![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 12, 2022, 12:40 PM IST
ವಾರಾಣಸಿ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಇರುವ ಹಿಂದೂ ದೇವರ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಸ್ಥಳೀಯ ಜಿಲ್ಲಾ ನ್ಯಾಯಾಲಯ ಸೋಮವಾರ (ಸೆ.12) ಸಂಜೆ ತನ್ನ ತೀರ್ಪನ್ನು ಪ್ರಕಟಿಸಲಿದೆ.
ಇದನ್ನೂ ಓದಿ:ದೊಡ್ಡ ಮೊತ್ತಕ್ಕೆ ಮಾರಾಟವಾಯಿತು ʼಪೊನ್ನಿಯಿನ್ ಸೆಲ್ವನ್ʼ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕು
ಜ್ಞಾನವಾಸಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ಜಿಲ್ಲಾ ಕೋರ್ಟ್ ಆದೇಶ ನೀಡಲಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ವಾರಾಣಸಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಹಿಂದೂ ದೇವರ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಕೋರ್ಟ್ ಇಂದು ಆದೇಶ ನೀಡಲಿದೆ. 1991ರ ಪೂಜಾ ಕಾಯ್ದೆ ಪ್ರಕಾರ ನಮ್ಮ ಪರವಾಗಿ ಒಂದು ವೇಳೆ ತೀರ್ಪು ಬಂದರೆ ನಂತರ ನಾವು ಭಾರತೀಯ ಪುರಾತತ್ವ ಸರ್ವೇ ಮೊರೆ ಹೋಗುತ್ತೇವೆ ಎಂದು ವಕೀಲರಾದ ವಿಎಸ್ ಜೈನ್ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದನ್ವಯ ವಾರಾಣಸಿ ಜಿಲ್ಲಾ ಕೋರ್ಟ್ ಈ ಪ್ರಕರಣದ ವಾದ, ಪ್ರತಿವಾದವನ್ನು ಆಲಿಸಿದ ನಂತರ ಸೆಪ್ಟೆಂಬರ್ 12ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.