈಲ ಡಿಪೋ ಮೇಲೆ ಹೌತಿಗಳ ದಾಳಿ : ಭಾರಿ ವಾಯು ದಾಳಿ ನಡೆಸಿದ ಸೌದಿ ಒಕ್ಕೂಟ

ಪ್ರಾದೇಶಿಕ ಯುದ್ಧವಾಗಿ ಮಾರ್ಪಟ್ಟ ಸಂಘರ್ಷ

Team Udayavani, Mar 26, 2022, 6:31 PM IST

1-sadsad

ಸನಾ: ಇರಾನ್ ಬೆಂಬಲಿತ ಹೌತಿ ಬಂಡುಕೋರರ ವಿರುದ್ಧ ಹೋರಾಡುತ್ತಿರುವ ಸೌದಿ ಅರೇಬಿಯಾ ನೇತೃತ್ವದ ಒಕ್ಕೂಟವು ಯೆಮೆನ್‌ನ ರಾಜಧಾನಿ ಮತ್ತು ಆಯಕಟ್ಟಿನ ನಗರದ ಮೇಲೆ ಭಾರಿ ವಾಯುದಾಳಿ ಗೈದಿದ್ದು,ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಹೌತಿ ಬಂಡುಕೋರರು ಸೌದಿ ನಗರದ ಜೆಡ್ಡಾದಲ್ಲಿನ ತೈಲ ಡಿಪೋ ಮೇಲೆ ದಾಳಿ ಮಾಡಿದ ಒಂದು ದಿನದ ನಂತರ ಸನಾ ಮತ್ತು ಹೊಡೆಯ್ಡಾ ಮೇಲೆ ರಾತ್ರಿ ವೈಮಾನಿಕ ದಾಳಿಗಳನ್ನು ನಡೆಸಲಾಗಿದೆ.

ಶನಿವಾರ ಸ್ಫೋಟಕಗಳನ್ನು ತುಂಬಿದ ಎರಡು ಡ್ರೋನ್‌ಗಳನ್ನು ಒಕ್ಕೂಟದ ಸೇನಾಪಡೆಗಳು ತಡೆಹಿಡಿದು ನಾಶಪಡಿಸಿತು ಎಂದು ಸೌದಿ ನೇತೃತ್ವದ ಬ್ರಿಗೇಡ್ ವಕ್ತಾರ ಜನರಲ್ ತುರ್ಕಿ ಅಲ್-ಮಲ್ಕಿ, ಹೇಳಿದ್ದಾರೆ. ಹೊಡೆಯ್ಡಾದಲ್ಲಿ ಹೌತಿ ಹಿಡಿತದಲ್ಲಿರುವ ನಾಗರಿಕ ತೈಲ ಘಟಕಗಳಿಂದ ಡ್ರೋನ್‌ಗಳನ್ನು ಹಾರಿಸಲಾಗಿದ್ದು, ನಗರದಲ್ಲಿನ ತೈಲ ಘಟಕಗಳಿಂದ ನಾಗರಿಕರು ದೂರವಿರಲು ಒತ್ತಾಯಿಸಿದ್ದಾರೆ.

ಭಾನುವಾರದಂದು ನಡೆಯುವ ಫಾರ್ಮುಲಾ ಒನ್ ರೇಸ್‌ಗಿಂತ ಮುಂಚಿತವಾಗಿ ಹೌತಿಗಳು ಶುಕ್ರವಾರ ದಾಳಿ ನಡೆಸಿದ್ದು,ಇರಾನ್ ಬೆಂಬಲಿತ ಬಂಡುಕೋರರ ವಿರುದ್ಧ ಸೌದಿ ಅರೇಬಿಯಾದ ಸಾಮರ್ಥ್ಯ ತೋರಿದ್ದು, ಪ್ರತಿ ದಾಳಿ ನಡೆಸಿ ಫಾರ್ಮುಲಾ ಒನ್ ರೇಸ್‌ ನಿಗದಿಯಂತೆ ನಡೆಯಲಿದೆ ಎಂದು ಹೇಳಿದೆ.

