![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 12, 2022, 2:17 PM IST
ವಾರಾಣಸಿ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜಿಲ್ಲಾ ಕೋರ್ಟ್ ಸೋಮವಾರ (ಸೆಪ್ಟೆಂಬರ್ 12) ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.
ಇದನ್ನೂ ಓದಿ:ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ನಿಗೂಢ ನಾಪತ್ತೆ
ಅತ್ಯಂತ ಸೂಕ್ಷ್ಮವಾದ ಈ ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ಕೋರ್ಟ್ ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಕಳೆದ ತಿಂಗಳು ತೀರ್ಪನ್ನು ಸೆಪ್ಟೆಂಬರ್ 12ಕ್ಕೆ ಕಾಯ್ದಿರಿಸಿದ್ದರು.
ಜ್ಞಾನವಾಪಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ವಿಚಾರಣೆ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಾರಾಣಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಹಿಂದೂಗಳ ಪರ ಅರ್ಜಿದಾರರಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.
ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.
ತೀರ್ಪು ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಾರಾಣಸಿಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದರು.
ಹೈಲೈಟ್ಸ್:
*ಕೇಸ್ ನ ವಿಚಾರಣೆ ನಡೆಸಬೇಕೋ ಅಥವಾ ಬೇಡವೇ ಎಂಬ ಬಗ್ಗೆ ಆದೇಶ
*ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್
*ಹಿಂದೂ ಅರ್ಜಿದಾರರಿಗೆ ಮೊದಲ ಹಂತದ ಗೆಲುವು
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.