ಉಪಚುನಾವಣೆ: ಬಿಜೆಪಿಗೆ ಸೆಡ್ಡು ಹೊಡೆದ ಶತ್ರುಘ್ನ ಸಿನ್ಹಾ,ಬಾಬುಲ್ ಗೆ ಟಿಎಂಸಿ ಟಿಕೆಟ್‌

ಇನ್ನೊಂದು ಜಿದ್ದಾ ಜಿದ್ದಿನ ಕದನಕ್ಕೆ ಸಾಕ್ಷಿಯಾಗಲಿದೆ ಬಂಗಾಳ

Team Udayavani, Mar 13, 2022, 12:56 PM IST

1-dfd

ಕೋಲ್ಕತಾ : ಮಾಜಿ ಕೇಂದ್ರ ಸಚಿವರಾದ ಶತ್ರುಘ್ನ ಸಿನ್ಹಾ ಮತ್ತು ಬಾಬುಲ್ ಸುಪ್ರಿಯೊ ಅವರು ಅನುಕ್ರಮವಾಗಿ ಅಸನ್ಸೋಲ್‌ನಿಂದ ಲೋಕಸಭೆಯ ಉಪಚುನಾವಣೆಗೆ ಮತ್ತು ಬ್ಯಾಲಿಗುಂಗೆಯಿಂದ ವಿಧಾನಸಭಾ ಉಪಚುನಾವಣೆಗೆ ಟಿಎಂಸಿ ಅಭ್ಯರ್ಥಿಗಳನ್ನಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ್ದಾರೆ.

ಅಸನ್ಸೋಲ್ ಲೋಕಸಭಾ ಉಪಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ನಟ, ಶತ್ರುಘ್ನ ಸಿನ್ಹಾ ಅವರು ನಮ್ಮ ಅಭ್ಯರ್ಥಿ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪರವಾಗಿ ಘೋಷಿಸಲು ಸಂತೋಷವಾಗಿದೆ ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್ ನಲ್ಲಿ , ಮಾಜಿ ಕೇಂದ್ರ ಸಚಿವ ಹಾಗೂ ಖ್ಯಾತ ಗಾಯಕ ಬಾಬುಲ್ ಸುಪ್ರಿಯೋ ಅವರು ಬ್ಯಾಲಿಗುಂಗೆಯಿಂದ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗಲಿದ್ದಾರೆ. ಜೈ ಹಿಂದ್, ಜೈ ಬಾಂಗ್ಲಾ, ಜೈ ಮಾ- ಮತಿ- ಮನುಷ್! ಎಂದು ಬರೆದಿದ್ದಾರೆ.

ಇಬ್ಬರೂ ಬಿಜೆಪಿಗೆ ಸೆಡ್ಡು ಹೊಡೆದವರು

ಎರಡು ಬಾರಿ ಬಿಜೆಪಿಯಿಂದ ಲೋಕಸಭೆಗೆ ಅಸನ್ಸೋಲ್‌ನಿಂದ ಆಯ್ಕೆಯಾಗಿದ್ದ ಬಾಬುಲ್ ಸುಪ್ರಿಯೊ ಕೇಂದ್ರ ಸಚಿವರಾಗಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೆಲಸ ಮಾಡಿದ್ದರು. ಬಳಿಕ ಬಿಜೆಪಿ ವಿರುದ್ಧ ಸಿಡಿದೆದ್ದು, ಪಕ್ಷಕ್ಕೆ ರಾಜೇನಾಮೆ ನೀಡಿದ್ದರು.

31 ಜುಲೈ 2021 ರಂದು, ಬಾಬುಲ್ ಸುಪ್ರಿಯೊ ಅವರು ರಾಜಕೀಯವನ್ನು ತೊರೆಯುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. 18 ಸೆಪ್ಟೆಂಬರ್ 2021 ರಂದು ಅವರು ಅಭಿಷೇಕ್ ಬ್ಯಾನರ್ಜಿಯವರ ಉಪಸ್ಥಿತಿಯಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು . ಅವರ ರಾಜೇನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಮಾಜಿ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಸಿನ್ಹಾ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಆರಂಭಿಸಿ, ಬಳಿಕ ಬಿಜೆಪಿ ಸೇರಿ 1996 ರಿಂದ 2008 ರ ವರೆಗೆ ರಾಜ್ಯ ಸಭಾ ಸದಸ್ಯರಾಗಿದ್ದ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕೆಲಸ ಮಾಡಿದ್ದರು. 2009 ರ ಭಾರತೀಯ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಹಾರದ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದರು. 2014 ರ ಚುನಾವಣೆಯಲ್ಲೂ ಗೆದ್ದ ಅವರು ಬಳಿಕ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದರು.

6 ಏಪ್ರಿಲ್ 2019 ರಂದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಅವರ ಉಪಸ್ಥಿತಿಯಲ್ಲಿ ಸಿನ್ಹಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸೇರಿದ್ದರು, ಈಗ ಟಿಎಂಸಿ ಮೂಲಕ ಹೊಸ ರಾಜಕೀಯ ಭವಿಷ್ಯ ಕಂಡು ಕೊಳ್ಳಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.