![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 8, 2023, 5:44 AM IST
ಮಂಗಳೂರು: ನಿವೃತ್ತಿಯಾಗುತ್ತಿರುವ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರು ಶಾಲಾ ಸಂಚಾಲಕಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಬಜ್ಪೆಯ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ ಬಳಿಕ, ಮುಖ್ಯ ಶಿಕ್ಷಕಿಯಾಗಿ 42 ವರ್ಷ ಸೇವೆ ಸಲ್ಲಿಸಿದ್ದ ಶೋಭಾರಾಣಿ ಅವರ ನಿವೃತ್ತಿ ಪಿಂಚಣಿ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಲು ಲಂಚಕ್ಕೆ ಸತಾಯಿಸಿದ್ದ ಜ್ಯೋತಿ ಪೂಜಾರಿ ಮೊದಲು 20 ಲಕ್ಷ ಬೇಡಿಕೆ ಇಟ್ಟಿದ್ದು, ಬಳಿಕ ಐದು ಲಕ್ಷ ನೀಡಲು ಹೇಳಿದ್ದಳು. ಶುಕ್ರವಾರ ಹಣ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಅಧಿಕಾರಿಗಳು ಜ್ಯೋತಿಯನ್ನು ಹಣ ಸಹಿತ ಬಂಧಿಸಿದ್ದಾರೆ.
ಲೋಕಾಯಯಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್ ಹಾಗೂ ಕಲಾವತಿ, ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು ಎಂದು ಲೋಕಾಯುಕ್ತ ಪ್ರಕಟನೆ ತಿಳಿಸಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.