Karnataka: ಇಂದಿನಿಂದ ಅಧಿವೇಶನ- ಕದನ “ಗ್ಯಾರಂಟಿ”

ಏಳು ಮಸೂದೆಗಳ ಮಂಡನೆ, ಜು. 14ರ ವರೆಗೆ ಕಲಾಪ

Team Udayavani, Jul 3, 2023, 7:49 AM IST

vidhana soudha

ಬೆಂಗಳೂರು: ಸರಕಾರದ ಗ್ಯಾರಂಟಿಗಳ ವಿಚಾರದಲ್ಲಿ ಆಡಳಿತಾರೂಢ ಮತ್ತು ವಿಪಕ್ಷಗಳ ನಡುವೆ ಸದನದ ಹೊರಗಡೆ ರಾಜಕೀಯ ಸಂಘರ್ಷ ಉತ್ತುಂಗದಲ್ಲಿರುವಂತೆಯೇ ಸೋಮವಾರ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈಗ ಸದನದ ಒಳಕ್ಕೂ ಈ ಸಂಘರ್ಷ ಪ್ರವೇಶ ಮಾಡಲಿದೆ. ಸದನದ ಕಲಾಪಗಳು ಗ್ಯಾರಂಟಿ ಜಗಳಕ್ಕೆ ವೇದಿಕೆಯಾಗುವುದು ಖಚಿತ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಗೊಂದಲವನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ರಣತಂತ್ರ ರೂಪಿಸಿಕೊಂಡಿದ್ದರೆ, ಹಿಂದಿನ ಸರಕಾರದ ಅವಧಿಯ ಹಗರಣಗಳನ್ನು ಗುರಾಣಿಯನ್ನಾಗಿ ಮಾಡಿಕೊಂಡು ಬಿಜೆಪಿಯನ್ನು ಕಟ್ಟಿಹಾಕಲು ಆಡಳಿತ ಪಕ್ಷ ಕಾಂಗ್ರೆಸ್‌ ಪ್ರತಿತಂತ್ರ ಹೆಣೆದಿದೆ. ಸರಕಾರದ ವಿರುದ್ಧ ವಿಷಯಾಧಾರಿತ ಹೋರಾಟ ಮಾಡಲು ಜೆಡಿಎಸ್‌ ನಿರ್ಧರಿಸಿದೆ. ಒಟ್ಟಿನಲ್ಲಿ ಸದನಲ್ಲಿ ಜಂಗಿ ಕುಸ್ತಿ ನಡೆಯುವುದಂತೂ ಗ್ಯಾರಂಟಿ.

ಇದೇ ವೇಳೆ ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆಯನ್ನು ನಿರಸನಗೊಳಿಸುವ ತಿದ್ದುಪಡಿ ಮಸೂದೆ ಈ ಅಧಿವೇಶನದಲ್ಲಿ ಮಂಡನೆಯಾಗಲಿದ್ದು. ಆಡಳಿತ ಮತ್ತು ವಿಪಕ್ಷಗಳ ನಡುವೆ ಇದು ಧರ್ಮ ಯುದ್ಧಕ್ಕೆ ಕಾರಣವಾಗಲಿದೆ. ಇದರ ಜತೆಗೆ ಕರ್ನಾಟಕ ಕರಾವಳಿ ಅಭಿವೃದ್ಧಿ ಮಂಡಳಿ ಮಸೂದೆ-2023 ಸೇರಿದಂತೆ 7 ಮಸೂದೆಗಳು ಸದನದ ಮುಂದೆ ಬರಲಿವೆ.

12 ಗಂಟೆಗೆ ರಾಜ್ಯಪಾಲರ ಭಾಷಣ
ಸಂಪ್ರದಾಯದಂತೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಬಳಿಕ ವಿಧಾನಪರಿಷತ್‌ ಕಲಾಪ ನಡೆಯಲಿದ್ದು, ಅಲ್ಲಿ ರಾಜ್ಯಪಾಲರ ಭಾಷಣದ ಪ್ರತಿ ಸದನದಲ್ಲಿ ಮಂಡನೆಯಾಗಲಿದೆ. ಅನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ. ಜು. 3ರಿಂದ 14ರ ವರೆಗೆ ಅಧಿವೇಶನ ಇರಲಿದ್ದು, ಜು. 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ ಮಂಡಿಸಲಿದ್ದಾರೆ. ಮೇ 24ರಂದು ಕೊನೆಗೊಂಡಿದ್ದ ಅಧಿವೇಶನ ನೂತನ ಶಾಸಕರ ಪ್ರಮಾಣವಚನ ಹಾಗೂ ಸ್ಪೀಕರ್‌ ಆಯ್ಕೆಗೆ ಸೀಮಿತವಾಗಿತ್ತು. ಹಾಗಾಗಿ 16ನೇ ವಿಧಾನಸಭೆಗೆ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ 70 ಮಂದಿಗೆ ಇದು ಮೊದಲ ಅಧಿವೇಶನ ಮತ್ತು ಹೊಸ ಅನುಭವ ಆಗಲಿದೆ.

ಏಳು ಮಸೂದೆ
ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷದ ಮತಾಂತರ ನಿಷೇಧಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ 2022ರಲ್ಲಿ ಜಾರಿಗೆ ತಂದಿದ್ದ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣ ಕಾಯ್ದೆಯನ್ನು ರದ್ದುಗೊಳಿಸಲಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣ ಮಸೂದೆ-2023 ಸದನದಲ್ಲಿ ಮಂಡನೆಯಾಗಲಿದೆ. ಇದಲ್ಲದೆ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯೂ ಸದನದ ಮುಂದೆ ಬರಲಿದೆ. ಜತೆಗೆ ಬಹುದಿನದ ಬೇಡಿಕೆಯಾಗಿದ್ದ ಕರಾವಳಿ ಅಭಿವೃದ್ದಿ ಮಂಡಳಿ ಮಸೂದೆಯನ್ನು ಹೊಸದಾಗಿ ತರಲಾಗುತ್ತಿದೆ. ಅಧಿವೇಶನ ಮುಗಿಯುವುದರೊಳಗೆ ಈ ಪಟ್ಟಿಯಲ್ಲಿ ಕೆಲವು ಸೇರ್ಪಡೆಗಳಾದರೂ ಆಗಬಹುದು.

ಅಧಿವೇಶನದಲ್ಲಿ ಮಂಡನೆಯಾಗುವ ಮಸೂದೆಗಳು
– ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣ (ನಿರಸನ) ಮಸೂದೆ-2023
– ಕರ್ನಾಟಕ ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಣ (ತಿದ್ದುಪಡಿ) ಮಸೂದೆ-2023
– ಕರಾವಳಿ ಅಭಿವೃದ್ಧಿ ಮಂಡಳಿ ಮಸೂದೆ-2023
– ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ಮಸೂದೆ-2023
– ಬಯಲುಸೀಮೆ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ಮಸೂದೆ-2023
– ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಮಸೂದೆ-2023
– ವೈದ್ಯಕೀಯ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವೆ (ತಿದ್ದುಪಡಿ) ಮಸೂದೆ-2023
– ಶಾಸಕರ (ಅನರ್ಹತೆ ತಡೆ) ತಿದ್ದುಪಡಿ ಮಸೂದೆ-2023
—————-
ಬೆಳಿಗ್ಗೆ 11.55-ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ
ಮಧ್ಯಾಹ್ನ 12: ರಾಜ್ಯಪಾಲರ ಭಾಷಣ

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.