ತೈಲ ದೈತ್ಯ ಸೌದಿಯ ಜೆಡ್ಡಾದಲ್ಲಿರುವ ಅರಾಮ್ಕೊದ ಪೆಟ್ರೋಲಿಯಂ ಉತ್ಪನ್ನಗಳ ವಿತರಣಾ ಕೇಂದ್ರಕ್ಕೆ ಹೌತಿಗಳು ದಾಳಿ ನಡೆಸಿದ ನಂತರ ಎರಡು ಶೇಖರಣಾ ಟ್ಯಾಂಕ್‌ಗಳಲ್ಲಿ ಭಾರಿ ಬೆಂಕಿ ಮತ್ತು ಕಪ್ಪು ಹೊಗೆ ಕಂಡು ಬಂದಿದೆ.

ಆನ್‌ಲೈನ್‌ನಲ್ಲಿ ಪ್ರಸಾರವಾದ ದೃಶ್ಯಾವಳಿಗಳಲ್ಲಿ ಸನಾ ಮತ್ತು ಹೊಡೆಡಾದಲ್ಲಿ ಭಾರಿ ಬೆಂಕಿ ಮತ್ತು ಹೊಗೆ ಕಂಡು ಬಂದಿದ್ದು, ಯೆಮೆನ್ ರಾಜಧಾನಿಯಲ್ಲಿ ಅಸೋಸಿಯೇಟೆಡ್ ಪ್ರೆಸ್ ಪತ್ರಕರ್ತರು ದೊಡ್ಡ ಸ್ಫೋಟಗಳನ್ನು ಕೇಳಿಸಿದ್ದು, ಅಲ್ಲಿನ ವಸತಿ ಕಟ್ಟಡಗಳು ಜರ್ಜರಿತಗೊಂಡಿವೆ ಎಂದು ವರದಿ ಮಾಡಿದ್ದಾರೆ.

ಒಕ್ಕೂಟದ ವೈಮಾನಿಕ ದಾಳಿಯು ವಿದ್ಯುತ್ ಸ್ಥಾವರ, ಇಂಧನ ಪೂರೈಕೆ ಕೇಂದ್ರ ಮತ್ತು ರಾಜಧಾನಿಯಲ್ಲಿನ ಸರ್ಕಾರಿ ಸಾಮಾಜಿಕ ವಿಮಾ ಕಚೇರಿಯನ್ನು ಹಾನಿ ಮಾಡಿದೆ. ಮಕ್ಕಳು ಮತ್ತು ಮಹಿಳೆಯರು ಸೇರಿ ಎಂಟು ಮಂದಿ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಹೌತಿಗಳು ಹೇಳಿದ್ದಾರೆ.

2014 ರಲ್ಲಿ ಹೌತಿಗಳು ಸನಾವನ್ನು ವಶಪಡಿಸಿಕೊಂಡ ನಂತರ ಯೆಮೆನ್‌ನಲ್ಲಿ ಯುದ್ಧವು ಸ್ಫೋಟಗೊಂಡಿತ್ತು. ತಿಂಗಳುಗಳ ನಂತರ, ಸೌದಿ ಅರೇಬಿಯಾ ಮತ್ತು ಅದರ ಮಿತ್ರರಾಷ್ಟ್ರಗಳು ಹೌತಿಗಳನ್ನು ಹೊರಹಾಕಲು ಮತ್ತು ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಸರ್ಕಾರವನ್ನು ಪುನಃಸ್ಥಾಪಿಸಲು ವಾಯು ದಾಳಿಯನ್ನು ಪ್ರಾರಂಭಿಸಿದ್ದವು. ಇತ್ತೀಚಿನ ವರ್ಷಗಳಲ್ಲಿ ಈ ಸಂಘರ್ಷವು ಪ್ರಾದೇಶಿಕ ಯುದ್ಧವಾಗಿ ಮಾರ್ಪಟ್ಟಿದೆ.

ವಿಶ್ವದ ಅತ್ಯಂತ ಕೆಟ್ಟ ಮಾನವೀಯ ಬಿಕ್ಕಟ್ಟುಗಳಲ್ಲಿ ಒಂದಾದ ಈ ಯುದ್ಧ 14,500 ನಾಗರಿಕರು ಸೇರಿ 150,000 ಕ್ಕಿಂತ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.