![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 4, 2021, 8:22 PM IST
ಚಿಕ್ಕಮಗಳೂರು: ಜಿಲ್ಲೆಯ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಒರ್ವ ಶಿಕ್ಷಕನಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಶಾಲೆಯನ್ನು ಬಂದ್ ಮಾಡಲಾಗಿದೆ.
ಕಳಸ ಹೋಬಳಿ ಜೆಎಂಇ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಮೂಡಿಗೆರೆ ತಾಲ್ಲೂಕು ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
ಕಳಸ ಪಟ್ಟಣದ ಜೆಎಂಇ ಶಾಲೆಯಲ್ಲಿ 15 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ 13ಮಂದಿಗೆ ಕೊರೊನಾ ನೆಗೆಟಿವ್ ಬಂದಿದೆ.
ಮೂಡಿಗೆರೆ ತಾಲ್ಲೂಕು ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು ಓರ್ವ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶಿಕ್ಷಕರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎರಡು ಶಾಲೆಗಳನ್ನು 7 ದಿನಗಳ ಅವಧಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ತಿರುಪತಿ : ತನ್ನ ಮಗಳಿಗೆ ಹೆಮ್ಮೆಯಿಂದ ಸಲ್ಯೂಟ್ ಮಾಡಿದ ಸರ್ಕಲ್ ಇನ್ಸ್ಪೆಕ್ಟರ್
ಶಾಲೆ ಕಾಲೇಜು ಆರಂಭಕ್ಕೆ ಸರ್ಕಾರ ಜ.1ರಿಂದ ಆದೇಶ ನೀಡಿದ್ದು, ಶಾಲೆ ಆರಂಭವಾಗಿ ಎರಡು ದಿನ ಕಳೆಯುವಷ್ಟರಲ್ಲಿ ಜಿಲ್ಲೆಯ ಮೂರು ಮಂದಿ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳಸ ಜೆಎಂಇ ಶಾಲೆ ಶಿಕ್ಷಕರು ಕೊರೊನಾ ರಿಪೋರ್ಟ್ ಕೈ ಸೇರದಿದ್ದರು ಶಾಲೆಗೆ ಆಗಮಿಸಿದ್ದು ಎಂದು ಹೇಳಲಾಗುತ್ತಿದೆ.
“ಜಿಲ್ಲೆಯ ಕಳಸ ಪಟ್ಟಣದ ಜೆಎಂಇ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಮೂಡಿಗೆರೆ ತಾಲ್ಲೂಕು ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ಮುಂಜಾಗೃತಕ್ರಮವಾಗಿ ಎರಡು ಶಾಲೆಗಳಲ್ಲಿ 7ದಿನಗಳ ಮಟ್ಟಿಗೆ ರಜೆ ಘೋಷಣೆ ಮಾಡಲಾಗಿದೆ.”
-ಬಿ.ವಿ.ಮಲ್ಲೇಶಪ್ಪ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.