![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 18, 2021, 1:52 PM IST
ವಿಜಯಪುರ : ಹಿಂದುತ್ವ ಹಾಗೂ ರಾಷ್ಟ್ರೀಯ ಕಲ್ಪನೆಯ ಶಿವಸೇನೆ ಇದೀಗ ಒಂದು ಭಾಷೆಗೆ ಸೀಮಿತ ಆಗಿರುವುದು ದುರ್ದೈವ, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದವರಿಗೆ ಕ್ಷಮೆ ಇಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶನಿವಾರ ಕಿಡಿ ಕಾರಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು,ಬೆಳಗಾವಿ ನಗರದಲ್ಲಿ ಎಂಇಎಸ್ ಪುಂಡರು ಮಾಡಿರುವ ರಾಯಣ್ಣ ಮೂರ್ತಿ ದ್ವಂಸ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಬಂಧಿಸಿ, ಅವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಮಹಾನ್ ವ್ಯಕ್ತಿಗಳ ಪುತ್ಥಳಿಗಳಿಗೆ ಅವಮಾನ ಮಾಡಲಾಗುತ್ತಿದೆ. ಇದರ ಹಿಂದೆ ದೊಡ್ಡ ಗುಂಪಿದೆ. ಯಾವುದೇ ಮಹಾನ್ ವಕ್ತಿಗಳ ಪುತ್ಥಳಿಗಳಿಗೆ ಅವಮಾನ ಮಾಡಬಾರದು. ದೇಶದ್ರೋಹದ ಕೃತ್ಯ ಎಸಗುವವರ ವಿರುದ್ಧ ಸರ್ಕಾರ ಕಠಿಣ ಶಿಕ್ಷೆಯ ಕಾನೂನು ಕ್ರಮಕ್ಕೆ ಮುಂದಾಗಬೇಕು. ಕೃತ್ಯ ಎಸಗಿದ ಎಂಇಎಸ್ ಹಾಗೂ ಶಿವಸೇನೆ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಎಂಇಎಸ್ ಸೇರಿದಂತೆ ಇತರೆ ಕೆಲ ಸಂಘಟನೆಗಳಿಂದ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ. ಈ ಕುರಿತು ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.